HomeUncategorizedಟಿಎಂ ಕೃಷ್ಣಗೆ 'ಸಂಗೀತ ಕಲಾನಿಧಿ' ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

- Advertisement -
- Advertisement -

ಮದ್ರಾಸ್ ಮ್ಯೂಸಿಕ್ ಅಕಾಡೆಮಿಯ ಅತ್ಯುನ್ನತ ಗೌರವವಾದ ‘ಸಂಗೀತ ಕಲಾನಿಧಿ’ ಬಿರುದನ್ನು ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ನೀಡುವ ನಿರ್ಧಾರಕ್ಕೆ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ಇರುವ ಜಾತೀಯತೆ, ತಾರತಮ್ಯ ವಿರೋಧಿಸಿಕೊಂಡು ಬಂದಿರುವುದೇ ಟಿಎಂ ಕೃಷ್ಣ ಅವರಿಗೆ ಈ ಗೌರವ ಸಿಗುವುದಕ್ಕೆ ಗಾಯಕರು ಆಕ್ಷೇಪಣೆ ಸಲ್ಲಿಸಲು ಕಾರಣವಾ ಎಂಬ ಪ್ರಶ್ನೆ ಮೂಡಿದ್ದು, ಬ್ರಾಹ್ಮಣ್ಯದ ಮನಸ್ಥಿತಿಯಿಂದ ಮಾಡಿದ ವಿರೋಧ ಇದಾಗಿದೆ ಎಂದು ಹಲವರು ಟೀಕಿಸಿದ್ದಾರೆ, ಇದರ ಜೊತೆಗೆ ಇವರ ಬಹಿಷ್ಕಾರದ ಕರೆಗಳನ್ನು ಬೆಂಬಲಿಸಲು ಹಲವು ಸಂಗೀತಗಾರರು ನಿರಾಕರಿಸಿದ್ದಾರೆ.

