HomeUncategorizedಟಿಎಂ ಕೃಷ್ಣಗೆ 'ಸಂಗೀತ ಕಲಾನಿಧಿ' ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

- Advertisement -
- Advertisement -

ಮದ್ರಾಸ್ ಮ್ಯೂಸಿಕ್ ಅಕಾಡೆಮಿಯ ಅತ್ಯುನ್ನತ ಗೌರವವಾದ ‘ಸಂಗೀತ ಕಲಾನಿಧಿ’ ಬಿರುದನ್ನು ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ನೀಡುವ ನಿರ್ಧಾರಕ್ಕೆ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ಇರುವ ಜಾತೀಯತೆ, ತಾರತಮ್ಯ ವಿರೋಧಿಸಿಕೊಂಡು ಬಂದಿರುವುದೇ ಟಿಎಂ ಕೃಷ್ಣ ಅವರಿಗೆ ಈ ಗೌರವ ಸಿಗುವುದಕ್ಕೆ ಗಾಯಕರು ಆಕ್ಷೇಪಣೆ ಸಲ್ಲಿಸಲು ಕಾರಣವಾ ಎಂಬ ಪ್ರಶ್ನೆ ಮೂಡಿದ್ದು, ಬ್ರಾಹ್ಮಣ್ಯದ ಮನಸ್ಥಿತಿಯಿಂದ ಮಾಡಿದ ವಿರೋಧ ಇದಾಗಿದೆ ಎಂದು ಹಲವರು ಟೀಕಿಸಿದ್ದಾರೆ, ಇದರ ಜೊತೆಗೆ ಇವರ ಬಹಿಷ್ಕಾರದ ಕರೆಗಳನ್ನು ಬೆಂಬಲಿಸಲು ಹಲವು ಸಂಗೀತಗಾರರು ನಿರಾಕರಿಸಿದ್ದಾರೆ.

