HomeUncategorizedಟಿಎಂ ಕೃಷ್ಣಗೆ 'ಸಂಗೀತ ಕಲಾನಿಧಿ' ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

- Advertisement -
- Advertisement -

ಮದ್ರಾಸ್ ಮ್ಯೂಸಿಕ್ ಅಕಾಡೆಮಿಯ ಅತ್ಯುನ್ನತ ಗೌರವವಾದ ‘ಸಂಗೀತ ಕಲಾನಿಧಿ’ ಬಿರುದನ್ನು ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ನೀಡುವ ನಿರ್ಧಾರಕ್ಕೆ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ಇರುವ ಜಾತೀಯತೆ, ತಾರತಮ್ಯ ವಿರೋಧಿಸಿಕೊಂಡು ಬಂದಿರುವುದೇ ಟಿಎಂ ಕೃಷ್ಣ ಅವರಿಗೆ ಈ ಗೌರವ ಸಿಗುವುದಕ್ಕೆ ಗಾಯಕರು ಆಕ್ಷೇಪಣೆ ಸಲ್ಲಿಸಲು ಕಾರಣವಾ ಎಂಬ ಪ್ರಶ್ನೆ ಮೂಡಿದ್ದು, ಬ್ರಾಹ್ಮಣ್ಯದ ಮನಸ್ಥಿತಿಯಿಂದ ಮಾಡಿದ ವಿರೋಧ ಇದಾಗಿದೆ ಎಂದು ಹಲವರು ಟೀಕಿಸಿದ್ದಾರೆ, ಇದರ ಜೊತೆಗೆ ಇವರ ಬಹಿಷ್ಕಾರದ ಕರೆಗಳನ್ನು ಬೆಂಬಲಿಸಲು ಹಲವು ಸಂಗೀತಗಾರರು ನಿರಾಕರಿಸಿದ್ದಾರೆ.

