Homeಮುಖಪುಟಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR...

ಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR ದಾಖಲು

- Advertisement -
- Advertisement -

ಸಿಧಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿ ಟೀಕಿಸಿ ಕಾರ್ಟೂನ್ ಟ್ವೀಟ್ ಮಾಡಿರುವ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಶುಕ್ರವಾರ ಭೋಪಾಲೋನ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಗಾಯಕಿ ನೇಹಾ ಸಿಂಗ್ ಅವರ ಟ್ವೀಟ್‌ನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂದು ಹೇಳಲಾಗಿದೆ. ಎಎನ್‌ಐ ಪ್ರಕಾರ, ಆರ್‌ಎಸ್‌ಎಸ್ ಉಡುಪಿನ ವ್ಯಕ್ತಿಯೊಬ್ಬರು ಮತ್ತೋರ್ವ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಆ ಚಿತ್ರದಲ್ಲಿ ಚಿತ್ರಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೇ ಚಿತ್ರಿಸುವಂತೆ ಈ ಟ್ವೀಟ್ ಮಾಡಲಾಗಿದೆ. ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ಮುಖಂಡನು ಬುಡಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದನು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಶುಕ್ಲಾ ಅವರನ್ನು ಬಂಧಿಸಲಾಗಿದೆ.

ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಂಡನೆ ವ್ಯಕ್ತವಾಯಿತು. ಆ ಬಳಿಕ ಆರೋಪಿಯನ್ನು ಬಂಧಿಸಿ ಎನ್‌ಎಸ್‌ಸಿ ಪ್ರಕರಣ ದಾಖಲಿಸಲಾಗಿದೆ.

ಇದೀಗ ಈ ಪ್ರಕರಣವನ್ನು ಟೀಕಿಸಿ ಟ್ವೀಟ್ ಮಾಡಿರುವವರ ವಿರುದ್ಧ ರಾಜ್ಯ ಬಿಜೆಪಿ ಸಮರ ಸಾರಿದ್ದು, ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಬೀಬ್‌ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೀಶ್ ಸಿಂಗ್ ಭಡೋರಿಯಾ, ”ನಾವು ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ” ಎಂದು ಹೇಳಿದ್ದಾರೆ.

”ನಾವು ಟ್ವಿಟರ್ ಕಂಪನಿಯಿಂದ ಖಾತೆದಾರರ ಬಗ್ಗೆ ಮಾಹಿತಿಯನ್ನು ಪಡೆಯುತ್ತೇವೆ. ಈ ರೀತಿಯ ಟ್ವೀಟ್‌ನ್ನು ಬೇರೆ ಯಾವುದೇ ವ್ಯಕ್ತಿ ಹಾಕಿದ್ದಾರೆಯೇ ಎಂಬುದು ತನಿಖೆಯ ನಂತರ ಸ್ಪಷ್ಟವಾಗುತ್ತದೆ. ಆರೆಸ್ಸೆಸ್ ಮತ್ತು ಬುಡಕಟ್ಟು ಸಮುದಾಯದ ನಡುವೆ ವೈಷಮ್ಯವನ್ನು ಹುಟ್ಟುಹಾಕಿದ ಆರೋಪ ಗಾಯಕಿಯ ಮೇಲಿದೆ” ಎಂದು ಅವರು ತಿಳಿಸಿದ್ದಾರೆ.

ಇದೀಗ ಈ ಘಟನೆ ಕುರಿತು ಹೇಳಿಕೆ ನೀಡಿರುವ ಸಂತ್ರಸ್ತ ದಶಮತ್ ರಾವತ್, ”ಆರೋಪಿಯಿಂದ ತಪ್ಪಾಗಿದೆ. ಅವರಿಗೆ ತಪ್ಪಿನ ಅರಿವಾಗಿದೆ. ಅವರನ್ನು ಬಿಡುಗಡೆಗೊಳಿಸಿ” ಎಂದು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

ಏನಿದು ಘಟನೆ:

ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯನ್ನು ದಾಖಲು ಮಾಡಿದ್ದಾರೆ.

ಆರೋಪಿ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾನನ್ನು ಬಂಧಿಸಲು ಹಲವಾರು ತಂಡಗಳನ್ನು ಕಳುಹಿಸಲಾಗಿತ್ತು. ಆರೋಪಿ ತನ್ನ ಸ್ಥಳಗಳನ್ನು ಬದಲಾಯಿಸುತ್ತಿದ್ದ ಕೊನೆಗೂ ಅವರನ್ನು ಪತ್ತೆಹಚ್ಚುವಲ್ಲಿ ಮಧ್ಯಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ನಿನ್ನೆ ತಡರಾತ್ರಿ ಆತನನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಪೊಲೀಸರು, NSA ಜೊತೆಗೆ, ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು SC/ST (ದೌರ್ಜನ್ಯ ತಡೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದು ಸುಮಾರು ಮೂರು ತಿಂಗಳ ಹಿಂದಿನ ವೀಡಿಯೋ ಎನ್ನುವುದು ಗೊತ್ತಾಗಿದೆ. ಈ ವಿಚಾರ ತಿಳಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಆರೋಪಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

ವಿಪಕ್ಷಗಳಿಂದ ಟೀಕೆ: 

”ಶುಕ್ಲಾ ಅವರು ಬಿಜೆಪಿಯ ಸಿದ್ಧಿ ಶಾಸಕ ಕೇದಾರನಾಥ್ ಶುಕ್ಲಾ ಅವರ ಸಹವರ್ತಿ” ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ಮತ್ತು ಅದರ ಶಾಸಕರು ನಿರಾಕರಿಸಿದ್ದಾರೆ.

ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‌ಪಿ ವರಿಷ್ಠೆ ಮಾಯಾವತಿ, ”ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಆ ಕ್ರಿಮಿನಲ್ ವಿರುದ್ಧ ಎನ್‌ಎಸ್‌ಎ ಮಾತ್ರವಲ್ಲದೆ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರು ತಮ್ಮ ಪಕ್ಷಕ್ಕೆ ಸೇರಿದವರು ಎಂದು ಹೇಳುತ್ತಿಲ್ಲ. ಇಂತಹ ಘಟನೆಗಳು ಎಲ್ಲರಿಗೂ ನಾಚಿಕೆ ತರುತ್ತವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....