Homeಕರ್ನಾಟಕ'ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..'; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

- Advertisement -
- Advertisement -

“ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ” ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವರು, “ಮಾನ್ಯ ಛಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ!” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ ಎಂದು ಭಾವಿಸಿದ್ದೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ವಂಶಪರಂಪರೆಯ ರಾಜಕಾರಣದ ಬಗ್ಗೆ ಮಾತನಾಡಲೇಬೇಕು ಎಂದಿದ್ದರೆ ತಮ್ಮದೇ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ್ ಬೆಲ್ಲದ್ ಅವರಿಂದ ಮಾತನಾಡಲು ಶುರು ಮಾಡಲಿ, ಆ ಧೈರ್ಯ ನಾರಾಯಣಸ್ವಾಮಿಯವರಿಗಿದೆಯೇ” ಎಂದು ಪ್ರಶ್ನಿಸಿದ್ದಾರೆ.

“ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ, ದಲಿತತ್ವ ಎಂದರೆ ಸ್ವಾಭಿಮಾನ, ದಲಿತತ್ವ ಎಂದರೆ ಅನ್ಯಾಯಕ್ಕೆ ಪ್ರತಿರೋಧ, ದಲಿತತ್ವ ಎಂದರೆ ಆತ್ಮಬಲ” ಎಂದು ಹೇಳಿದ್ದಾರೆ.

“ದಲಿತತ್ವದ ಸ್ವಾಭಿಮಾನವನ್ನು ಆರ್‌ಎಸ್‌ಎಸ್‌ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು” ಎಂದು ಸಚಿವ ಪ್ರಿಯಾಂಕ್ ಅವರು ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮಾಡಿದ ಟೀಕೆ ಏನು?

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ವಿಧಾನಪರಿಷತ್ ವಿಪಕ್ಷ ನಾಯಕರ ಛಲವಾದಿ ನಾರಾಯಣಸ್ವಾಮಿ, “ಅಪ್ಪ ಮಲ್ಲಿಕಾರ್ಜುನ ಖರ್ಗೆ ಹೆಸರು ಜೊತೆಯಲ್ಲಿ ಇಲ್ಲದೇ ಇದ್ದರೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಗ್ರಾಮ ಪಂಚಾಯಿತಿ ಸದಸ್ಯರಾಗಲೂ ಅರ್ಹರಲ್ಲ” ಎಂದು ಟೀಕಿಸಿದ್ದರು.

“ಸಚಿವ ಪ್ರಿಯಾಂಕ್‌ ಅವರಿಗೆ ಮಾಡಲು ಬೇರೇನೂ ಕೆಲಸವಿಲ್ಲ. ಕೇವಲ ಸಚಿವರು ಎಂಬ ಗೌರವ ಬಿಟ್ಟರೆ ಸಮಾಜದಲ್ಲಿ ಬೇರೆನೂ ಇಲ್ಲ. ಅವರು ದಲಿತರ ಪರ ಹೋರಾಡಿಲ್ಲ. ಅಂಬೇಡ್ಕರ್‌ ಹೆಸರು ಹೇಳುತ್ತಾರೆಯೇ ಹೊರತು ದಲಿತತ್ವ ಅವರ ಕುಟುಂಬದಲ್ಲೇ ಇಲ್ಲ. ಪ್ರಿಯಾಂಕ್‌ ಅವರು ರಾಜಕಾರಣಿಯೇ ಅಲ್ಲ. ಅಪ್ಪನ ನೆರಳಲ್ಲಿ ಅಧಿಕಾರ ಅನುಭವಿಸುತ್ತಿದ್ದಾರೆ. ಅವರಿಗೆ ಯಾವ ಬದ್ಧತೆಯೂ ಇಲ್ಲ. ಅವರ ತಳಬುಡ ಎಲ್ಲಾ ನನಗೆ ಗೊತ್ತಿದೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...