Homeಮುಖಪುಟಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR...

ಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR ದಾಖಲು

- Advertisement -
- Advertisement -

ಸಿಧಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿ ಟೀಕಿಸಿ ಕಾರ್ಟೂನ್ ಟ್ವೀಟ್ ಮಾಡಿರುವ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಶುಕ್ರವಾರ ಭೋಪಾಲೋನ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಗಾಯಕಿ ನೇಹಾ ಸಿಂಗ್ ಅವರ ಟ್ವೀಟ್‌ನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂದು ಹೇಳಲಾಗಿದೆ. ಎಎನ್‌ಐ ಪ್ರಕಾರ, ಆರ್‌ಎಸ್‌ಎಸ್ ಉಡುಪಿನ ವ್ಯಕ್ತಿಯೊಬ್ಬರು ಮತ್ತೋರ್ವ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಆ ಚಿತ್ರದಲ್ಲಿ ಚಿತ್ರಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೇ ಚಿತ್ರಿಸುವಂತೆ ಈ ಟ್ವೀಟ್ ಮಾಡಲಾಗಿದೆ. ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ಮುಖಂಡನು ಬುಡಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದನು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಶುಕ್ಲಾ ಅವರನ್ನು ಬಂಧಿಸಲಾಗಿದೆ.

ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಂಡನೆ ವ್ಯಕ್ತವಾಯಿತು. ಆ ಬಳಿಕ ಆರೋಪಿಯನ್ನು ಬಂಧಿಸಿ ಎನ್‌ಎಸ್‌ಸಿ ಪ್ರಕರಣ ದಾಖಲಿಸಲಾಗಿದೆ.

ಇದೀಗ ಈ ಪ್ರಕರಣವನ್ನು ಟೀಕಿಸಿ ಟ್ವೀಟ್ ಮಾಡಿರುವವರ ವಿರುದ್ಧ ರಾಜ್ಯ ಬಿಜೆಪಿ ಸಮರ ಸಾರಿದ್ದು, ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಬೀಬ್‌ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೀಶ್ ಸಿಂಗ್ ಭಡೋರಿಯಾ, ”ನಾವು ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ” ಎಂದು ಹೇಳಿದ್ದಾರೆ.

”ನಾವು ಟ್ವಿಟರ್ ಕಂಪನಿಯಿಂದ ಖಾತೆದಾರರ ಬಗ್ಗೆ ಮಾಹಿತಿಯನ್ನು ಪಡೆಯುತ್ತೇವೆ. ಈ ರೀತಿಯ ಟ್ವೀಟ್‌ನ್ನು ಬೇರೆ ಯಾವುದೇ ವ್ಯಕ್ತಿ ಹಾಕಿದ್ದಾರೆಯೇ ಎಂಬುದು ತನಿಖೆಯ ನಂತರ ಸ್ಪಷ್ಟವಾಗುತ್ತದೆ. ಆರೆಸ್ಸೆಸ್ ಮತ್ತು ಬುಡಕಟ್ಟು ಸಮುದಾಯದ ನಡುವೆ ವೈಷಮ್ಯವನ್ನು ಹುಟ್ಟುಹಾಕಿದ ಆರೋಪ ಗಾಯಕಿಯ ಮೇಲಿದೆ” ಎಂದು ಅವರು ತಿಳಿಸಿದ್ದಾರೆ.

ಇದೀಗ ಈ ಘಟನೆ ಕುರಿತು ಹೇಳಿಕೆ ನೀಡಿರುವ ಸಂತ್ರಸ್ತ ದಶಮತ್ ರಾವತ್, ”ಆರೋಪಿಯಿಂದ ತಪ್ಪಾಗಿದೆ. ಅವರಿಗೆ ತಪ್ಪಿನ ಅರಿವಾಗಿದೆ. ಅವರನ್ನು ಬಿಡುಗಡೆಗೊಳಿಸಿ” ಎಂದು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

ಏನಿದು ಘಟನೆ:

ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯನ್ನು ದಾಖಲು ಮಾಡಿದ್ದಾರೆ.

ಆರೋಪಿ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾನನ್ನು ಬಂಧಿಸಲು ಹಲವಾರು ತಂಡಗಳನ್ನು ಕಳುಹಿಸಲಾಗಿತ್ತು. ಆರೋಪಿ ತನ್ನ ಸ್ಥಳಗಳನ್ನು ಬದಲಾಯಿಸುತ್ತಿದ್ದ ಕೊನೆಗೂ ಅವರನ್ನು ಪತ್ತೆಹಚ್ಚುವಲ್ಲಿ ಮಧ್ಯಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ನಿನ್ನೆ ತಡರಾತ್ರಿ ಆತನನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಪೊಲೀಸರು, NSA ಜೊತೆಗೆ, ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು SC/ST (ದೌರ್ಜನ್ಯ ತಡೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದು ಸುಮಾರು ಮೂರು ತಿಂಗಳ ಹಿಂದಿನ ವೀಡಿಯೋ ಎನ್ನುವುದು ಗೊತ್ತಾಗಿದೆ. ಈ ವಿಚಾರ ತಿಳಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಆರೋಪಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

ವಿಪಕ್ಷಗಳಿಂದ ಟೀಕೆ: 

”ಶುಕ್ಲಾ ಅವರು ಬಿಜೆಪಿಯ ಸಿದ್ಧಿ ಶಾಸಕ ಕೇದಾರನಾಥ್ ಶುಕ್ಲಾ ಅವರ ಸಹವರ್ತಿ” ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ಮತ್ತು ಅದರ ಶಾಸಕರು ನಿರಾಕರಿಸಿದ್ದಾರೆ.

ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‌ಪಿ ವರಿಷ್ಠೆ ಮಾಯಾವತಿ, ”ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಆ ಕ್ರಿಮಿನಲ್ ವಿರುದ್ಧ ಎನ್‌ಎಸ್‌ಎ ಮಾತ್ರವಲ್ಲದೆ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರು ತಮ್ಮ ಪಕ್ಷಕ್ಕೆ ಸೇರಿದವರು ಎಂದು ಹೇಳುತ್ತಿಲ್ಲ. ಇಂತಹ ಘಟನೆಗಳು ಎಲ್ಲರಿಗೂ ನಾಚಿಕೆ ತರುತ್ತವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...