HomeUncategorizedಟಿಎಂ ಕೃಷ್ಣಗೆ 'ಸಂಗೀತ ಕಲಾನಿಧಿ' ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

- Advertisement -
- Advertisement -

ಮದ್ರಾಸ್ ಮ್ಯೂಸಿಕ್ ಅಕಾಡೆಮಿಯ ಅತ್ಯುನ್ನತ ಗೌರವವಾದ ‘ಸಂಗೀತ ಕಲಾನಿಧಿ’ ಬಿರುದನ್ನು ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ನೀಡುವ ನಿರ್ಧಾರಕ್ಕೆ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ಇರುವ ಜಾತೀಯತೆ, ತಾರತಮ್ಯ ವಿರೋಧಿಸಿಕೊಂಡು ಬಂದಿರುವುದೇ ಟಿಎಂ ಕೃಷ್ಣ ಅವರಿಗೆ ಈ ಗೌರವ ಸಿಗುವುದಕ್ಕೆ ಗಾಯಕರು ಆಕ್ಷೇಪಣೆ ಸಲ್ಲಿಸಲು ಕಾರಣವಾ ಎಂಬ ಪ್ರಶ್ನೆ ಮೂಡಿದ್ದು, ಬ್ರಾಹ್ಮಣ್ಯದ ಮನಸ್ಥಿತಿಯಿಂದ ಮಾಡಿದ ವಿರೋಧ ಇದಾಗಿದೆ ಎಂದು ಹಲವರು ಟೀಕಿಸಿದ್ದಾರೆ, ಇದರ ಜೊತೆಗೆ ಇವರ ಬಹಿಷ್ಕಾರದ ಕರೆಗಳನ್ನು ಬೆಂಬಲಿಸಲು ಹಲವು ಸಂಗೀತಗಾರರು ನಿರಾಕರಿಸಿದ್ದಾರೆ.

ಮದ್ರಾಸ್ ಸಂಗೀತ ಅಕಾಡೆಮಿಯು 2024ರ ವಾರ್ಷಿಕ ಸಂಗೀತ ಅಕಾಡೆಮಿ ಕಾರ್ಯಕ್ರಮ ಆಯೋಜಿಸುತ್ತಿದೆ. ಕಾರ್ಯಕ್ರಮದಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿಯನ್ನು ಟಿಎಂ ಕೃಷ್ಣ ಅವರಿಗೆ ನೀಡುವುದಾಗಿ ಮದ್ರಾಸ್ ಸಂಗೀತ ಅಕಾಡೆಮಿಯು ಘೋಷಿಸಿದೆ.ಕರ್ನಾಟಕ ಸಂಗೀತ ಗಾಯಕರಾದ ರಂಜನಿ-ಗಾಯತ್ರಿ ಮತ್ತು ಹರಿಕಥಾ ನಿರೂಪಕ ದುಷ್ಯಂತ್ ಶ್ರೀಧರ್ ಅವರು ಸಂಗೀತ ಅಕಾಡೆಮಿ ಸಮ್ಮೇಳನ 2024ರಿಂದ ಹಿಂದೆ ಸರಿಯುವುದಾಗಿ ಹೇಳಿಕೊಂಡಿದ್ದಾರೆ.  ಅವರು ಕರ್ನಾಟಕ ಸಂಗೀತ ಲೋಕಕ್ಕೆ ಅಪಾರ ಹಾನಿಯನ್ನುಂಟು ಮಾಡಿದ್ದಾರೆ, ಉದ್ದೇಶಪೂರ್ವಕವಾಗಿ ಈ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ತ್ಯಾಗರಾಜ ಮತ್ತು ಎಂಎಸ್ ಸುಬ್ಬುಲಕ್ಷ್ಮಿ ಅವರನ್ನು ಅವಮಾನಿಸಿದ್ದಾರೆ. ಪೆರಿಯಾರ್‌ ಅವರನ್ನು ವೈಭವೀಕರಿಸಿದ್ದಾರೆ ಎಂದು ರಂಜನಿ ಮತ್ತು ಗಾಯತ್ರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವೈದಿಕ ವಾಗ್ಮಿಯಾಗಿ ಗುರುತಿಸಿಕೊಂಡಿರುವ ದುಶ್ಯಂತ್ ಶ್ರೀಧರ್, ಸಂಗೀತ ಅಕಾಡೆಮಿ ಅಧ್ಯಕ್ಷರಿಗೆ ಪತ್ರ ಬರೆದು ಜನವರಿ 1ರಂದು ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡಿದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಹರಿಕಥಾ ನಿರೂಪಕಿ ವಿಶಾಖ ಹರಿ ಅವರು ಇನ್ಸ್ಟಾಗ್ರಾಂನಲ್ಲಿನ ತಮ್ಮ ಪೋಸ್ಟ್‌ನಲ್ಲಿ, ಈ ವರ್ಷದ ಸಂಗೀತ ಕಲಾನಿಧಿ ಪ್ರಶಸ್ತಿಗೆ ನಿಯೋಜತರು ಈ ಹಿಂದೆ ಸಾಕಷ್ಟು ದೂಷಣೆಯಲ್ಲಿ ತೊಡಗಿದ್ದಾರೆ, ಹಲವರ ಭಾವನೆಗಳನ್ನು  ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವೇಳೆ ರಾಷ್ಟ್ರ ಪ್ರಶಸ್ತಿ ವಿಜೇತೆ ಮತ್ತು ಗಾಯಕಿ ಚಿನ್ಮಯಿ ಶ್ರೀಪಾದ ಅವರು ಟಿಎಂ ಕೃಷ್ಣ ಅವರನ್ನು ಬೆಂಬಲಿಸಿ ಪ್ರಶಸ್ತಿ ಪಡೆದಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ. ಅವರು ರಂಜನಿ ಮತ್ತು ಗಾಯತ್ರಿಗೆ ಪ್ರಮುಖ ಪ್ರಶ್ನೆಯನ್ನು ಕೇಳಿದ್ದಾರೆ. 2018ರಲ್ಲಿ ಕರ್ನಾಟಕ ಸಂಗೀತದ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಬಗ್ಗೆ ಮಾತನಾಡುವಾಗ ಅಂತಹ ಭಾವೋದ್ರೇಕದ ಪತ್ರವನ್ನು ನಾವು ಕಂಡಿರಲಿಲ್ಲ ಎಂದು ಹೇಳಿದ್ದು, ಪತ್ರದ ಹಿಂದೆ ದುರುದ್ದೇಶವಿದೆ ಎಂದು ಹೇಳಿದ್ದಾರೆ.