ಮದ್ರಾಸ್ ಸಂಗೀತ ಅಕಾಡೆಮಿಯು 2024ರ ವಾರ್ಷಿಕ ಸಂಗೀತ ಅಕಾಡೆಮಿ ಕಾರ್ಯಕ್ರಮ ಆಯೋಜಿಸುತ್ತಿದೆ. ಕಾರ್ಯಕ್ರಮದಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿಯನ್ನು ಟಿಎಂ ಕೃಷ್ಣ ಅವರಿಗೆ ನೀಡುವುದಾಗಿ ಮದ್ರಾಸ್ ಸಂಗೀತ ಅಕಾಡೆಮಿಯು ಘೋಷಿಸಿದೆ.ಕರ್ನಾಟಕ ಸಂಗೀತ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ಸಂಗೀತ ಅಕಾಡೆಮಿ ಸಮ್ಮೇಳನ 2024ರಿಂದ ಹಿಂದೆ ಸರಿಯುವುದಾಗಿ ಹೇಳಿಕೊಂಡಿದ್ದಾರೆ.  ಅವರು ಕರ್ನಾಟಕ ಸಂಗೀತ ಲೋಕಕ್ಕೆ ಅಪಾರ ಹಾನಿಯನ್ನುಂಟು ಮಾಡಿದ್ದಾರೆ, ಉದ್ದೇಶಪೂರ್ವಕವಾಗಿ ಈ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ತ್ಯಾಗರಾಜ ಮತ್ತು ಎಂಎಸ್ ಸುಬ್ಬುಲಕ್ಷ್ಮಿ ಅವರನ್ನು ಅವಮಾನಿಸಿದ್ದಾರೆ. ಪೆರಿಯಾರ್‌ ಅವರನ್ನು ವೈಭವೀಕರಿಸಿದ್ದಾರೆ ಎಂದು ರಂಜನಿ ಮತ್ತು ಗಾಯತ್ರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೈದಿಕ ವಾಗ್ಮಿಯಾಗಿ ಗುರುತಿಸಿಕೊಂಡಿರುವ ದುಶ್ಯಂತ್ ಶ್ರೀಧರ್, ಸಂಗೀತ ಅಕಾಡೆಮಿ ಅಧ್ಯಕ್ಷರಿಗೆ ಪತ್ರ ಬರೆದು ಜನವರಿ 1ರಂದು ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡಿದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಹರಿಕಥಾ ನಿರೂಪಕಿ ವಿಶಾಖ ಹರಿ ಅವರು ಇನ್ಸ್ಟಾಗ್ರಾಂನಲ್ಲಿನ ತಮ್ಮ ಪೋಸ್ಟ್‌ನಲ್ಲಿ, ಈ ವರ್ಷದ ಸಂಗೀತ ಕಲಾನಿಧಿ ಪ್ರಶಸ್ತಿಗೆ ನಿಯೋಜತರು ಈ ಹಿಂದೆ ಸಾಕಷ್ಟು ದೂಷಣೆಯಲ್ಲಿ ತೊಡಗಿದ್ದಾರೆ, ಹಲವರ ಭಾವನೆಗಳನ್ನು  ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವೇಳೆ ರಾಷ್ಟ್ರ ಪ್ರಶಸ್ತಿ ವಿಜೇತೆ ಮತ್ತು ಗಾಯಕಿ ಚಿನ್ಮಯಿ ಶ್ರೀಪಾದ ಅವರು ಟಿಎಂ ಕೃಷ್ಣ ಅವರನ್ನು ಬೆಂಬಲಿಸಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ. ಅವರು ರಂಜನಿ ಮತ್ತು ಗಾಯತ್ರಿಗೆ ಪ್ರಮುಖ ಪ್ರಶ್ನೆಯನ್ನು ಕೇಳಿದ್ದಾರೆ. 2018ರಲ್ಲಿ ಕರ್ನಾಟಕ ಸಂಗೀತದ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಬಗ್ಗೆ ಮಾತನಾಡುವಾಗ ಅಂತಹ ಭಾವೋದ್ರೇಕದ ಪತ್ರವನ್ನು ನಾವು ಕಂಡಿರಲಿಲ್ಲ ಎಂದು ಹೇಳಿದ್ದು, ಪತ್ರದ ಹಿಂದೆ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ರಂಜನಿ ಗಾಯತ್ರಿ ಅವರ ಕಾರ್ಯಕ್ರಮದ ಬಹಿಷ್ಕಾರದ ಬಗ್ಗೆ ಪ್ರತಿಕ್ರಿಯಿಸಿದ ಮದ್ರಾಸ್‌ ಮ್ಯೂಸಿಕ್‌ ಅಕಾಡೆಮಿ ಅಧ್ಯಕ್ಷರಾದ ಎನ್‌ ಮುರಳಿ, ಇದು ಕೀಳು ಅಭಿರುಚಿಯಿಂದ ಬರೆದ ಪತ್ರವಾಗಿದೆ. ನೀವು ನನ್ನ ಮತ್ತು ಅಕಾಡೆಮಿಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪತ್ರವನ್ನು ನಾನು ಗಮನಿಸಿದ್ದೇನೆ. ನಿಮ್ಮ ಪತ್ರ  ವಿವೇಚನಾರಹಿತವಾಗಿರುವುದಲ್ಲದೆ, ಪತ್ರದ ಹಿಂದಿನ ಉದ್ದೇಶದ ಬಗ್ಗೆ ನನಗೆ ಸಂದೇಹವಿದೆ ಎಂದು ಹೇಳಿದ್ದಾರೆ.

ಬಿರುದು ಘೋಷಣೆ ಬೆನ್ನಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕೃಷ್ಣ,  ಮ್ಯೂಸಿಕ್ ಅಕಾಡೆಮಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಇದನ್ನು ವಿಶೇಷ ಕ್ಷಣ ಎಂದು ಬಣ್ಣಿಸಿದ್ದಾರೆ. ಮದ್ರಾಸ್‌ನ ಮ್ಯೂಸಿಕ್ ಅಕಾಡೆಮಿ 2024ಕ್ಕೆ ನನಗೆ ಸಂಗೀತ ಕಲಾನಿಧಿ ಎಂಬ ಬಿರುದನ್ನು ನೀಡಿ ಗೌರವಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಇದು ಕರ್ನಾಟಕ ಸಂಗೀತಗಾರರಿಗೆ ನೀಡುವ ಅತ್ಯುನ್ನತ ಗೌರವ ಎಂಬುದರಲ್ಲಿ ಸಂದೇಹವಿಲ್ಲ. ಈ ಕ್ಷಣದಲ್ಲಿ ನಾನು ನನ್ನ ಕುಟುಂಬ, ನನ್ನ ಗುರುಗಳು ಮತ್ತು ಸಹ-ಸಂಗೀತಗಾರರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಸಂಗೀತಗಾರರಲ್ಲದೆ  ಕೃಷ್ಣ ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ ಮತ್ತು ಪ್ರತಿಷ್ಠಿತ ಎ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕೃಷ್ಣ ಅವರು ಅಸ್ತಿತ್ವದಲ್ಲಿರುವ ಕರ್ನಾಟಕ ಸಂಗೀತ ವ್ಯವಸ್ಥೆಯಲ್ಲಿನ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ದ ಆಗಾಗ್ಗ ಧ್ವನಿಗೂಡಿಸುತ್ತಿದ್ದರು. ಇದು ಬಲಪಂಥೀಯ ಗಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ಕಾರಣಕ್ಕೆ ಕೃಷ್ಣ ಅವರಿಗೆ ಬಿರುದು ಸಿಕ್ಕಿರುವ ಕಾರ್ಯಕ್ರಮವನ್ನು ಬಲಪಂಥೀಯರು ವಿರೋಧಿಸುತ್ತಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಹಿಂದುತ್ವಾವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ, ರಂಜನಿ-ಗಾಯತ್ರಿ ಮತ್ತು ವಿಶಾಖ ಹರಿ ಅವರು 2024ರ ಸಂಗೀತ ಅಕಾಡೆಮಿ ಆಯೋಜಿಸಿದ್ದ ಸಂಗೀತ ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ, ಏಕೆಂದರೆ ಟಿ.ಎಂ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು, ಸನಾತನ ಧರ್ಮದ ಜೊತೆ ನಿಂತಿದ್ದಕ್ಕೆ ಅವರಿಗೆ ನಮನಗಳು ಎಂದು ಟ್ವೀಟ್‌ ಮಾಡಿದ್ದಾರೆ.

