Homeಕರ್ನಾಟಕ'ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..'; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

- Advertisement -
- Advertisement -

“ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ” ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವರು, “ಮಾನ್ಯ ಛಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ!” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ ಎಂದು ಭಾವಿಸಿದ್ದೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ವಂಶಪರಂಪರೆಯ ರಾಜಕಾರಣದ ಬಗ್ಗೆ ಮಾತನಾಡಲೇಬೇಕು ಎಂದಿದ್ದರೆ ತಮ್ಮದೇ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ್ ಬೆಲ್ಲದ್ ಅವರಿಂದ ಮಾತನಾಡಲು ಶುರು ಮಾಡಲಿ, ಆ ಧೈರ್ಯ ನಾರಾಯಣಸ್ವಾಮಿಯವರಿಗಿದೆಯೇ” ಎಂದು ಪ್ರಶ್ನಿಸಿದ್ದಾರೆ.

“ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ, ದಲಿತತ್ವ ಎಂದರೆ ಸ್ವಾಭಿಮಾನ, ದಲಿತತ್ವ ಎಂದರೆ ಅನ್ಯಾಯಕ್ಕೆ ಪ್ರತಿರೋಧ, ದಲಿತತ್ವ ಎಂದರೆ ಆತ್ಮಬಲ” ಎಂದು ಹೇಳಿದ್ದಾರೆ.

“ದಲಿತತ್ವದ ಸ್ವಾಭಿಮಾನವನ್ನು ಆರ್‌ಎಸ್‌ಎಸ್‌ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು” ಎಂದು ಸಚಿವ ಪ್ರಿಯಾಂಕ್ ಅವರು ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮಾಡಿದ ಟೀಕೆ ಏನು?

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ವಿಧಾನಪರಿಷತ್ ವಿಪಕ್ಷ ನಾಯಕರ ಛಲವಾದಿ ನಾರಾಯಣಸ್ವಾಮಿ, “ಅಪ್ಪ ಮಲ್ಲಿಕಾರ್ಜುನ ಖರ್ಗೆ ಹೆಸರು ಜೊತೆಯಲ್ಲಿ ಇಲ್ಲದೇ ಇದ್ದರೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಗ್ರಾಮ ಪಂಚಾಯಿತಿ ಸದಸ್ಯರಾಗಲೂ ಅರ್ಹರಲ್ಲ” ಎಂದು ಟೀಕಿಸಿದ್ದರು.

“ಸಚಿವ ಪ್ರಿಯಾಂಕ್‌ ಅವರಿಗೆ ಮಾಡಲು ಬೇರೇನೂ ಕೆಲಸವಿಲ್ಲ. ಕೇವಲ ಸಚಿವರು ಎಂಬ ಗೌರವ ಬಿಟ್ಟರೆ ಸಮಾಜದಲ್ಲಿ ಬೇರೆನೂ ಇಲ್ಲ. ಅವರು ದಲಿತರ ಪರ ಹೋರಾಡಿಲ್ಲ. ಅಂಬೇಡ್ಕರ್‌ ಹೆಸರು ಹೇಳುತ್ತಾರೆಯೇ ಹೊರತು ದಲಿತತ್ವ ಅವರ ಕುಟುಂಬದಲ್ಲೇ ಇಲ್ಲ. ಪ್ರಿಯಾಂಕ್‌ ಅವರು ರಾಜಕಾರಣಿಯೇ ಅಲ್ಲ. ಅಪ್ಪನ ನೆರಳಲ್ಲಿ ಅಧಿಕಾರ ಅನುಭವಿಸುತ್ತಿದ್ದಾರೆ. ಅವರಿಗೆ ಯಾವ ಬದ್ಧತೆಯೂ ಇಲ್ಲ. ಅವರ ತಳಬುಡ ಎಲ್ಲಾ ನನಗೆ ಗೊತ್ತಿದೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...