Homeಕರ್ನಾಟಕಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

ಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

- Advertisement -
- Advertisement -

ರಾಜ್ಯ ಸರಕಾರ ಪಠ್ಯದಲ್ಲಿ ಸಾಹಿತಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿತ್ತು. ಇದಕ್ಕೆ ದೇವನೂರ ಮಾಹದೇವ ಅವರೇ ಪ್ರತಿಕ್ರಿಯಿಸಿದ್ದಾರೆ.

”ಯಾವುದೇ ಪಠ್ಯಪುಸ್ತಕಕ್ಕೆ ಪುಟಗಳ ಇತಿಮಿತಿಯ ಹಿನ್ನೆಲೆಯನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಠ್ಯ ಆಯ್ಕೆ ಸಮಿತಿಯ ಅಭಿರುಚಿಯನ್ನೂ ನಾವು ಗೌರವಿಸಬೇಕು. ಇಂದಿನ ದಿನಗಳಲ್ಲಿ ನಾವು ನೋಡಬೇಕಾದ್ದು ಇಷ್ಟೆ: ಸಂವಿಧಾನ ವಿರೋಧಿಯಾದ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ಆಶಯದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು. ಬದಲಿಗೆ ಸಂವಿಧಾನದ ಆಶಯಗಳಿಗೆ ಪೂರಕವಾದ ವಿಶಾಲ ಹಿಂದೂ ಧರ್ಮಗಳ ಸಮತ್ವದ ನೋಟ ಇರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ಲೋಕದ ಎಲ್ಲಾ ಧರ್ಮ, ಪಂಥ, ಮತಗಳಲ್ಲಿ ಚಿಗುರಿರುವ ಐಕ್ಯತೆ, ಸಮಾನತೆ, ಮಾನವೀಯ ಅಂಶಗಳನ್ನೂ ನಾವು ಒಳಗೊಳ್ಳಬೇಕಾಗಿದೆ. ಜೊತೆಗೆ ಜ್ಞಾನದೊಳಕ್ಕು ಮೌಢ್ಯ ನುಸುಳುತ್ತಿರುವುದನ್ನು ಎಚ್ಚರಿಕೆಯಿಂದ ತಡೆಗಟ್ಟಬೇಕು. ಬಹುಶಃ ಇದಿಷ್ಟೆ. ಇದನ್ನು ನಾವು ನೋಡದೆ, ‘ನನಗೆ ಇಷ್ಟವಾಗುವ ಪಠ್ಯ ಇರಲಿ, ಇಷ್ಟವಾಗುವವರ ಪಠ್ಯ ಇರಲಿ ಅಥವಾ ನನಗೆ ಒಪ್ಪಿತ ಐಡಿಯಾಲಜಿ ಪಠ್ಯ ಇರಲಿ’ ಎಂದುಕೊಂಡರೆ, ಪಠ್ಯ ಪುಸ್ತಕ ರಚನೆಯೇ ಮುಗಿಯದ ಕತೆಯಾಗಿ ಬಿಡುತ್ತದೆ. ಇದನ್ನು ಎಸ್‍ಎಫ್‍ಐ ಸಂಘಟನೆಯ ಗೆಳೆಯರು ದಯವಿಟ್ಟು ಗಮನಿಸಲಿ” ಎಂದು ತಿಳಿಸಿದ್ದಾರೆ.

ಪಠ್ಯದಲ್ಲಿ ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠ ಸೇರ್ಪಡೆ ಎಸ್‌ಎಫ್‌ಐ ಒತ್ತಾಯ

ರಾಜ್ಯ ಸರಕಾರದ ಪಠ್ಯದಲ್ಲಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಬಗ್ಗೆ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ”ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ. ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ” ಎಂದು ಸಂಘಟನೆ ತಿಳಿಸಿದೆ.

”ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ ಎದೆಗೆ ಬಿದ್ದ ಅಕ್ಷರ ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ” ಎಂದು ಸಂಘಟನೆ ಹೇಳಿದೆ.

ಎದೆಗೆ ಬಿದ್ದ ಅಕ್ಷರ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ ಪಡೆದಿದ್ದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...