ರಂಜನಿ ಗಾಯತ್ರಿ ಅವರು ತಮ್ಮ ಪೋಸ್ಟ್‌ನಲ್ಲಿ ಪೆರಿಯಾರ್‌ ಅವರನ್ನು ಎಳೆದು ತಂದಿದ್ದರು ಈ ಬಗ್ಗೆ  ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ, ರಾಮ್‌ ಎಂಬವರು ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಅವರು ಅಸೂಯೆ ಪಡುತ್ತಾರೆ ಮತ್ತು ಕೋಪದಿಂದ ಕುಪ್ಪಳಿಸುತ್ತಿದ್ದಾರೆ. ಪೆರಿಯಾರ್ ಮೇಲೆ ಆಕ್ರಮಣ ಮಾಡುವ ಹಳೆಯ, ಜಾತಿವಾದಿ ಮತ್ತು ದ್ವೇಷದ ತಂತ್ರವನ್ನು ಆರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡಿನ 0.1% ಕ್ಕಿಂತ ಹೆಚ್ಚು ಜನರಿಗೆ ತಿಳಿದಿಲ್ಲದ ಅಥವಾ ಕಾಳಜಿ ವಹಿಸದ ಪ್ರಶಸ್ತಿಗಾಗಿ ಪೆರಿಯಾರ್ ಅವರನ್ನು ನಿರ್ದಿಷ್ಟವಾಗಿ ತಮ್ಮ ಆಂತರಿಕ ಕದನಕ್ಕೆ ಎಳೆಯುವ ಅವರ ಆಯ್ಕೆಯು ರಾಜಕೀಯವಾಗಿದೆ. ಪೆರಿಯಾರ್ ಅವರನ್ನು ಪ್ರಚೋದಿಸುವ ಮೂಲಕ, ಅವರು ಪೆರಿಯಾರನ್ನು ದ್ವೇಷಿಸಲು ಯತ್ನಿಸುತ್ತಾರೆ. ಗಾಯಕ-ದ್ವಯರ ಈ ಹಾವಿಗಿಂತ ಕೆಟ್ಟ ನಡವಳಿಕೆಯು ಮಹಾನ್ ಪೆರಿಯಾರ್ ಅವರ ಸ್ಥಾನಕ್ಕೆ ಕುತ್ತು ತರುವುದಿಲ್ಲ. ಆದರೆ ಇದು ಚುನಾವಣೆಗೆ ಮುಂಚಿತವಾಗಿ ಬ್ರಾಹ್ಮಣರಲ್ಲಿ ಹೆಚ್ಚು ಜಾತೀಯತೆ ಮತ್ತು ದ್ವೇಷವನ್ನು ಉಂಟುಮಾಡುತ್ತದೆ. ದೇಶವನ್ನು ಸುಧಾರಿಸಲು ಪ್ರಯತ್ನಿಸಿದವರ ವಿರುದ್ಧ ದ್ವೇಷವನ್ನು ಬ್ರಾಹ್ಮಣರು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...