ಮದ್ರಾಸ್ ಸಂಗೀತ ಅಕಾಡೆಮಿಯು 2024ರ ವಾರ್ಷಿಕ ಸಂಗೀತ ಅಕಾಡೆಮಿ ಕಾರ್ಯಕ್ರಮ ಆಯೋಜಿಸುತ್ತಿದೆ. ಕಾರ್ಯಕ್ರಮದಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿಯನ್ನು ಟಿಎಂ ಕೃಷ್ಣ ಅವರಿಗೆ ನೀಡುವುದಾಗಿ ಮದ್ರಾಸ್ ಸಂಗೀತ ಅಕಾಡೆಮಿಯು ಘೋಷಿಸಿದೆ.ಕರ್ನಾಟಕ ಸಂಗೀತ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ಸಂಗೀತ ಅಕಾಡೆಮಿ ಸಮ್ಮೇಳನ 2024ರಿಂದ ಹಿಂದೆ ಸರಿಯುವುದಾಗಿ ಹೇಳಿಕೊಂಡಿದ್ದಾರೆ.  ಅವರು ಕರ್ನಾಟಕ ಸಂಗೀತ ಲೋಕಕ್ಕೆ ಅಪಾರ ಹಾನಿಯನ್ನುಂಟು ಮಾಡಿದ್ದಾರೆ, ಉದ್ದೇಶಪೂರ್ವಕವಾಗಿ ಈ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ತ್ಯಾಗರಾಜ ಮತ್ತು ಎಂಎಸ್ ಸುಬ್ಬುಲಕ್ಷ್ಮಿ ಅವರನ್ನು ಅವಮಾನಿಸಿದ್ದಾರೆ. ಪೆರಿಯಾರ್‌ ಅವರನ್ನು ವೈಭವೀಕರಿಸಿದ್ದಾರೆ ಎಂದು ರಂಜನಿ ಮತ್ತು ಗಾಯತ್ರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೈದಿಕ ವಾಗ್ಮಿಯಾಗಿ ಗುರುತಿಸಿಕೊಂಡಿರುವ ದುಶ್ಯಂತ್ ಶ್ರೀಧರ್, ಸಂಗೀತ ಅಕಾಡೆಮಿ ಅಧ್ಯಕ್ಷರಿಗೆ ಪತ್ರ ಬರೆದು ಜನವರಿ 1ರಂದು ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡಿದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಹರಿಕಥಾ ನಿರೂಪಕಿ ವಿಶಾಖ ಹರಿ ಅವರು ಇನ್ಸ್ಟಾಗ್ರಾಂನಲ್ಲಿನ ತಮ್ಮ ಪೋಸ್ಟ್‌ನಲ್ಲಿ, ಈ ವರ್ಷದ ಸಂಗೀತ ಕಲಾನಿಧಿ ಪ್ರಶಸ್ತಿಗೆ ನಿಯೋಜತರು ಈ ಹಿಂದೆ ಸಾಕಷ್ಟು ದೂಷಣೆಯಲ್ಲಿ ತೊಡಗಿದ್ದಾರೆ, ಹಲವರ ಭಾವನೆಗಳನ್ನು  ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವೇಳೆ ರಾಷ್ಟ್ರ ಪ್ರಶಸ್ತಿ ವಿಜೇತೆ ಮತ್ತು ಗಾಯಕಿ ಚಿನ್ಮಯಿ ಶ್ರೀಪಾದ ಅವರು ಟಿಎಂ ಕೃಷ್ಣ ಅವರನ್ನು ಬೆಂಬಲಿಸಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ. ಅವರು ರಂಜನಿ ಮತ್ತು ಗಾಯತ್ರಿಗೆ ಪ್ರಮುಖ ಪ್ರಶ್ನೆಯನ್ನು ಕೇಳಿದ್ದಾರೆ. 2018ರಲ್ಲಿ ಕರ್ನಾಟಕ ಸಂಗೀತದ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಬಗ್ಗೆ ಮಾತನಾಡುವಾಗ ಅಂತಹ ಭಾವೋದ್ರೇಕದ ಪತ್ರವನ್ನು ನಾವು ಕಂಡಿರಲಿಲ್ಲ ಎಂದು ಹೇಳಿದ್ದು, ಪತ್ರದ ಹಿಂದೆ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ರಂಜನಿ ಗಾಯತ್ರಿ ಅವರ ಕಾರ್ಯಕ್ರಮದ ಬಹಿಷ್ಕಾರದ ಬಗ್ಗೆ ಪ್ರತಿಕ್ರಿಯಿಸಿದ ಮದ್ರಾಸ್‌ ಮ್ಯೂಸಿಕ್‌ ಅಕಾಡೆಮಿ ಅಧ್ಯಕ್ಷರಾದ ಎನ್‌ ಮುರಳಿ, ಇದು ಕೀಳು ಅಭಿರುಚಿಯಿಂದ ಬರೆದ ಪತ್ರವಾಗಿದೆ. ನೀವು ನನ್ನ ಮತ್ತು ಅಕಾಡೆಮಿಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪತ್ರವನ್ನು ನಾನು ಗಮನಿಸಿದ್ದೇನೆ. ನಿಮ್ಮ ಪತ್ರ  ವಿವೇಚನಾರಹಿತವಾಗಿರುವುದಲ್ಲದೆ, ಪತ್ರದ ಹಿಂದಿನ ಉದ್ದೇಶದ ಬಗ್ಗೆ ನನಗೆ ಸಂದೇಹವಿದೆ ಎಂದು ಹೇಳಿದ್ದಾರೆ.

ಬಿರುದು ಘೋಷಣೆ ಬೆನ್ನಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕೃಷ್ಣ,  ಮ್ಯೂಸಿಕ್ ಅಕಾಡೆಮಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಇದನ್ನು ವಿಶೇಷ ಕ್ಷಣ ಎಂದು ಬಣ್ಣಿಸಿದ್ದಾರೆ. ಮದ್ರಾಸ್‌ನ ಮ್ಯೂಸಿಕ್ ಅಕಾಡೆಮಿ 2024ಕ್ಕೆ ನನಗೆ ಸಂಗೀತ ಕಲಾನಿಧಿ ಎಂಬ ಬಿರುದನ್ನು ನೀಡಿ ಗೌರವಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಇದು ಕರ್ನಾಟಕ ಸಂಗೀತಗಾರರಿಗೆ ನೀಡುವ ಅತ್ಯುನ್ನತ ಗೌರವ ಎಂಬುದರಲ್ಲಿ ಸಂದೇಹವಿಲ್ಲ. ಈ ಕ್ಷಣದಲ್ಲಿ ನಾನು ನನ್ನ ಕುಟುಂಬ, ನನ್ನ ಗುರುಗಳು ಮತ್ತು ಸಹ-ಸಂಗೀತಗಾರರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಸಂಗೀತಗಾರರಲ್ಲದೆ  ಕೃಷ್ಣ ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ ಮತ್ತು ಪ್ರತಿಷ್ಠಿತ ಎ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕೃಷ್ಣ ಅವರು ಅಸ್ತಿತ್ವದಲ್ಲಿರುವ ಕರ್ನಾಟಕ ಸಂಗೀತ ವ್ಯವಸ್ಥೆಯಲ್ಲಿನ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ದ ಆಗಾಗ್ಗ ಧ್ವನಿಗೂಡಿಸುತ್ತಿದ್ದರು. ಇದು ಬಲಪಂಥೀಯ ಗಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ಕಾರಣಕ್ಕೆ ಕೃಷ್ಣ ಅವರಿಗೆ ಬಿರುದು ಸಿಕ್ಕಿರುವ ಕಾರ್ಯಕ್ರಮವನ್ನು ಬಲಪಂಥೀಯರು ವಿರೋಧಿಸುತ್ತಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಹಿಂದುತ್ವಾವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ, ರಂಜನಿ-ಗಾಯತ್ರಿ ಮತ್ತು ವಿಶಾಖ ಹರಿ ಅವರು 2024ರ ಸಂಗೀತ ಅಕಾಡೆಮಿ ಆಯೋಜಿಸಿದ್ದ ಸಂಗೀತ ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ, ಏಕೆಂದರೆ ಟಿ.ಎಂ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು, ಸನಾತನ ಧರ್ಮದ ಜೊತೆ ನಿಂತಿದ್ದಕ್ಕೆ ಅವರಿಗೆ ನಮನಗಳು ಎಂದು ಟ್ವೀಟ್‌ ಮಾಡಿದ್ದಾರೆ.

