Homeಮುಖಪುಟಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

- Advertisement -
- Advertisement -

ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ ಗ್ರಾಮದ 45 ವರ್ಷದ ಮಹಿಳೆಯ ಸಾವಿನ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ಏಪ್ರಿಲ್ 22ರಂದು ಪ್ರಕರಣ ದಾಖಲಿಸಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಡಿಎಂಕೆಗೆ ಮತ ಹಾಕದ ಕಾರಣ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ಅಣ್ಣಾಮಲೈ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಹೇಳಿದರೆ, ಕೌಟುಂಬಿಕ ಕಲಹದಿಂದ ಆಕೆಯನ್ನು ಕೊಲ್ಲಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಹಂತದ ಲೋಕಸಭೆ ಚುನಾವಣೆಯ ವೇಳೆ ಶ್ರೀಮುಷ್ಣಂ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಕಿರಿಮಣಿಯಂ ಗ್ರಾಮದಲ್ಲಿ ಇಂಡಿಯಾ ಮೈತ್ರಿ ಕೂಟದ ಡಿಎಂಕೆ ಅಭ್ಯರ್ಥಿಗೆ ಮತ ಹಾಕಲಿಲ್ಲ ಎಂಬ ಕಾರಣಕ್ಕೆ ಡಿಎಂಕೆ ಕಾರ್ಯಕರ್ತರ ಗುಂಪೊಂದು ಮಹಿಳೆಯನ್ನು ಕೊಲೆ ಮಾಡಿ ಆಕೆಯ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದೆ ಎಂದು ಅಣ್ಣಾಮಲೈ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಏಪ್ರಿಲ್ 21ರಂದು ಹೇಳಲಾಗಿತ್ತು.

ಜಿಲ್ಲಾ ಪೊಲೀಸರ ಪ್ರಕಾರ, ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಮೊದಲಿನಿಂದಲೂ ದ್ವೇಷವಿತ್ತು, ಇದರ ಭಾಗವಾಗಿ ಏಪ್ರಿಲ್ 19ರಂದು ಜಗಳ ನಡೆದಿದೆ. ಜಗಳದ ಸಮಯದಲ್ಲಿ ಕಲೈಮಣಿ ಮತ್ತು ಅವರ ಸಂಬಂಧಿಕರು ಜಯಶಂಕರ್ ಮತ್ತು ಅವರ ಅತ್ತಿಗೆ ಜೆ.ಗೋಮತಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಗೋಮತಿ ಅವರಿಗೆ ಆಂತರಿಕವಾಗಿ ಗಾಯಗಳಾಗಿದೆ. ಅಂಡಿಮಡಂನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅವರನ್ನು ತಕ್ಷಣ ದಾಖಲಿಸಿದರೂ ಈ ವೇಳೆ ಅವರು ಮೃತಪಟ್ಟಿದ್ದರು.

ಕಡಲೂರು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ 10 ಜನರ ಮೇಲೆ ಕೊಲೆ ಆರೋಪ ಹೊರಿಸಿದ್ದಾರೆ, ಕಲೈಮಣಿ ಮತ್ತು ಅವರ ಪತ್ನಿ ಕೆ ದೀಪಾ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ.

ಸುಳ್ಳು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಅಣ್ಣಾಮಲೈ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ) ಮತ್ತು 505 (ಸಾರ್ವಜನಿಕ ದುಷ್ಕೃತ್ಯಕ್ಕೆ ಕಾರಣವಾಗುವ ಹೇಳಿಕೆಗಳ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ ಮಹಿಳೆಯ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಿದ್ದಕ್ಕಾಗಿ ಇತರ ಮೂವರ ವಿರುದ್ಧವೂ ಈ ಹಿಂದೆ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....