Homeಕರ್ನಾಟಕಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

ಪಠ್ಯದಲ್ಲಿ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು: ದೇವನೂರ ಮಹಾದೇವ

- Advertisement -
- Advertisement -

ರಾಜ್ಯ ಸರಕಾರ ಪಠ್ಯದಲ್ಲಿ ಸಾಹಿತಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿತ್ತು. ಇದಕ್ಕೆ ದೇವನೂರ ಮಾಹದೇವ ಅವರೇ ಪ್ರತಿಕ್ರಿಯಿಸಿದ್ದಾರೆ.

”ಯಾವುದೇ ಪಠ್ಯಪುಸ್ತಕಕ್ಕೆ ಪುಟಗಳ ಇತಿಮಿತಿಯ ಹಿನ್ನೆಲೆಯನ್ನೂ ನಾವು ಅರ್ಥ ಮಾಡಿಕೊಳ್ಳಬೇಕು ಹಾಗೂ ಪಠ್ಯ ಆಯ್ಕೆ ಸಮಿತಿಯ ಅಭಿರುಚಿಯನ್ನೂ ನಾವು ಗೌರವಿಸಬೇಕು. ಇಂದಿನ ದಿನಗಳಲ್ಲಿ ನಾವು ನೋಡಬೇಕಾದ್ದು ಇಷ್ಟೆ: ಸಂವಿಧಾನ ವಿರೋಧಿಯಾದ ಚಾತುರ್ವರ್ಣ ಪ್ರತಿಪಾದಿಸುವ ಹಿಂದುತ್ವದ ಆಶಯದ ವಿಷ ಇಲ್ಲದಂತೆ ನೋಡಿಕೊಳ್ಳಬೇಕು. ಬದಲಿಗೆ ಸಂವಿಧಾನದ ಆಶಯಗಳಿಗೆ ಪೂರಕವಾದ ವಿಶಾಲ ಹಿಂದೂ ಧರ್ಮಗಳ ಸಮತ್ವದ ನೋಟ ಇರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

”ಈ ಲೋಕದ ಎಲ್ಲಾ ಧರ್ಮ, ಪಂಥ, ಮತಗಳಲ್ಲಿ ಚಿಗುರಿರುವ ಐಕ್ಯತೆ, ಸಮಾನತೆ, ಮಾನವೀಯ ಅಂಶಗಳನ್ನೂ ನಾವು ಒಳಗೊಳ್ಳಬೇಕಾಗಿದೆ. ಜೊತೆಗೆ ಜ್ಞಾನದೊಳಕ್ಕು ಮೌಢ್ಯ ನುಸುಳುತ್ತಿರುವುದನ್ನು ಎಚ್ಚರಿಕೆಯಿಂದ ತಡೆಗಟ್ಟಬೇಕು. ಬಹುಶಃ ಇದಿಷ್ಟೆ. ಇದನ್ನು ನಾವು ನೋಡದೆ, ‘ನನಗೆ ಇಷ್ಟವಾಗುವ ಪಠ್ಯ ಇರಲಿ, ಇಷ್ಟವಾಗುವವರ ಪಠ್ಯ ಇರಲಿ ಅಥವಾ ನನಗೆ ಒಪ್ಪಿತ ಐಡಿಯಾಲಜಿ ಪಠ್ಯ ಇರಲಿ’ ಎಂದುಕೊಂಡರೆ, ಪಠ್ಯ ಪುಸ್ತಕ ರಚನೆಯೇ ಮುಗಿಯದ ಕತೆಯಾಗಿ ಬಿಡುತ್ತದೆ. ಇದನ್ನು ಎಸ್‍ಎಫ್‍ಐ ಸಂಘಟನೆಯ ಗೆಳೆಯರು ದಯವಿಟ್ಟು ಗಮನಿಸಲಿ” ಎಂದು ತಿಳಿಸಿದ್ದಾರೆ.

ಪಠ್ಯದಲ್ಲಿ ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠ ಸೇರ್ಪಡೆ ಎಸ್‌ಎಫ್‌ಐ ಒತ್ತಾಯ

ರಾಜ್ಯ ಸರಕಾರದ ಪಠ್ಯದಲ್ಲಿ ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಬಗ್ಗೆ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆ ಹೊರಡಿಸಿದ್ದು, ”ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ. ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ” ಎಂದು ಸಂಘಟನೆ ತಿಳಿಸಿದೆ.

”ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ ಎದೆಗೆ ಬಿದ್ದ ಅಕ್ಷರ ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ” ಎಂದು ಸಂಘಟನೆ ಹೇಳಿದೆ.

ಎದೆಗೆ ಬಿದ್ದ ಅಕ್ಷರ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ ಪಡೆದಿದ್ದರು.

ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...