ಮದ್ರಾಸ್ ಸಂಗೀತ ಅಕಾಡೆಮಿಯು 2024ರ ವಾರ್ಷಿಕ ಸಂಗೀತ ಅಕಾಡೆಮಿ ಕಾರ್ಯಕ್ರಮ ಆಯೋಜಿಸುತ್ತಿದೆ. ಕಾರ್ಯಕ್ರಮದಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿಯನ್ನು ಟಿಎಂ ಕೃಷ್ಣ ಅವರಿಗೆ ನೀಡುವುದಾಗಿ ಮದ್ರಾಸ್ ಸಂಗೀತ ಅಕಾಡೆಮಿಯು ಘೋಷಿಸಿದೆ.ಕರ್ನಾಟಕ ಸಂಗೀತ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ಸಂಗೀತ ಅಕಾಡೆಮಿ ಸಮ್ಮೇಳನ 2024ರಿಂದ ಹಿಂದೆ ಸರಿಯುವುದಾಗಿ ಹೇಳಿಕೊಂಡಿದ್ದಾರೆ.  ಅವರು ಕರ್ನಾಟಕ ಸಂಗೀತ ಲೋಕಕ್ಕೆ ಅಪಾರ ಹಾನಿಯನ್ನುಂಟು ಮಾಡಿದ್ದಾರೆ, ಉದ್ದೇಶಪೂರ್ವಕವಾಗಿ ಈ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ತ್ಯಾಗರಾಜ ಮತ್ತು ಎಂಎಸ್ ಸುಬ್ಬುಲಕ್ಷ್ಮಿ ಅವರನ್ನು ಅವಮಾನಿಸಿದ್ದಾರೆ. ಪೆರಿಯಾರ್‌ ಅವರನ್ನು ವೈಭವೀಕರಿಸಿದ್ದಾರೆ ಎಂದು ರಂಜನಿ ಮತ್ತು ಗಾಯತ್ರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೈದಿಕ ವಾಗ್ಮಿಯಾಗಿ ಗುರುತಿಸಿಕೊಂಡಿರುವ ದುಶ್ಯಂತ್ ಶ್ರೀಧರ್, ಸಂಗೀತ ಅಕಾಡೆಮಿ ಅಧ್ಯಕ್ಷರಿಗೆ ಪತ್ರ ಬರೆದು ಜನವರಿ 1ರಂದು ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡಿದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಹರಿಕಥಾ ನಿರೂಪಕಿ ವಿಶಾಖ ಹರಿ ಅವರು ಇನ್ಸ್ಟಾಗ್ರಾಂನಲ್ಲಿನ ತಮ್ಮ ಪೋಸ್ಟ್‌ನಲ್ಲಿ, ಈ ವರ್ಷದ ಸಂಗೀತ ಕಲಾನಿಧಿ ಪ್ರಶಸ್ತಿಗೆ ನಿಯೋಜತರು ಈ ಹಿಂದೆ ಸಾಕಷ್ಟು ದೂಷಣೆಯಲ್ಲಿ ತೊಡಗಿದ್ದಾರೆ, ಹಲವರ ಭಾವನೆಗಳನ್ನು  ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವೇಳೆ ರಾಷ್ಟ್ರ ಪ್ರಶಸ್ತಿ ವಿಜೇತೆ ಮತ್ತು ಗಾಯಕಿ ಚಿನ್ಮಯಿ ಶ್ರೀಪಾದ ಅವರು ಟಿಎಂ ಕೃಷ್ಣ ಅವರನ್ನು ಬೆಂಬಲಿಸಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ. ಅವರು ರಂಜನಿ ಮತ್ತು ಗಾಯತ್ರಿಗೆ ಪ್ರಮುಖ ಪ್ರಶ್ನೆಯನ್ನು ಕೇಳಿದ್ದಾರೆ. 2018ರಲ್ಲಿ ಕರ್ನಾಟಕ ಸಂಗೀತದ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಬಗ್ಗೆ ಮಾತನಾಡುವಾಗ ಅಂತಹ ಭಾವೋದ್ರೇಕದ ಪತ್ರವನ್ನು ನಾವು ಕಂಡಿರಲಿಲ್ಲ ಎಂದು ಹೇಳಿದ್ದು, ಪತ್ರದ ಹಿಂದೆ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ರಂಜನಿ ಗಾಯತ್ರಿ ಅವರ ಕಾರ್ಯಕ್ರಮದ ಬಹಿಷ್ಕಾರದ ಬಗ್ಗೆ ಪ್ರತಿಕ್ರಿಯಿಸಿದ ಮದ್ರಾಸ್‌ ಮ್ಯೂಸಿಕ್‌ ಅಕಾಡೆಮಿ ಅಧ್ಯಕ್ಷರಾದ ಎನ್‌ ಮುರಳಿ, ಇದು ಕೀಳು ಅಭಿರುಚಿಯಿಂದ ಬರೆದ ಪತ್ರವಾಗಿದೆ. ನೀವು ನನ್ನ ಮತ್ತು ಅಕಾಡೆಮಿಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪತ್ರವನ್ನು ನಾನು ಗಮನಿಸಿದ್ದೇನೆ. ನಿಮ್ಮ ಪತ್ರ  ವಿವೇಚನಾರಹಿತವಾಗಿರುವುದಲ್ಲದೆ, ಪತ್ರದ ಹಿಂದಿನ ಉದ್ದೇಶದ ಬಗ್ಗೆ ನನಗೆ ಸಂದೇಹವಿದೆ ಎಂದು ಹೇಳಿದ್ದಾರೆ.

ಬಿರುದು ಘೋಷಣೆ ಬೆನ್ನಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕೃಷ್ಣ,  ಮ್ಯೂಸಿಕ್ ಅಕಾಡೆಮಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಇದನ್ನು ವಿಶೇಷ ಕ್ಷಣ ಎಂದು ಬಣ್ಣಿಸಿದ್ದಾರೆ. ಮದ್ರಾಸ್‌ನ ಮ್ಯೂಸಿಕ್ ಅಕಾಡೆಮಿ 2024ಕ್ಕೆ ನನಗೆ ಸಂಗೀತ ಕಲಾನಿಧಿ ಎಂಬ ಬಿರುದನ್ನು ನೀಡಿ ಗೌರವಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಇದು ಕರ್ನಾಟಕ ಸಂಗೀತಗಾರರಿಗೆ ನೀಡುವ ಅತ್ಯುನ್ನತ ಗೌರವ ಎಂಬುದರಲ್ಲಿ ಸಂದೇಹವಿಲ್ಲ. ಈ ಕ್ಷಣದಲ್ಲಿ ನಾನು ನನ್ನ ಕುಟುಂಬ, ನನ್ನ ಗುರುಗಳು ಮತ್ತು ಸಹ-ಸಂಗೀತಗಾರರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಸಂಗೀತಗಾರರಲ್ಲದೆ  ಕೃಷ್ಣ ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ ಮತ್ತು ಪ್ರತಿಷ್ಠಿತ ಎ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕೃಷ್ಣ ಅವರು ಅಸ್ತಿತ್ವದಲ್ಲಿರುವ ಕರ್ನಾಟಕ ಸಂಗೀತ ವ್ಯವಸ್ಥೆಯಲ್ಲಿನ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ದ ಆಗಾಗ್ಗ ಧ್ವನಿಗೂಡಿಸುತ್ತಿದ್ದರು. ಇದು ಬಲಪಂಥೀಯ ಗಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ಕಾರಣಕ್ಕೆ ಕೃಷ್ಣ ಅವರಿಗೆ ಬಿರುದು ಸಿಕ್ಕಿರುವ ಕಾರ್ಯಕ್ರಮವನ್ನು ಬಲಪಂಥೀಯರು ವಿರೋಧಿಸುತ್ತಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಹಿಂದುತ್ವಾವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ, ರಂಜನಿ-ಗಾಯತ್ರಿ ಮತ್ತು ವಿಶಾಖ ಹರಿ ಅವರು 2024ರ ಸಂಗೀತ ಅಕಾಡೆಮಿ ಆಯೋಜಿಸಿದ್ದ ಸಂಗೀತ ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ, ಏಕೆಂದರೆ ಟಿ.ಎಂ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು, ಸನಾತನ ಧರ್ಮದ ಜೊತೆ ನಿಂತಿದ್ದಕ್ಕೆ ಅವರಿಗೆ ನಮನಗಳು ಎಂದು ಟ್ವೀಟ್‌ ಮಾಡಿದ್ದಾರೆ.

