Homeಮುಖಪುಟ2070ರ ವೇಳೆಗೆ ಭಾರತದಲ್ಲಿ ಇಂಗಾಲ ವಿಸರ್ಜನೆ ತಟಸ್ಥ; ಮೋದಿ ಭರವಸೆ

2070ರ ವೇಳೆಗೆ ಭಾರತದಲ್ಲಿ ಇಂಗಾಲ ವಿಸರ್ಜನೆ ತಟಸ್ಥ; ಮೋದಿ ಭರವಸೆ

- Advertisement -
- Advertisement -

2070ರ ವೇಳೆಗೆ ಭಾರತವು ನಿವ್ವಳ ಶೂನ್ಯ ಇಂಗಾಲ ಹೊರ ಸೂಸುವಿಕೆಯನ್ನು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗ್ಲಾಸ್ಗೋದಲ್ಲಿ ನಡೆದ ಕಾನ್ಫರೆನ್ಸ್ ಆಫ್‌ ಪಾರ್ಟೀಸ್‌26 (ಸಿಒಪಿ26) ಶೃಂಗಸಭೆಯಲ್ಲಿ ಭರವಸೆ ನೀಡಿದ್ದಾರೆ.

ಜಾಗತಿಕ ತಾಪಮಾನವನ್ನು ತಡೆಗಟ್ಟಿ ಜಗತ್ತನ್ನು ಉಳಿಸುವ ಶಂಗಸಭೆಯೆಂದೇ ಖ್ಯಾತವಾಗಿದ್ದ ಈ ಸಮಾವೇಶದಲ್ಲಿ, ಹವಾಮಾನ ಪರಿಸ್ಥಿತಿಯನ್ನು ಸುಧಾರಿಸುವ ಭರವಸೆಯನ್ನು ಭಾರತ ಜಗತ್ತಿಗೆ ನೀಡಿದೆ. 2070ರ ವೇಳೆಗೆ ಭಾರತವು ಇಂಗಾಲವನ್ನು ತಟಸ್ಥಗೊಳಿಸುವ ಗುರಿಯನ್ನು ಹೊಂದಿದೆ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

2030ರ ವೇಳೆಗೆ ಭಾರತವು ತನ್ನ ಶಕ್ತಿಯ ಶೇ. 50ರಷ್ಟನ್ನು ನವೀಕರಿಸಬಹುದಾದ ಇಂಧನ ಮೂಲಗಳಿಂದ ಪಡೆಯಲಿದೆ. ಭಾರತವು ತನ್ನ ಇಂಗಾಲದ ಹೊರಸೂಸುವಿಕೆಯನ್ನು 2030ರವರೆಗೆ ಒಂದು ಬಿಲಿಯನ್ ಟನ್‌ಗಳಷ್ಟು ಕಡಿಮೆ ಮಾಡುತ್ತದೆ. ಭಾರತವು 2030ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನವನ್ನು ಸ್ಥಾಪಿಸಲಿದೆ ಎಂದು ತಿಳಿಸಿದ್ದಾರೆ.

ಹವಾಮಾನ ಪರಿಸ್ಥಿತಿಯನ್ನು ಸುಧಾರಿಸಲು, ಶ್ರೀಮಂತ ಅಭಿವೃದ್ಧಿ ಹೊಂದಿದ ದೇಶಗಳು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಮತ್ತು ಹೆಚ್ಚು ದುರ್ಬಲರಿಗೆ ಸಹಾಯ ಮಾಡಲು ಕನಿಷ್ಠ 1 ಟ್ರಿಲಿಯನ್ ಡಾಲರ್‌‌ ಹಣಕಾಸು ಸಹಾಯಹಸ್ತ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಕಾರ್ಬನ್ ತಡೆಯುವ ತಂತ್ರಜ್ಞಾನಗಳು ತುಂಬಾ ದುಬಾರಿಯಾಗಿವೆ. ಹೀಗಾಗಿ ಸದ್ಯಕ್ಕೆ ಕಾರ್ಯಗತಗೊಳಿಸುವುದು ಕಷ್ಟ. ಹೀಗಾಗಿ ಮುಂದಿನ 49 ವರ್ಷಗಳಲ್ಲಿ ಗುರಿ ಮುಟ್ಟುವುದಾಗಿ ಭಾರತ ಹೇಳಿದೆ.

ಭಾರತ ಹಾಗೂ ಇಂಗಾಲ ಸೂಸುವ ಇತರೆ ರಾಷ್ಟ್ರಗಳು ನಿವ್ವಳ ಶೂನ್ಯ ಕಾರ್ಬನ್‌ ಹೊರಸೂಸುವಿಕೆಯ ಗಡುವನ್ನು ತಿಳಿಸಬೇಕು ಎಂದು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಸೂಚಿಸಿದ ಒಂದು ತಿಂಗಳ ಬಳಿಕ ಭಾರತದ ಬದ್ಧತೆ ಹೊರಬಿದ್ದಿದೆ. ಕೇಂದ್ರ ಪರಿಸರ ಸಚಿವಾಲಯದ ಕಾರ್ಯದರ್ಶಿ ಆರ್.ಪಿ.ಗುಪ್ತಾ ಅವರು ಭಾರತವು ನಿವ್ವಳ-ಶೂನ್ಯ ಗುರಿಯನ್ನು ನಿಗದಿಪಡಿಸುವುದಿಲ್ಲ ಎಂದು ಹೇಳಿದ್ದರು. ಏಕೆಂದರೆ ಆ ಗುರಿಯನ್ನು ಸಾಧಿಸುವುದಕ್ಕಿಂತ ಕಡಿಮೆ ಹೊರಸೂಸುವಿಕೆಯ ಮಾರ್ಗವು ಹೆಚ್ಚು ಮುಖ್ಯವೆಂದು ಅವರು ವಾದಿಸಿದ್ದರು.

ಹವಾಮಾನ ಬದಲಾವಣೆಯ ಕುರಿತು ತಜ್ಞರ ನಿರ್ಣಾಯಕ ಸಮಿತಿ – ಯುಎನ್ ಇಂಟರ್‌ಗವರ್ನಮೆಂಟಲ್ ಪ್ಯಾನೆಲ್ ಆನ್ ಕ್ಲೈಮೇಟ್ ಚೇಂಜ್ (ಐಪಿಸಿಸಿ) 2010ರಿಂದ 2030ರ ವೇಳೆಗೆ ಜಾಗತಿಕ ಹೊರಸೂಸುವಿಕೆಗಳು 45%ರಷ್ಟು ಇಳಿಯಬೇಕು ಎಂದು ಈಗಾಗಲೇ ಹೇಳಿದೆ.


ಇದನ್ನೂ ಓದಿರಿ: ಏರುತ್ತಿರುವ ಜಾಗತಿಕ ತಾಪಮಾನ: ಈ ಶತಮಾನದ ಅಂತ್ಯದೊಳಗೆ ಮಂಗಳೂರು-ಮುಂಬೈ ಸಮುದ್ರ ಸಮಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...