Homeಕರ್ನಾಟಕಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

ಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

- Advertisement -
- Advertisement -

ರಾಜ್ಯ ಸರಕಾರ ಪಠ್ಯದಲ್ಲಿ ಸಾಹಿತಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿತ್ತು. ಇದಕ್ಕೆ ದೇವನೂರ ಮಾಹದೇವ ಅವರೇ ಪ್ರತಿಕ್ರಿಯಿಸಿದ್ದಾರೆ.

”ಯಾವುದೇ ಪಠ್ಯಪುಸ್ತಕಕ್ಕೆ ಪುಟಗಳ ಇತಿಮಿತಿಯ ಹಿನ್ನೆಲೆಯನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಠ್ಯ ಆಯ್ಕೆ ಸಮಿತಿಯ ಅಭಿರುಚಿಯನ್ನೂ ನಾವು ಗೌರವಿಸಬೇಕು. ಇಂದಿನ ದಿನಗಳಲ್ಲಿ ನಾವು ನೋಡಬೇಕಾದ್ದು ಇಷ್ಟೆ: ಸಂವಿಧಾನ ವಿರೋಧಿಯಾದ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ಆಶಯದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು. ಬದಲಿಗೆ ಸಂವಿಧಾನದ ಆಶಯಗಳಿಗೆ ಪೂರಕವಾದ ವಿಶಾಲ ಹಿಂದೂ ಧರ್ಮಗಳ ಸಮತ್ವದ ನೋಟ ಇರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ಲೋಕದ ಎಲ್ಲಾ ಧರ್ಮ, ಪಂಥ, ಮತಗಳಲ್ಲಿ ಚಿಗುರಿರುವ ಐಕ್ಯತೆ, ಸಮಾನತೆ, ಮಾನವೀಯ ಅಂಶಗಳನ್ನೂ ನಾವು ಒಳಗೊಳ್ಳಬೇಕಾಗಿದೆ. ಜೊತೆಗೆ ಜ್ಞಾನದೊಳಕ್ಕು ಮೌಢ್ಯ ನುಸುಳುತ್ತಿರುವುದನ್ನು ಎಚ್ಚರಿಕೆಯಿಂದ ತಡೆಗಟ್ಟಬೇಕು. ಬಹುಶಃ ಇದಿಷ್ಟೆ. ಇದನ್ನು ನಾವು ನೋಡದೆ, ‘ನನಗೆ ಇಷ್ಟವಾಗುವ ಪಠ್ಯ ಇರಲಿ, ಇಷ್ಟವಾಗುವವರ ಪಠ್ಯ ಇರಲಿ ಅಥವಾ ನನಗೆ ಒಪ್ಪಿತ ಐಡಿಯಾಲಜಿ ಪಠ್ಯ ಇರಲಿ’ ಎಂದುಕೊಂಡರೆ, ಪಠ್ಯ ಪುಸ್ತಕ ರಚನೆಯೇ ಮುಗಿಯದ ಕತೆಯಾಗಿ ಬಿಡುತ್ತದೆ. ಇದನ್ನು ಎಸ್‍ಎಫ್‍ಐ ಸಂಘಟನೆಯ ಗೆಳೆಯರು ದಯವಿಟ್ಟು ಗಮನಿಸಲಿ” ಎಂದು ತಿಳಿಸಿದ್ದಾರೆ.

ಪಠ್ಯದಲ್ಲಿ ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠ ಸೇರ್ಪಡೆ ಎಸ್‌ಎಫ್‌ಐ ಒತ್ತಾಯ

ರಾಜ್ಯ ಸರಕಾರದ ಪಠ್ಯದಲ್ಲಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಬಗ್ಗೆ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ”ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ. ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ” ಎಂದು ಸಂಘಟನೆ ತಿಳಿಸಿದೆ.

”ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ ಎದೆಗೆ ಬಿದ್ದ ಅಕ್ಷರ ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ” ಎಂದು ಸಂಘಟನೆ ಹೇಳಿದೆ.

ಎದೆಗೆ ಬಿದ್ದ ಅಕ್ಷರ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ ಪಡೆದಿದ್ದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...