ರಂಜನಿ ಗಾಯತ್ರಿ ಅವರ ಕಾರ್ಯಕ್ರಮದ ಬಹಿಷ್ಕಾರದ ಬಗ್ಗೆ ಪ್ರತಿಕ್ರಿಯಿಸಿದ ಮದ್ರಾಸ್‌ ಮ್ಯೂಸಿಕ್‌ ಅಕಾಡೆಮಿ ಅಧ್ಯಕ್ಷರಾದ ಎನ್‌ ಮುರಳಿ, ಇದು ಕೀಳು ಅಭಿರುಚಿಯಿಂದ ಬರೆದ ಪತ್ರವಾಗಿದೆ. ನೀವು ನನ್ನ ಮತ್ತು ಅಕಾಡೆಮಿಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪತ್ರವನ್ನು ನಾನು ಗಮನಿಸಿದ್ದೇನೆ. ನಿಮ್ಮ ಪತ್ರ  ವಿವೇಚನಾರಹಿತವಾಗಿರುವುದಲ್ಲದೆ, ಪತ್ರದ ಹಿಂದಿನ ಉದ್ದೇಶದ ಬಗ್ಗೆ ನನಗೆ ಸಂದೇಹವಿದೆ ಎಂದು ಹೇಳಿದ್ದಾರೆ.

