Homeಮುಖಪುಟಕಪ್ಪುಹಣ ಹೊಂದಿರುವವರಿಗೆ ರತ್ನಗಂಬಳಿ ಹಾಸಿ ನೋಟು ವಿನಿಮಯಕ್ಕೆ ಸ್ವಾಗತ: ಚಿದಂಬರಂ ಟೀಕೆ

ಕಪ್ಪುಹಣ ಹೊಂದಿರುವವರಿಗೆ ರತ್ನಗಂಬಳಿ ಹಾಸಿ ನೋಟು ವಿನಿಮಯಕ್ಕೆ ಸ್ವಾಗತ: ಚಿದಂಬರಂ ಟೀಕೆ

- Advertisement -
- Advertisement -

ಕಪ್ಪು ಹಣ ನಿಯಂತ್ರಣ ಮಾಡುತ್ತೇವೆ ಎಂದು 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ, 2016ರಲ್ಲಿ 2000 ನೋಟುಗಳನ್ನು ಚಲಾವಣೆಗೆ ತಂದಿತು. ಈ ಕ್ರಮವನ್ನು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ‘ಮೂರ್ಖತನ’ ಎಂದು ಕರೆದಿದ್ದಾರೆ.

”ಕಪ್ಪುಹಣ ಹೊಂದಿರುವವರಿಗೆ ಸುಲಭವಾಗಿ ಹಣ ಕೂಡಿಡಲು ಈ 2000 ಮುಖಬೆಲೆಯು ನೋಟುಗಳು ಸಹಾಯ ಮಾಡಿವೆ. ಅಲ್ಲದೆ, ಈಗ ಮತ್ತೆ 2000 ಮುಖಬೆಲೆಯ ನೋಟು ಬ್ಯಾನ್ ಮಾಡಿ ಆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವರಿಗೆ ‘ರತ್ನಗಂಬಳಿ ಹಾಸಿ ಸ್ವಾಗತ ಮಾಡಲಾಗಿದೆ” ಎಂದು ಚಿದಂಬರಂ ಆರೋಪಿಸಿದ್ದಾರೆ.

ಶುಕ್ರವಾರ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) 2,000 ನೋಟುಗಳನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ ಎಂದು ಅನಿರೀಕ್ಷಿತ ಘೋಷಣೆ ಮಾಡಿತು. ಈ 2000 ನೋಟುಗಳನ್ನು ಖಾತೆಗಳಿಗೆ ಜಮಾ ಮಾಡಲು ಮತ್ತು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಸಾರ್ವಜನಿಕರಿಗೆ ಸೆಪ್ಟೆಂಬರ್ 30ರವರೆಗೆ ಸಮಯಾವಕಾಶ ನೀಡಿದೆ. 2000 ನೋಟುಗಳನ್ನು ವಿತರಿಸುವುದನ್ನು ನಿಲ್ಲಿಸುವಂತೆ ಬ್ಯಾಂಕುಗಳಿಗೆ ಆರ್‌ಬಿಐ ನಿರ್ದೇಶಿಸಿತ್ತು. ಇದನ್ನು ವಿರೋಧಿಸಿ ಮಾಜಿ ವಿತ್ತ ಸಚಿವರು ಟ್ವೀಟ್ ಮಾಡಿದ್ದಾರೆ.

”2000 ನೋಟುಗಳನ್ನು ಬದಲಾಯಿಸಲು ಯಾವುದೇ ಗುರುತಿನ ಚೀಟಿ, ಪುರಾವೆಗಳ ಅಗತ್ಯವಿಲ್ಲ ಎಂದು ಬ್ಯಾಂಕ್‌ಗಳು ಸ್ಪಷ್ಟಪಡಿಸಿವೆ. ಕಪ್ಪುಹಣವನ್ನು ಬಹಿರಂಗಪಡಿಸಲು 2000 ನೋಟುಗಳನ್ನು ಹಿಂಪಡೆಯಲಾಗುತ್ತಿದೆ ಎಂಬ ಬಿಜೆಪಿಯ ವಾದ ಇಲ್ಲಿಗೆ ನೆಲಸಮವಾಗಿದೆ” ಎಂದು ಚಿದಂಬರಂ ಟೀಕಿಸಿದ್ದಾರೆ.

”ಸಾಮಾನ್ಯ ಜನರ ಬಳಿ 2000 ನೋಟುಗಳಿಲ್ಲ, ಏಕೆಂದರೆ, ದೈನಂದಿನ ಚಿಲ್ಲರೆ ವಿನಿಮಯಕ್ಕೆ ಅದು ನಿಷ್ಟ್ರಯೋಜಕ. 2016ರಲ್ಲಿ ಚಲಾವಣೆಗೆ ಬಂದಾಗಿನಿಂದ ಅವುಗಳನ್ನು ಜನಸಾಮಾನ್ಯರು ದೂರವಿಟ್ಟಿದ್ದಾರೆ” ಎಂದಿದ್ದಾರೆ.

”ಹಾಗಾದರೆ, 2000 ನೋಟುಗಳನ್ನು ಇಟ್ಟುಕೊಂಡು ಅವುಗಳನ್ನು ಯಾರು ಬಳಸಿದ್ದಾರೆ? ನಿಮಗೆ ಉತ್ತರ ತಿಳಿದಿದೆ. 2,000 ನೋಟು ಕಪ್ಪು ಹಣ ಉಳ್ಳವರಿಗೆ ತಮ್ಮ ಹಣವನ್ನು ಸುಲಭವಾಗಿ ಸಂಗ್ರಹಿಸಲು ಸಹಾಯ ಮಾಡಿದೆ” ಎಂದು ಚಿದಂಬರಂ ಹೇಳಿದ್ದಾರೆ.

”2,000 ನೋಟು ಹೊಂದಿರುವವರಿಗೆ ತಮ್ಮ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ‘ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತಿದೆ. 2016ರಲ್ಲಿ 2000 ನೋಟು ಚಲಾವಣೆಗೆ ತಂದದ್ದು ಮೂರ್ಖತನದ ಕ್ರಮವಾಗಿತ್ತು, ಕನಿಷ್ಠ ಏಳು ವರ್ಷಗಳ ನಂತರವಾದರೂ ಈ ಮೂರ್ಖ ಕ್ರಮವನ್ನು ಹಿಂತೆಗೆದುಕೊಳ್ಳುತ್ತಿರುವುದಕ್ಕೆ ಸಂತೋಷವಾಗಿದೆ” ಎಂದು ಚಿದಂಬರಂ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...