ರಂಜನಿ ಗಾಯತ್ರಿ ಅವರು ತಮ್ಮ ಪೋಸ್ಟ್‌ನಲ್ಲಿ ಪೆರಿಯಾರ್‌ ಅವರನ್ನು ಎಳೆದು ತಂದಿದ್ದರು ಈ ಬಗ್ಗೆ  ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ, ರಾಮ್‌ ಎಂಬವರು ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಅವರು ಅಸೂಯೆ ಪಡುತ್ತಾರೆ ಮತ್ತು ಕೋಪದಿಂದ ಕುಪ್ಪಳಿಸುತ್ತಿದ್ದಾರೆ. ಪೆರಿಯಾರ್ ಮೇಲೆ ಆಕ್ರಮಣ ಮಾಡುವ ಹಳೆಯ, ಜಾತಿವಾದಿ ಮತ್ತು ದ್ವೇಷದ ತಂತ್ರವನ್ನು ಆರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡಿನ 0.1% ಕ್ಕಿಂತ ಹೆಚ್ಚು ಜನರಿಗೆ ತಿಳಿದಿಲ್ಲದ ಅಥವಾ ಕಾಳಜಿ ವಹಿಸದ ಪ್ರಶಸ್ತಿಗಾಗಿ ಪೆರಿಯಾರ್ ಅವರನ್ನು ನಿರ್ದಿಷ್ಟವಾಗಿ ತಮ್ಮ ಆಂತರಿಕ ಕದನಕ್ಕೆ ಎಳೆಯುವ ಅವರ ಆಯ್ಕೆಯು ರಾಜಕೀಯವಾಗಿದೆ. ಪೆರಿಯಾರ್ ಅವರನ್ನು ಪ್ರಚೋದಿಸುವ ಮೂಲಕ, ಅವರು ಪೆರಿಯಾರನ್ನು ದ್ವೇಷಿಸಲು ಯತ್ನಿಸುತ್ತಾರೆ. ಗಾಯಕ-ದ್ವಯರ ಈ ಹಾವಿಗಿಂತ ಕೆಟ್ಟ ನಡವಳಿಕೆಯು ಮಹಾನ್ ಪೆರಿಯಾರ್ ಅವರ ಸ್ಥಾನಕ್ಕೆ ಕುತ್ತು ತರುವುದಿಲ್ಲ. ಆದರೆ ಇದು ಚುನಾವಣೆಗೆ ಮುಂಚಿತವಾಗಿ ಬ್ರಾಹ್ಮಣರಲ್ಲಿ ಹೆಚ್ಚು ಜಾತೀಯತೆ ಮತ್ತು ದ್ವೇಷವನ್ನು ಉಂಟುಮಾಡುತ್ತದೆ. ದೇಶವನ್ನು ಸುಧಾರಿಸಲು ಪ್ರಯತ್ನಿಸಿದವರ ವಿರುದ್ಧ ದ್ವೇಷವನ್ನು ಬ್ರಾಹ್ಮಣರು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...