Homeಮುಖಪುಟಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಕೇಂದ್ರ ಸಚಿವ ನಾರಾಯಣ ರಾಣೆ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಿಸಿದ್ದರು. ನಂತರ ಅದನ್ನು ಶಿವಸೇನೆ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ 'ಶುದ್ಧಿ' ಮಾಡಿದ್ದಾರೆ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಆಡಳಿತದಲ್ಲಿರುವ ಶಿವಸೇನೆ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಹಿಂದೊಮ್ಮೆ ಮಿತ್ರಪಕ್ಷಗಳಾಗಿದ್ದು ಇವು ಈಗ ದಿನನಿತ್ಯ ಕಚ್ಚಾಟದಲ್ಲಿ ತೊಡಗಿವೆ. ಬಿಜೆಪಿ ಮುಖಂಡ, ಕೇಂದ್ರ ಸಚಿವ ನಾರಾಯಣ ರಾಣೆಯವರು ಶಿವಸೇನೆಯ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಿಸಿದ್ದರು. ನಂತರ ಅದನ್ನು ಶಿವಸೇನೆ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ‘ಶುದ್ಧಿ’ ಮಾಡುವ ಮೂಲಕ ಅವಮಾನಿಸಿದ್ದಾರೆ. ಇದಕ್ಕೆ ಬಿಜೆಪಿ ಕೆಂಡಕಾರಿದ್ದು ವಿವಾದ ಭುಗಿಲೆದ್ದಿದೆ.

ಬಿಜೆಪಿಯು ಜನಾರ್ಶೀವಾದ ಯಾತ್ರೆ ಮಾಡುತ್ತಿರುವುದು ಸರಿಯಷ್ಟೇ. ಆದರೆ ಮಹಾರಾಷ್ಟ್ರದಲ್ಲಿ ಅದರ ಉದ್ಘಾಟನೆಯ ಸಂದರ್ಭದಲ್ಲಿ ಭಾರೀ ಜನ ಸೇರಿದ್ದರು. ಆಗ ಕೇಂದ್ರ ಸಚಿವ ನಾರಾಯಣ ರಾಣೆಯವರು ಶಿವಸೇನೆಯ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಸ್ಕರಿಸಿ ಅಲ್ಲಿಂದಲೇ ಯಾತ್ರೆ ಆರಂಭಿಸಿದ್ದರು. ಈ ಕುರಿತು ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದೆ. ಅದೇ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತರು ಪ್ರತಿಮೆಯ ಸುತ್ತ ಗೋಮೂತ್ರ ಸಿಂಪಡಿಸಿ ಶುದ್ದಿ ಮಾಡಿದ್ದಾರೆ.

ಈ ಕ್ರಮಕ್ಕೆ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ನಾರಾಯಣ ರಾಣೆ “ನಾವು ರಾಜಕೀಯ ರ್ಯಾಲಿ ಮಾಡುತ್ತಿಲ್ಲ. ಜನರ ಕಷ್ಟಗಳನ್ನು ಅರಿತುಕೊಳ್ಳಲು ಹೋಗುತ್ತಿದ್ದೇವೆ.  ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಎಂಬುದನ್ನು ಶಿವಸೇನೆ ಮರೆಯಬಾರದು. ಇಲ್ಲಿನ ಮೈತ್ರಿ ಸರ್ಕಾರ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ನಡೆಸಿರುವ ಹಲವು ದಾಖಲೆಗಳು ನಮ್ಮಲ್ಲಿವೆ. ಅವರು ಕೇವಲ ರಾಜ್ಯದಲ್ಲಿದ್ದಾರೆ ಅಷ್ಟೇ. ನಾವು ಅವರ ಮೇಲಿದ್ದೇವೆ” ಎಂದು ಬಹಿರಂಗ ಬೆದರಿಕೆ ಹಾಕಿದ್ದಾರೆ.

ಪ್ರತಿಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, “ಶುದ್ಧೀಕರಣ”ದಲ್ಲಿ ತೊಡಗಿಸಿಕೊಂಡವರಿಗೆ ಮೂಲ ಶಿವಸೇನೆ ಅರ್ಥವಾಗುವುದಿಲ್ಲ. ಬಾಳಾಸಾಹೇಬ್ ಠಾಕ್ರೆ ಅವರನ್ನು ಬಂಧಿಸಲು ಪ್ರಯತ್ನಿಸಿದ ಜನರೊಂದಿಗೆ ಶಿವಸೇನೆ ಅಧಿಕಾರ ಹಂಚಿಕೊಳ್ಳುತ್ತಿರುವುದು ಮತ್ತು ಅವರಿಗೆ ಗೌರವ ಸಲ್ಲಿಸುತ್ತಿರುವ ಜನರ ಮೇಲೆ ದಾಳಿ ಮಾಡುವುದು ವಿಚಿತ್ರವಾಗಿದೆ. ಶುದ್ಧೀಕರಣವು ಸಂಕುಚಿತ ಮನೋಭಾವದ ಸೂಚನೆಯಾಗಿದೆ. ಇದು ಮಹಾರಾಷ್ಟ್ರದ ಸಂಸ್ಕೃತಿಯಲ್ಲ” ಎಂದಿದ್ದಾರೆ.

ಈ ಹಿಂದೆ ನಾರಾಯಣ ರಾಣೆಯವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಬಾಳಾಸಾಹೇಬ್ ಠಾಕ್ರೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದರು. ಹಾಗಾಗಿ ಶಿವಸೈನಿಕರು ಅವರ ಮೇಲೆ ಕಿಡಿಕಾರುತ್ತಿದ್ದಾರೆ. ಇನ್ನು 1992-93ರ ಗಲಭೆಯ ಆರೋಪದ ಮೇಲೆ ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಸರ್ಕಾರವು ಬಾಳಾಸಾಹೇಬ್ ಠಾಕ್ರೆ ಬಂಧಿಸಲು ಮುಂದಾಗಿತ್ತು. ಹಾಗಾಗಿ ಸದ್ಯದ ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟವನ್ನು ಬಿಜೆಪಿ ವಿರೋಧಿಸುತ್ತಿದೆ.

ಕಳೆದ ತಿಂಗಳ ಜುಲೈ 5 ರಂದು ದೇವೇಂದ್ರ ಫಡ್ನವಿಸ್ ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ‘ ಎಂಬ ಹೇಳಿಕೆ ನೀಡಿದ್ದರು. ಅದೇ ರೀತಿಯಲ್ಲಿ ಶಿವಸೇನೆಯ ಸಂಸದ ಮತ್ತು ವಕ್ತಾರ ಸಂಜಯ್ ರಾವತ್ ‘ಬಿಜೆಪಿ-ಶಿವಸೇನೆ ಸಂಬಂಧ ಅಮಿರ್ ಖಾನ್ ಮತ್ತು ಕಿರಣ್ ರಾವ್‌ ಥರ‘ ಎಂಬ ಹೇಳಿಕೆ ನೀಡಿದ್ದರು. ಒಂದು ತಿಂಗಳಲ್ಲಿಯೇ ಮತ್ತೆ ಅವರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.


ಇದನ್ನೂ ಓದಿ: ಬಿಜೆಪಿ ಶಿವಸೇನೆ ಮತ್ತು ಎನ್‌ಸಿಪಿಗೆ ಧನ್ಯವಾದ ಹೇಳಬೇಕು- ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...