Homeಕರ್ನಾಟಕಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ - ಪ್ರಕರಣ ಭೇದಿಸಿದ...

ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

- Advertisement -
- Advertisement -

ಇತ್ತೀಚೆಗೆ ತಮ್ಮ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಬೊಮ್ಮನ ಹಳ್ಳಿ ಶಾಸಕ ಸತೀಶ್‌ ರೆಡ್ಡಿ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಶುಕ್ರವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿ ವಾಸ್ತವಾಂಶವನ್ನು ಬಯಲಿಗೆಳೆದಿದ್ದಾರೆ. ‘ಶಾಸಕ ಸತೀಶ್‌ ರೆಡ್ಡಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೆ ಇರುವುದರಿಂದ ಸಿಟ್ಟಾಗಿದ್ದ ಆರೋಪಿಗಳು ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಸ್ವತಃ ಶಾಸಕ ಸತೀಶ್‌ ರೆಡ್ಡಿ ಅವರೇ ಮಾಡಿದ್ದರು. ಅಲ್ಲದೆ ಬಿಜೆಪಿ ಪರವಿರುವ ಸಂಘಪರಿವಾರದ ಕಾರ್ಯಕರ್ತರು ಬೇಗೂರು ಕೆರೆಯ ಶಿವನ ಪ್ರತಿಮೆಯ ವಿವಾದದ ಭಾಗವಾಗಿ ಅವರ ಕಾರಿಗೆ ಬೆಂಕಿ ಹಾಕಲಾಗಿದೆ ಎಂದು ಕೂಡಾ ಆರೋಪಿಸಿದ್ದರು. ಇದರ ಜೊತೆಗೆ ಹಲವು ಮಾಧ್ಯಮಗಳೂ ಕೋಮು ಬಣ್ಣ ಹಚ್ಚಿಯೆ ವರದಿ ಮಾಡಿದ್ದವು. ಆದರೆ ಕೊನೆಗೂ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಆದರೆ ಬಿಬಿಎಂಪಿ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಬಿಬಿಎಂಪಿಯ ಕೆಲಸವನ್ನು ಪ್ರಶ್ನಿಸಿದ್ದರು. ಪ್ರಕರಣವನ್ನು ಆಲಿಸಿದ್ದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ, ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು.

ಅಷ್ಟೇ ಅಲ್ಲದೆ, ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ. ಆದರೆ, ಕಾನೂನಾತ್ಮಕ ತೊಡಕು ಮತ್ತು ಪರಿಸರ ಸಮಸ್ಯೆಯನ್ನು ಸಂಘಪರಿವಾರದ ಕಾರ್ಯಕರ್ತರು ಕೋಮುದ್ವೇಷಕ್ಕೆ ಬಳಸಿಕೊಂಡಿದ್ದು, ಪ್ರಕರಣವನ್ನು ಕೋಮು ವಿವಾದವನ್ನಾಗಿ ಮಾಡಿದ್ದರು.

ಇದರ ಮದ್ಯೆ ಶಾಸಕ ಸತೀಶ್‌ ರೆಡ್ಡಿ ಅವರ ಕಾರಿಗೆ ಬೆಂಕಿ ಹಚ್ಚಿದ್ದು, ಇದನ್ನೂ ಬೇಗೂರು ಕೆರೆಯ ವಿವಾದಕ್ಕೆ ತಗಲುಹಾಕಿಕೊಂಡು ಪ್ರಕರಣವನ್ನು ಮತ್ತಷ್ಟು ಸಿಕ್ಕುಸಿಕ್ಕನ್ನಾಗಿ ಮಾಡಲಾಗಿತ್ತು. ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿ ವಿವಾದವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

“ಶಾಸಕ ಸತೀಶ್ ರೆಡ್ಡಿ ಶ್ರೀಮಂತರು. ನಮ್ಮಂಥ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನೂ ಆಲಿಸಲು ಅವರ ಬಳಿ ಸಮಯವಿಲ್ಲ. ಮನೆ ಬಳಿ ಹೋದರೂ ಅವರನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ. ಇದರಿಂದ ಸಿಟ್ಟಾಗಿ, ಅವರ ಕಾರುಗಳಿಗೆ ಬೆಂಕಿ ಹಚ್ಚಿದೆವು” ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸ್‌‌ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಗಾರ್ವೆಬಾವಿಪಾಳ್ಯದ ನಿವಾಸಿ ಸಾಗರ್ (19), ಬೇಗೂರಿನ ಶ್ರೀಧರ್ (20) ಹಾಗೂ ನವೀನ್ ಅಲಿಯಾಸ್ ಕಾಳಪ್ಪ (22) ಬಂಧಿತರಾಗಿದ್ದು, ಆಗಸ್ಟ್‌‌ 11 ರ ಬುಧವಾರ ತಡರಾತ್ರಿ ಸತೀಶ್ ರೆಡ್ಡಿ ಅವರ ಮನೆ ಆವರಣಕ್ಕೆ ನುಗ್ಗಿದ್ದ ಆರೋಪಿಗಳು, ಅವರ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಳಿವು ಪತ್ತೆ ಮಾಡಿ ಶುಕ್ರವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆಂದು ಪ್ರಜಾವಾಣಿ ವರದಿ ಹೇಳಿದೆ.

ಇದನ್ನೂ ಓದಿ: ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ವಿಡಿಯೊ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯಾಂಶವನ್ನು ಬಯಲಿಗೆಳೆದ ಪೊಲೀಸರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....