Homeಕರ್ನಾಟಕಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ - ಪ್ರಕರಣ ಭೇದಿಸಿದ...

ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

- Advertisement -
- Advertisement -

ಇತ್ತೀಚೆಗೆ ತಮ್ಮ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಬೊಮ್ಮನ ಹಳ್ಳಿ ಶಾಸಕ ಸತೀಶ್‌ ರೆಡ್ಡಿ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಶುಕ್ರವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿ ವಾಸ್ತವಾಂಶವನ್ನು ಬಯಲಿಗೆಳೆದಿದ್ದಾರೆ. ‘ಶಾಸಕ ಸತೀಶ್‌ ರೆಡ್ಡಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೆ ಇರುವುದರಿಂದ ಸಿಟ್ಟಾಗಿದ್ದ ಆರೋಪಿಗಳು ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಸ್ವತಃ ಶಾಸಕ ಸತೀಶ್‌ ರೆಡ್ಡಿ ಅವರೇ ಮಾಡಿದ್ದರು. ಅಲ್ಲದೆ ಬಿಜೆಪಿ ಪರವಿರುವ ಸಂಘಪರಿವಾರದ ಕಾರ್ಯಕರ್ತರು ಬೇಗೂರು ಕೆರೆಯ ಶಿವನ ಪ್ರತಿಮೆಯ ವಿವಾದದ ಭಾಗವಾಗಿ ಅವರ ಕಾರಿಗೆ ಬೆಂಕಿ ಹಾಕಲಾಗಿದೆ ಎಂದು ಕೂಡಾ ಆರೋಪಿಸಿದ್ದರು. ಇದರ ಜೊತೆಗೆ ಹಲವು ಮಾಧ್ಯಮಗಳೂ ಕೋಮು ಬಣ್ಣ ಹಚ್ಚಿಯೆ ವರದಿ ಮಾಡಿದ್ದವು. ಆದರೆ ಕೊನೆಗೂ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಆದರೆ ಬಿಬಿಎಂಪಿ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಬಿಬಿಎಂಪಿಯ ಕೆಲಸವನ್ನು ಪ್ರಶ್ನಿಸಿದ್ದರು. ಪ್ರಕರಣವನ್ನು ಆಲಿಸಿದ್ದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ, ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು.

ಅಷ್ಟೇ ಅಲ್ಲದೆ, ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ. ಆದರೆ, ಕಾನೂನಾತ್ಮಕ ತೊಡಕು ಮತ್ತು ಪರಿಸರ ಸಮಸ್ಯೆಯನ್ನು ಸಂಘಪರಿವಾರದ ಕಾರ್ಯಕರ್ತರು ಕೋಮುದ್ವೇಷಕ್ಕೆ ಬಳಸಿಕೊಂಡಿದ್ದು, ಪ್ರಕರಣವನ್ನು ಕೋಮು ವಿವಾದವನ್ನಾಗಿ ಮಾಡಿದ್ದರು.

ಇದರ ಮದ್ಯೆ ಶಾಸಕ ಸತೀಶ್‌ ರೆಡ್ಡಿ ಅವರ ಕಾರಿಗೆ ಬೆಂಕಿ ಹಚ್ಚಿದ್ದು, ಇದನ್ನೂ ಬೇಗೂರು ಕೆರೆಯ ವಿವಾದಕ್ಕೆ ತಗಲುಹಾಕಿಕೊಂಡು ಪ್ರಕರಣವನ್ನು ಮತ್ತಷ್ಟು ಸಿಕ್ಕುಸಿಕ್ಕನ್ನಾಗಿ ಮಾಡಲಾಗಿತ್ತು. ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿ ವಿವಾದವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

“ಶಾಸಕ ಸತೀಶ್ ರೆಡ್ಡಿ ಶ್ರೀಮಂತರು. ನಮ್ಮಂಥ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನೂ ಆಲಿಸಲು ಅವರ ಬಳಿ ಸಮಯವಿಲ್ಲ. ಮನೆ ಬಳಿ ಹೋದರೂ ಅವರನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ. ಇದರಿಂದ ಸಿಟ್ಟಾಗಿ, ಅವರ ಕಾರುಗಳಿಗೆ ಬೆಂಕಿ ಹಚ್ಚಿದೆವು” ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸ್‌‌ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಗಾರ್ವೆಬಾವಿಪಾಳ್ಯದ ನಿವಾಸಿ ಸಾಗರ್ (19), ಬೇಗೂರಿನ ಶ್ರೀಧರ್ (20) ಹಾಗೂ ನವೀನ್ ಅಲಿಯಾಸ್ ಕಾಳಪ್ಪ (22) ಬಂಧಿತರಾಗಿದ್ದು, ಆಗಸ್ಟ್‌‌ 11 ರ ಬುಧವಾರ ತಡರಾತ್ರಿ ಸತೀಶ್ ರೆಡ್ಡಿ ಅವರ ಮನೆ ಆವರಣಕ್ಕೆ ನುಗ್ಗಿದ್ದ ಆರೋಪಿಗಳು, ಅವರ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಳಿವು ಪತ್ತೆ ಮಾಡಿ ಶುಕ್ರವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆಂದು ಪ್ರಜಾವಾಣಿ ವರದಿ ಹೇಳಿದೆ.

ಇದನ್ನೂ ಓದಿ: ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ವಿಡಿಯೊ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯಾಂಶವನ್ನು ಬಯಲಿಗೆಳೆದ ಪೊಲೀಸರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...