ಬಿರುದು ಘೋಷಣೆ ಬೆನ್ನಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕೃಷ್ಣ,  ಮ್ಯೂಸಿಕ್ ಅಕಾಡೆಮಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಇದನ್ನು ವಿಶೇಷ ಕ್ಷಣ ಎಂದು ಬಣ್ಣಿಸಿದ್ದಾರೆ. ಮದ್ರಾಸ್‌ನ ಮ್ಯೂಸಿಕ್ ಅಕಾಡೆಮಿ 2024ಕ್ಕೆ ನನಗೆ ಸಂಗೀತ ಕಲಾನಿಧಿ ಎಂಬ ಬಿರುದನ್ನು ನೀಡಿ ಗೌರವಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಇದು ಕರ್ನಾಟಕ ಸಂಗೀತಗಾರರಿಗೆ ನೀಡುವ ಅತ್ಯುನ್ನತ ಗೌರವ ಎಂಬುದರಲ್ಲಿ ಸಂದೇಹವಿಲ್ಲ. ಈ ಕ್ಷಣದಲ್ಲಿ ನಾನು ನನ್ನ ಕುಟುಂಬ, ನನ್ನ ಗುರುಗಳು ಮತ್ತು ಸಹ-ಸಂಗೀತಗಾರರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಸಂಗೀತಗಾರರಲ್ಲದೆ  ಕೃಷ್ಣ ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ ಮತ್ತು ಪ್ರತಿಷ್ಠಿತ ಎ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕೃಷ್ಣ ಅವರು ಅಸ್ತಿತ್ವದಲ್ಲಿರುವ ಕರ್ನಾಟಕ ಸಂಗೀತ ವ್ಯವಸ್ಥೆಯಲ್ಲಿನ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ದ ಆಗಾಗ್ಗ ಧ್ವನಿಗೂಡಿಸುತ್ತಿದ್ದರು. ಇದು ಬಲಪಂಥೀಯ ಗಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ಕಾರಣಕ್ಕೆ ಕೃಷ್ಣ ಅವರಿಗೆ ಬಿರುದು ಸಿಕ್ಕಿರುವ ಕಾರ್ಯಕ್ರಮವನ್ನು ಬಲಪಂಥೀಯರು ವಿರೋಧಿಸುತ್ತಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಹಿಂದುತ್ವಾವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ, ರಂಜನಿ-ಗಾಯತ್ರಿ ಮತ್ತು ವಿಶಾಖ ಹರಿ ಅವರು 2024ರ ಸಂಗೀತ ಅಕಾಡೆಮಿ ಆಯೋಜಿಸಿದ್ದ ಸಂಗೀತ ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ, ಏಕೆಂದರೆ ಟಿ.ಎಂ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು, ಸನಾತನ ಧರ್ಮದ ಜೊತೆ ನಿಂತಿದ್ದಕ್ಕೆ ಅವರಿಗೆ ನಮನಗಳು ಎಂದು ಟ್ವೀಟ್‌ ಮಾಡಿದ್ದಾರೆ.

ರಂಜನಿ ಗಾಯತ್ರಿ ಅವರು ತಮ್ಮ ಪೋಸ್ಟ್‌ನಲ್ಲಿ ಪೆರಿಯಾರ್‌ ಅವರನ್ನು ಎಳೆದು ತಂದಿದ್ದರು ಈ ಬಗ್ಗೆ  ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ, ರಾಮ್‌ ಎಂಬವರು ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಅವರು ಅಸೂಯೆ ಪಡುತ್ತಾರೆ ಮತ್ತು ಕೋಪದಿಂದ ಕುಪ್ಪಳಿಸುತ್ತಿದ್ದಾರೆ. ಪೆರಿಯಾರ್ ಮೇಲೆ ಆಕ್ರಮಣ ಮಾಡುವ ಹಳೆಯ, ಜಾತಿವಾದಿ ಮತ್ತು ದ್ವೇಷದ ತಂತ್ರವನ್ನು ಆರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡಿನ 0.1% ಕ್ಕಿಂತ ಹೆಚ್ಚು ಜನರಿಗೆ ತಿಳಿದಿಲ್ಲದ ಅಥವಾ ಕಾಳಜಿ ವಹಿಸದ ಪ್ರಶಸ್ತಿಗಾಗಿ ಪೆರಿಯಾರ್ ಅವರನ್ನು ನಿರ್ದಿಷ್ಟವಾಗಿ ತಮ್ಮ ಆಂತರಿಕ ಕದನಕ್ಕೆ ಎಳೆಯುವ ಅವರ ಆಯ್ಕೆಯು ರಾಜಕೀಯವಾಗಿದೆ. ಪೆರಿಯಾರ್ ಅವರನ್ನು ಪ್ರಚೋದಿಸುವ ಮೂಲಕ, ಅವರು ಪೆರಿಯಾರನ್ನು ದ್ವೇಷಿಸಲು ಯತ್ನಿಸುತ್ತಾರೆ. ಗಾಯಕ-ದ್ವಯರ ಈ ಹಾವಿಗಿಂತ ಕೆಟ್ಟ ನಡವಳಿಕೆಯು ಮಹಾನ್ ಪೆರಿಯಾರ್ ಅವರ ಸ್ಥಾನಕ್ಕೆ ಕುತ್ತು ತರುವುದಿಲ್ಲ. ಆದರೆ ಇದು ಚುನಾವಣೆಗೆ ಮುಂಚಿತವಾಗಿ ಬ್ರಾಹ್ಮಣರಲ್ಲಿ ಹೆಚ್ಚು ಜಾತೀಯತೆ ಮತ್ತು ದ್ವೇಷವನ್ನು ಉಂಟುಮಾಡುತ್ತದೆ. ದೇಶವನ್ನು ಸುಧಾರಿಸಲು ಪ್ರಯತ್ನಿಸಿದವರ ವಿರುದ್ಧ ದ್ವೇಷವನ್ನು ಬ್ರಾಹ್ಮಣರು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...