Homeಕರ್ನಾಟಕಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ - ಪ್ರಕರಣ ಭೇದಿಸಿದ...

ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

- Advertisement -
- Advertisement -

ಇತ್ತೀಚೆಗೆ ತಮ್ಮ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಬೊಮ್ಮನ ಹಳ್ಳಿ ಶಾಸಕ ಸತೀಶ್‌ ರೆಡ್ಡಿ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಶುಕ್ರವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿ ವಾಸ್ತವಾಂಶವನ್ನು ಬಯಲಿಗೆಳೆದಿದ್ದಾರೆ. ‘ಶಾಸಕ ಸತೀಶ್‌ ರೆಡ್ಡಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೆ ಇರುವುದರಿಂದ ಸಿಟ್ಟಾಗಿದ್ದ ಆರೋಪಿಗಳು ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಸ್ವತಃ ಶಾಸಕ ಸತೀಶ್‌ ರೆಡ್ಡಿ ಅವರೇ ಮಾಡಿದ್ದರು. ಅಲ್ಲದೆ ಬಿಜೆಪಿ ಪರವಿರುವ ಸಂಘಪರಿವಾರದ ಕಾರ್ಯಕರ್ತರು ಬೇಗೂರು ಕೆರೆಯ ಶಿವನ ಪ್ರತಿಮೆಯ ವಿವಾದದ ಭಾಗವಾಗಿ ಅವರ ಕಾರಿಗೆ ಬೆಂಕಿ ಹಾಕಲಾಗಿದೆ ಎಂದು ಕೂಡಾ ಆರೋಪಿಸಿದ್ದರು. ಇದರ ಜೊತೆಗೆ ಹಲವು ಮಾಧ್ಯಮಗಳೂ ಕೋಮು ಬಣ್ಣ ಹಚ್ಚಿಯೆ ವರದಿ ಮಾಡಿದ್ದವು. ಆದರೆ ಕೊನೆಗೂ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಆದರೆ ಬಿಬಿಎಂಪಿ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಬಿಬಿಎಂಪಿಯ ಕೆಲಸವನ್ನು ಪ್ರಶ್ನಿಸಿದ್ದರು. ಪ್ರಕರಣವನ್ನು ಆಲಿಸಿದ್ದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ, ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು.

ಅಷ್ಟೇ ಅಲ್ಲದೆ, ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ. ಆದರೆ, ಕಾನೂನಾತ್ಮಕ ತೊಡಕು ಮತ್ತು ಪರಿಸರ ಸಮಸ್ಯೆಯನ್ನು ಸಂಘಪರಿವಾರದ ಕಾರ್ಯಕರ್ತರು ಕೋಮುದ್ವೇಷಕ್ಕೆ ಬಳಸಿಕೊಂಡಿದ್ದು, ಪ್ರಕರಣವನ್ನು ಕೋಮು ವಿವಾದವನ್ನಾಗಿ ಮಾಡಿದ್ದರು.

ಇದರ ಮದ್ಯೆ ಶಾಸಕ ಸತೀಶ್‌ ರೆಡ್ಡಿ ಅವರ ಕಾರಿಗೆ ಬೆಂಕಿ ಹಚ್ಚಿದ್ದು, ಇದನ್ನೂ ಬೇಗೂರು ಕೆರೆಯ ವಿವಾದಕ್ಕೆ ತಗಲುಹಾಕಿಕೊಂಡು ಪ್ರಕರಣವನ್ನು ಮತ್ತಷ್ಟು ಸಿಕ್ಕುಸಿಕ್ಕನ್ನಾಗಿ ಮಾಡಲಾಗಿತ್ತು. ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿ ವಿವಾದವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

“ಶಾಸಕ ಸತೀಶ್ ರೆಡ್ಡಿ ಶ್ರೀಮಂತರು. ನಮ್ಮಂಥ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನೂ ಆಲಿಸಲು ಅವರ ಬಳಿ ಸಮಯವಿಲ್ಲ. ಮನೆ ಬಳಿ ಹೋದರೂ ಅವರನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ. ಇದರಿಂದ ಸಿಟ್ಟಾಗಿ, ಅವರ ಕಾರುಗಳಿಗೆ ಬೆಂಕಿ ಹಚ್ಚಿದೆವು” ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸ್‌‌ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಗಾರ್ವೆಬಾವಿಪಾಳ್ಯದ ನಿವಾಸಿ ಸಾಗರ್ (19), ಬೇಗೂರಿನ ಶ್ರೀಧರ್ (20) ಹಾಗೂ ನವೀನ್ ಅಲಿಯಾಸ್ ಕಾಳಪ್ಪ (22) ಬಂಧಿತರಾಗಿದ್ದು, ಆಗಸ್ಟ್‌‌ 11 ರ ಬುಧವಾರ ತಡರಾತ್ರಿ ಸತೀಶ್ ರೆಡ್ಡಿ ಅವರ ಮನೆ ಆವರಣಕ್ಕೆ ನುಗ್ಗಿದ್ದ ಆರೋಪಿಗಳು, ಅವರ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಳಿವು ಪತ್ತೆ ಮಾಡಿ ಶುಕ್ರವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆಂದು ಪ್ರಜಾವಾಣಿ ವರದಿ ಹೇಳಿದೆ.

ಇದನ್ನೂ ಓದಿ: ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ವಿಡಿಯೊ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯಾಂಶವನ್ನು ಬಯಲಿಗೆಳೆದ ಪೊಲೀಸರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...