Homeಮುಖಪುಟಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR...

ಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR ದಾಖಲು

- Advertisement -
- Advertisement -

ಸಿಧಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿ ಟೀಕಿಸಿ ಕಾರ್ಟೂನ್ ಟ್ವೀಟ್ ಮಾಡಿರುವ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಶುಕ್ರವಾರ ಭೋಪಾಲೋನ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಗಾಯಕಿ ನೇಹಾ ಸಿಂಗ್ ಅವರ ಟ್ವೀಟ್‌ನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂದು ಹೇಳಲಾಗಿದೆ. ಎಎನ್‌ಐ ಪ್ರಕಾರ, ಆರ್‌ಎಸ್‌ಎಸ್ ಉಡುಪಿನ ವ್ಯಕ್ತಿಯೊಬ್ಬರು ಮತ್ತೋರ್ವ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಆ ಚಿತ್ರದಲ್ಲಿ ಚಿತ್ರಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೇ ಚಿತ್ರಿಸುವಂತೆ ಈ ಟ್ವೀಟ್ ಮಾಡಲಾಗಿದೆ. ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ಮುಖಂಡನು ಬುಡಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದನು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಶುಕ್ಲಾ ಅವರನ್ನು ಬಂಧಿಸಲಾಗಿದೆ.

ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಂಡನೆ ವ್ಯಕ್ತವಾಯಿತು. ಆ ಬಳಿಕ ಆರೋಪಿಯನ್ನು ಬಂಧಿಸಿ ಎನ್‌ಎಸ್‌ಸಿ ಪ್ರಕರಣ ದಾಖಲಿಸಲಾಗಿದೆ.

ಇದೀಗ ಈ ಪ್ರಕರಣವನ್ನು ಟೀಕಿಸಿ ಟ್ವೀಟ್ ಮಾಡಿರುವವರ ವಿರುದ್ಧ ರಾಜ್ಯ ಬಿಜೆಪಿ ಸಮರ ಸಾರಿದ್ದು, ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಬೀಬ್‌ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೀಶ್ ಸಿಂಗ್ ಭಡೋರಿಯಾ, ”ನಾವು ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ” ಎಂದು ಹೇಳಿದ್ದಾರೆ.

”ನಾವು ಟ್ವಿಟರ್ ಕಂಪನಿಯಿಂದ ಖಾತೆದಾರರ ಬಗ್ಗೆ ಮಾಹಿತಿಯನ್ನು ಪಡೆಯುತ್ತೇವೆ. ಈ ರೀತಿಯ ಟ್ವೀಟ್‌ನ್ನು ಬೇರೆ ಯಾವುದೇ ವ್ಯಕ್ತಿ ಹಾಕಿದ್ದಾರೆಯೇ ಎಂಬುದು ತನಿಖೆಯ ನಂತರ ಸ್ಪಷ್ಟವಾಗುತ್ತದೆ. ಆರೆಸ್ಸೆಸ್ ಮತ್ತು ಬುಡಕಟ್ಟು ಸಮುದಾಯದ ನಡುವೆ ವೈಷಮ್ಯವನ್ನು ಹುಟ್ಟುಹಾಕಿದ ಆರೋಪ ಗಾಯಕಿಯ ಮೇಲಿದೆ” ಎಂದು ಅವರು ತಿಳಿಸಿದ್ದಾರೆ.

ಇದೀಗ ಈ ಘಟನೆ ಕುರಿತು ಹೇಳಿಕೆ ನೀಡಿರುವ ಸಂತ್ರಸ್ತ ದಶಮತ್ ರಾವತ್, ”ಆರೋಪಿಯಿಂದ ತಪ್ಪಾಗಿದೆ. ಅವರಿಗೆ ತಪ್ಪಿನ ಅರಿವಾಗಿದೆ. ಅವರನ್ನು ಬಿಡುಗಡೆಗೊಳಿಸಿ” ಎಂದು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

ಏನಿದು ಘಟನೆ:

ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯನ್ನು ದಾಖಲು ಮಾಡಿದ್ದಾರೆ.

ಆರೋಪಿ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾನನ್ನು ಬಂಧಿಸಲು ಹಲವಾರು ತಂಡಗಳನ್ನು ಕಳುಹಿಸಲಾಗಿತ್ತು. ಆರೋಪಿ ತನ್ನ ಸ್ಥಳಗಳನ್ನು ಬದಲಾಯಿಸುತ್ತಿದ್ದ ಕೊನೆಗೂ ಅವರನ್ನು ಪತ್ತೆಹಚ್ಚುವಲ್ಲಿ ಮಧ್ಯಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ನಿನ್ನೆ ತಡರಾತ್ರಿ ಆತನನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಪೊಲೀಸರು, NSA ಜೊತೆಗೆ, ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು SC/ST (ದೌರ್ಜನ್ಯ ತಡೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದು ಸುಮಾರು ಮೂರು ತಿಂಗಳ ಹಿಂದಿನ ವೀಡಿಯೋ ಎನ್ನುವುದು ಗೊತ್ತಾಗಿದೆ. ಈ ವಿಚಾರ ತಿಳಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಆರೋಪಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

ವಿಪಕ್ಷಗಳಿಂದ ಟೀಕೆ: 

”ಶುಕ್ಲಾ ಅವರು ಬಿಜೆಪಿಯ ಸಿದ್ಧಿ ಶಾಸಕ ಕೇದಾರನಾಥ್ ಶುಕ್ಲಾ ಅವರ ಸಹವರ್ತಿ” ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ಮತ್ತು ಅದರ ಶಾಸಕರು ನಿರಾಕರಿಸಿದ್ದಾರೆ.

ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‌ಪಿ ವರಿಷ್ಠೆ ಮಾಯಾವತಿ, ”ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಆ ಕ್ರಿಮಿನಲ್ ವಿರುದ್ಧ ಎನ್‌ಎಸ್‌ಎ ಮಾತ್ರವಲ್ಲದೆ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರು ತಮ್ಮ ಪಕ್ಷಕ್ಕೆ ಸೇರಿದವರು ಎಂದು ಹೇಳುತ್ತಿಲ್ಲ. ಇಂತಹ ಘಟನೆಗಳು ಎಲ್ಲರಿಗೂ ನಾಚಿಕೆ ತರುತ್ತವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...