Homeಮುಖಪುಟ2070ರ ವೇಳೆಗೆ ಭಾರತದಲ್ಲಿ ಇಂಗಾಲ ವಿಸರ್ಜನೆ ತಟಸ್ಥ; ಮೋದಿ ಭರವಸೆ

2070ರ ವೇಳೆಗೆ ಭಾರತದಲ್ಲಿ ಇಂಗಾಲ ವಿಸರ್ಜನೆ ತಟಸ್ಥ; ಮೋದಿ ಭರವಸೆ

- Advertisement -
- Advertisement -

2070ರ ವೇಳೆಗೆ ಭಾರತವು ನಿವ್ವಳ ಶೂನ್ಯ ಇಂಗಾಲ ಹೊರ ಸೂಸುವಿಕೆಯನ್ನು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗ್ಲಾಸ್ಗೋದಲ್ಲಿ ನಡೆದ ಕಾನ್ಫರೆನ್ಸ್ ಆಫ್‌ ಪಾರ್ಟೀಸ್‌26 (ಸಿಒಪಿ26) ಶೃಂಗಸಭೆಯಲ್ಲಿ ಭರವಸೆ ನೀಡಿದ್ದಾರೆ.

ಜಾಗತಿಕ ತಾಪಮಾನವನ್ನು ತಡೆಗಟ್ಟಿ ಜಗತ್ತನ್ನು ಉಳಿಸುವ ಶಂಗಸಭೆಯೆಂದೇ ಖ್ಯಾತವಾಗಿದ್ದ ಈ ಸಮಾವೇಶದಲ್ಲಿ, ಹವಾಮಾನ ಪರಿಸ್ಥಿತಿಯನ್ನು ಸುಧಾರಿಸುವ ಭರವಸೆಯನ್ನು ಭಾರತ ಜಗತ್ತಿಗೆ ನೀಡಿದೆ. 2070ರ ವೇಳೆಗೆ ಭಾರತವು ಇಂಗಾಲವನ್ನು ತಟಸ್ಥಗೊಳಿಸುವ ಗುರಿಯನ್ನು ಹೊಂದಿದೆ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

2030ರ ವೇಳೆಗೆ ಭಾರತವು ತನ್ನ ಶಕ್ತಿಯ ಶೇ. 50ರಷ್ಟನ್ನು ನವೀಕರಿಸಬಹುದಾದ ಇಂಧನ ಮೂಲಗಳಿಂದ ಪಡೆಯಲಿದೆ. ಭಾರತವು ತನ್ನ ಇಂಗಾಲದ ಹೊರಸೂಸುವಿಕೆಯನ್ನು 2030ರವರೆಗೆ ಒಂದು ಬಿಲಿಯನ್ ಟನ್‌ಗಳಷ್ಟು ಕಡಿಮೆ ಮಾಡುತ್ತದೆ. ಭಾರತವು 2030ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನವನ್ನು ಸ್ಥಾಪಿಸಲಿದೆ ಎಂದು ತಿಳಿಸಿದ್ದಾರೆ.

ಹವಾಮಾನ ಪರಿಸ್ಥಿತಿಯನ್ನು ಸುಧಾರಿಸಲು, ಶ್ರೀಮಂತ ಅಭಿವೃದ್ಧಿ ಹೊಂದಿದ ದೇಶಗಳು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಮತ್ತು ಹೆಚ್ಚು ದುರ್ಬಲರಿಗೆ ಸಹಾಯ ಮಾಡಲು ಕನಿಷ್ಠ 1 ಟ್ರಿಲಿಯನ್ ಡಾಲರ್‌‌ ಹಣಕಾಸು ಸಹಾಯಹಸ್ತ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಕಾರ್ಬನ್ ತಡೆಯುವ ತಂತ್ರಜ್ಞಾನಗಳು ತುಂಬಾ ದುಬಾರಿಯಾಗಿವೆ. ಹೀಗಾಗಿ ಸದ್ಯಕ್ಕೆ ಕಾರ್ಯಗತಗೊಳಿಸುವುದು ಕಷ್ಟ. ಹೀಗಾಗಿ ಮುಂದಿನ 49 ವರ್ಷಗಳಲ್ಲಿ ಗುರಿ ಮುಟ್ಟುವುದಾಗಿ ಭಾರತ ಹೇಳಿದೆ.

ಭಾರತ ಹಾಗೂ ಇಂಗಾಲ ಸೂಸುವ ಇತರೆ ರಾಷ್ಟ್ರಗಳು ನಿವ್ವಳ ಶೂನ್ಯ ಕಾರ್ಬನ್‌ ಹೊರಸೂಸುವಿಕೆಯ ಗಡುವನ್ನು ತಿಳಿಸಬೇಕು ಎಂದು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಸೂಚಿಸಿದ ಒಂದು ತಿಂಗಳ ಬಳಿಕ ಭಾರತದ ಬದ್ಧತೆ ಹೊರಬಿದ್ದಿದೆ. ಕೇಂದ್ರ ಪರಿಸರ ಸಚಿವಾಲಯದ ಕಾರ್ಯದರ್ಶಿ ಆರ್.ಪಿ.ಗುಪ್ತಾ ಅವರು ಭಾರತವು ನಿವ್ವಳ-ಶೂನ್ಯ ಗುರಿಯನ್ನು ನಿಗದಿಪಡಿಸುವುದಿಲ್ಲ ಎಂದು ಹೇಳಿದ್ದರು. ಏಕೆಂದರೆ ಆ ಗುರಿಯನ್ನು ಸಾಧಿಸುವುದಕ್ಕಿಂತ ಕಡಿಮೆ ಹೊರಸೂಸುವಿಕೆಯ ಮಾರ್ಗವು ಹೆಚ್ಚು ಮುಖ್ಯವೆಂದು ಅವರು ವಾದಿಸಿದ್ದರು.

ಹವಾಮಾನ ಬದಲಾವಣೆಯ ಕುರಿತು ತಜ್ಞರ ನಿರ್ಣಾಯಕ ಸಮಿತಿ – ಯುಎನ್ ಇಂಟರ್‌ಗವರ್ನಮೆಂಟಲ್ ಪ್ಯಾನೆಲ್ ಆನ್ ಕ್ಲೈಮೇಟ್ ಚೇಂಜ್ (ಐಪಿಸಿಸಿ) 2010ರಿಂದ 2030ರ ವೇಳೆಗೆ ಜಾಗತಿಕ ಹೊರಸೂಸುವಿಕೆಗಳು 45%ರಷ್ಟು ಇಳಿಯಬೇಕು ಎಂದು ಈಗಾಗಲೇ ಹೇಳಿದೆ.


ಇದನ್ನೂ ಓದಿರಿ: ಏರುತ್ತಿರುವ ಜಾಗತಿಕ ತಾಪಮಾನ: ಈ ಶತಮಾನದ ಅಂತ್ಯದೊಳಗೆ ಮಂಗಳೂರು-ಮುಂಬೈ ಸಮುದ್ರ ಸಮಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...