Homeಕರ್ನಾಟಕಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

ಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

- Advertisement -
- Advertisement -

ರಾಜ್ಯ ಸರಕಾರ ಪಠ್ಯದಲ್ಲಿ ಸಾಹಿತಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿತ್ತು. ಇದಕ್ಕೆ ದೇವನೂರ ಮಾಹದೇವ ಅವರೇ ಪ್ರತಿಕ್ರಿಯಿಸಿದ್ದಾರೆ.

”ಯಾವುದೇ ಪಠ್ಯಪುಸ್ತಕಕ್ಕೆ ಪುಟಗಳ ಇತಿಮಿತಿಯ ಹಿನ್ನೆಲೆಯನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಠ್ಯ ಆಯ್ಕೆ ಸಮಿತಿಯ ಅಭಿರುಚಿಯನ್ನೂ ನಾವು ಗೌರವಿಸಬೇಕು. ಇಂದಿನ ದಿನಗಳಲ್ಲಿ ನಾವು ನೋಡಬೇಕಾದ್ದು ಇಷ್ಟೆ: ಸಂವಿಧಾನ ವಿರೋಧಿಯಾದ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ಆಶಯದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು. ಬದಲಿಗೆ ಸಂವಿಧಾನದ ಆಶಯಗಳಿಗೆ ಪೂರಕವಾದ ವಿಶಾಲ ಹಿಂದೂ ಧರ್ಮಗಳ ಸಮತ್ವದ ನೋಟ ಇರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ಲೋಕದ ಎಲ್ಲಾ ಧರ್ಮ, ಪಂಥ, ಮತಗಳಲ್ಲಿ ಚಿಗುರಿರುವ ಐಕ್ಯತೆ, ಸಮಾನತೆ, ಮಾನವೀಯ ಅಂಶಗಳನ್ನೂ ನಾವು ಒಳಗೊಳ್ಳಬೇಕಾಗಿದೆ. ಜೊತೆಗೆ ಜ್ಞಾನದೊಳಕ್ಕು ಮೌಢ್ಯ ನುಸುಳುತ್ತಿರುವುದನ್ನು ಎಚ್ಚರಿಕೆಯಿಂದ ತಡೆಗಟ್ಟಬೇಕು. ಬಹುಶಃ ಇದಿಷ್ಟೆ. ಇದನ್ನು ನಾವು ನೋಡದೆ, ‘ನನಗೆ ಇಷ್ಟವಾಗುವ ಪಠ್ಯ ಇರಲಿ, ಇಷ್ಟವಾಗುವವರ ಪಠ್ಯ ಇರಲಿ ಅಥವಾ ನನಗೆ ಒಪ್ಪಿತ ಐಡಿಯಾಲಜಿ ಪಠ್ಯ ಇರಲಿ’ ಎಂದುಕೊಂಡರೆ, ಪಠ್ಯ ಪುಸ್ತಕ ರಚನೆಯೇ ಮುಗಿಯದ ಕತೆಯಾಗಿ ಬಿಡುತ್ತದೆ. ಇದನ್ನು ಎಸ್‍ಎಫ್‍ಐ ಸಂಘಟನೆಯ ಗೆಳೆಯರು ದಯವಿಟ್ಟು ಗಮನಿಸಲಿ” ಎಂದು ತಿಳಿಸಿದ್ದಾರೆ.

ಪಠ್ಯದಲ್ಲಿ ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠ ಸೇರ್ಪಡೆ ಎಸ್‌ಎಫ್‌ಐ ಒತ್ತಾಯ

ರಾಜ್ಯ ಸರಕಾರದ ಪಠ್ಯದಲ್ಲಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಬಗ್ಗೆ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ”ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ. ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ” ಎಂದು ಸಂಘಟನೆ ತಿಳಿಸಿದೆ.

”ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ ಎದೆಗೆ ಬಿದ್ದ ಅಕ್ಷರ ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ” ಎಂದು ಸಂಘಟನೆ ಹೇಳಿದೆ.

ಎದೆಗೆ ಬಿದ್ದ ಅಕ್ಷರ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ ಪಡೆದಿದ್ದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...