ರಂಜನಿ ಗಾಯತ್ರಿ ಅವರು ತಮ್ಮ ಪೋಸ್ಟ್‌ನಲ್ಲಿ ಪೆರಿಯಾರ್‌ ಅವರನ್ನು ಎಳೆದು ತಂದಿದ್ದರು ಈ ಬಗ್ಗೆ  ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ, ರಾಮ್‌ ಎಂಬವರು ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಅವರು ಅಸೂಯೆ ಪಡುತ್ತಾರೆ ಮತ್ತು ಕೋಪದಿಂದ ಕುಪ್ಪಳಿಸುತ್ತಿದ್ದಾರೆ. ಪೆರಿಯಾರ್ ಮೇಲೆ ಆಕ್ರಮಣ ಮಾಡುವ ಹಳೆಯ, ಜಾತಿವಾದಿ ಮತ್ತು ದ್ವೇಷದ ತಂತ್ರವನ್ನು ಆರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡಿನ 0.1% ಕ್ಕಿಂತ ಹೆಚ್ಚು ಜನರಿಗೆ ತಿಳಿದಿಲ್ಲದ ಅಥವಾ ಕಾಳಜಿ ವಹಿಸದ ಪ್ರಶಸ್ತಿಗಾಗಿ ಪೆರಿಯಾರ್ ಅವರನ್ನು ನಿರ್ದಿಷ್ಟವಾಗಿ ತಮ್ಮ ಆಂತರಿಕ ಕದನಕ್ಕೆ ಎಳೆಯುವ ಅವರ ಆಯ್ಕೆಯು ರಾಜಕೀಯವಾಗಿದೆ. ಪೆರಿಯಾರ್ ಅವರನ್ನು ಪ್ರಚೋದಿಸುವ ಮೂಲಕ, ಅವರು ಪೆರಿಯಾರನ್ನು ದ್ವೇಷಿಸಲು ಯತ್ನಿಸುತ್ತಾರೆ. ಗಾಯಕ-ದ್ವಯರ ಈ ಹಾವಿಗಿಂತ ಕೆಟ್ಟ ನಡವಳಿಕೆಯು ಮಹಾನ್ ಪೆರಿಯಾರ್ ಅವರ ಸ್ಥಾನಕ್ಕೆ ಕುತ್ತು ತರುವುದಿಲ್ಲ. ಆದರೆ ಇದು ಚುನಾವಣೆಗೆ ಮುಂಚಿತವಾಗಿ ಬ್ರಾಹ್ಮಣರಲ್ಲಿ ಹೆಚ್ಚು ಜಾತೀಯತೆ ಮತ್ತು ದ್ವೇಷವನ್ನು ಉಂಟುಮಾಡುತ್ತದೆ. ದೇಶವನ್ನು ಸುಧಾರಿಸಲು ಪ್ರಯತ್ನಿಸಿದವರ ವಿರುದ್ಧ ದ್ವೇಷವನ್ನು ಬ್ರಾಹ್ಮಣರು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...