Homeಕರ್ನಾಟಕಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

ಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

- Advertisement -
- Advertisement -

ರಾಜ್ಯ ಸರಕಾರ ಪಠ್ಯದಲ್ಲಿ ಸಾಹಿತಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿತ್ತು. ಇದಕ್ಕೆ ದೇವನೂರ ಮಾಹದೇವ ಅವರೇ ಪ್ರತಿಕ್ರಿಯಿಸಿದ್ದಾರೆ.

”ಯಾವುದೇ ಪಠ್ಯಪುಸ್ತಕಕ್ಕೆ ಪುಟಗಳ ಇತಿಮಿತಿಯ ಹಿನ್ನೆಲೆಯನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಠ್ಯ ಆಯ್ಕೆ ಸಮಿತಿಯ ಅಭಿರುಚಿಯನ್ನೂ ನಾವು ಗೌರವಿಸಬೇಕು. ಇಂದಿನ ದಿನಗಳಲ್ಲಿ ನಾವು ನೋಡಬೇಕಾದ್ದು ಇಷ್ಟೆ: ಸಂವಿಧಾನ ವಿರೋಧಿಯಾದ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ಆಶಯದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು. ಬದಲಿಗೆ ಸಂವಿಧಾನದ ಆಶಯಗಳಿಗೆ ಪೂರಕವಾದ ವಿಶಾಲ ಹಿಂದೂ ಧರ್ಮಗಳ ಸಮತ್ವದ ನೋಟ ಇರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ಲೋಕದ ಎಲ್ಲಾ ಧರ್ಮ, ಪಂಥ, ಮತಗಳಲ್ಲಿ ಚಿಗುರಿರುವ ಐಕ್ಯತೆ, ಸಮಾನತೆ, ಮಾನವೀಯ ಅಂಶಗಳನ್ನೂ ನಾವು ಒಳಗೊಳ್ಳಬೇಕಾಗಿದೆ. ಜೊತೆಗೆ ಜ್ಞಾನದೊಳಕ್ಕು ಮೌಢ್ಯ ನುಸುಳುತ್ತಿರುವುದನ್ನು ಎಚ್ಚರಿಕೆಯಿಂದ ತಡೆಗಟ್ಟಬೇಕು. ಬಹುಶಃ ಇದಿಷ್ಟೆ. ಇದನ್ನು ನಾವು ನೋಡದೆ, ‘ನನಗೆ ಇಷ್ಟವಾಗುವ ಪಠ್ಯ ಇರಲಿ, ಇಷ್ಟವಾಗುವವರ ಪಠ್ಯ ಇರಲಿ ಅಥವಾ ನನಗೆ ಒಪ್ಪಿತ ಐಡಿಯಾಲಜಿ ಪಠ್ಯ ಇರಲಿ’ ಎಂದುಕೊಂಡರೆ, ಪಠ್ಯ ಪುಸ್ತಕ ರಚನೆಯೇ ಮುಗಿಯದ ಕತೆಯಾಗಿ ಬಿಡುತ್ತದೆ. ಇದನ್ನು ಎಸ್‍ಎಫ್‍ಐ ಸಂಘಟನೆಯ ಗೆಳೆಯರು ದಯವಿಟ್ಟು ಗಮನಿಸಲಿ” ಎಂದು ತಿಳಿಸಿದ್ದಾರೆ.

ಪಠ್ಯದಲ್ಲಿ ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠ ಸೇರ್ಪಡೆ ಎಸ್‌ಎಫ್‌ಐ ಒತ್ತಾಯ

ರಾಜ್ಯ ಸರಕಾರದ ಪಠ್ಯದಲ್ಲಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಬಗ್ಗೆ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ”ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ. ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ” ಎಂದು ಸಂಘಟನೆ ತಿಳಿಸಿದೆ.

”ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ ಎದೆಗೆ ಬಿದ್ದ ಅಕ್ಷರ ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ” ಎಂದು ಸಂಘಟನೆ ಹೇಳಿದೆ.

ಎದೆಗೆ ಬಿದ್ದ ಅಕ್ಷರ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ ಪಡೆದಿದ್ದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...