Homeಕರ್ನಾಟಕಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

ಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

- Advertisement -
- Advertisement -

ರಾಜ್ಯ ಸರಕಾರ ಪಠ್ಯದಲ್ಲಿ ಸಾಹಿತಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿತ್ತು. ಇದಕ್ಕೆ ದೇವನೂರ ಮಾಹದೇವ ಅವರೇ ಪ್ರತಿಕ್ರಿಯಿಸಿದ್ದಾರೆ.

”ಯಾವುದೇ ಪಠ್ಯಪುಸ್ತಕಕ್ಕೆ ಪುಟಗಳ ಇತಿಮಿತಿಯ ಹಿನ್ನೆಲೆಯನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಠ್ಯ ಆಯ್ಕೆ ಸಮಿತಿಯ ಅಭಿರುಚಿಯನ್ನೂ ನಾವು ಗೌರವಿಸಬೇಕು. ಇಂದಿನ ದಿನಗಳಲ್ಲಿ ನಾವು ನೋಡಬೇಕಾದ್ದು ಇಷ್ಟೆ: ಸಂವಿಧಾನ ವಿರೋಧಿಯಾದ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ಆಶಯದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು. ಬದಲಿಗೆ ಸಂವಿಧಾನದ ಆಶಯಗಳಿಗೆ ಪೂರಕವಾದ ವಿಶಾಲ ಹಿಂದೂ ಧರ್ಮಗಳ ಸಮತ್ವದ ನೋಟ ಇರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ಲೋಕದ ಎಲ್ಲಾ ಧರ್ಮ, ಪಂಥ, ಮತಗಳಲ್ಲಿ ಚಿಗುರಿರುವ ಐಕ್ಯತೆ, ಸಮಾನತೆ, ಮಾನವೀಯ ಅಂಶಗಳನ್ನೂ ನಾವು ಒಳಗೊಳ್ಳಬೇಕಾಗಿದೆ. ಜೊತೆಗೆ ಜ್ಞಾನದೊಳಕ್ಕು ಮೌಢ್ಯ ನುಸುಳುತ್ತಿರುವುದನ್ನು ಎಚ್ಚರಿಕೆಯಿಂದ ತಡೆಗಟ್ಟಬೇಕು. ಬಹುಶಃ ಇದಿಷ್ಟೆ. ಇದನ್ನು ನಾವು ನೋಡದೆ, ‘ನನಗೆ ಇಷ್ಟವಾಗುವ ಪಠ್ಯ ಇರಲಿ, ಇಷ್ಟವಾಗುವವರ ಪಠ್ಯ ಇರಲಿ ಅಥವಾ ನನಗೆ ಒಪ್ಪಿತ ಐಡಿಯಾಲಜಿ ಪಠ್ಯ ಇರಲಿ’ ಎಂದುಕೊಂಡರೆ, ಪಠ್ಯ ಪುಸ್ತಕ ರಚನೆಯೇ ಮುಗಿಯದ ಕತೆಯಾಗಿ ಬಿಡುತ್ತದೆ. ಇದನ್ನು ಎಸ್‍ಎಫ್‍ಐ ಸಂಘಟನೆಯ ಗೆಳೆಯರು ದಯವಿಟ್ಟು ಗಮನಿಸಲಿ” ಎಂದು ತಿಳಿಸಿದ್ದಾರೆ.

ಪಠ್ಯದಲ್ಲಿ ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠ ಸೇರ್ಪಡೆ ಎಸ್‌ಎಫ್‌ಐ ಒತ್ತಾಯ

ರಾಜ್ಯ ಸರಕಾರದ ಪಠ್ಯದಲ್ಲಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಬಗ್ಗೆ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ”ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ. ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ” ಎಂದು ಸಂಘಟನೆ ತಿಳಿಸಿದೆ.

”ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ ಎದೆಗೆ ಬಿದ್ದ ಅಕ್ಷರ ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ” ಎಂದು ಸಂಘಟನೆ ಹೇಳಿದೆ.

ಎದೆಗೆ ಬಿದ್ದ ಅಕ್ಷರ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ ಪಡೆದಿದ್ದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...