Homeಮುಖಪುಟಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಕೇಂದ್ರ ಸಚಿವ ನಾರಾಯಣ ರಾಣೆ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಿಸಿದ್ದರು. ನಂತರ ಅದನ್ನು ಶಿವಸೇನೆ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ 'ಶುದ್ಧಿ' ಮಾಡಿದ್ದಾರೆ!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಆಡಳಿತದಲ್ಲಿರುವ ಶಿವಸೇನೆ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಹಿಂದೊಮ್ಮೆ ಮಿತ್ರಪಕ್ಷಗಳಾಗಿದ್ದು ಇವು ಈಗ ದಿನನಿತ್ಯ ಕಚ್ಚಾಟದಲ್ಲಿ ತೊಡಗಿವೆ. ಬಿಜೆಪಿ ಮುಖಂಡ, ಕೇಂದ್ರ ಸಚಿವ ನಾರಾಯಣ ರಾಣೆಯವರು ಶಿವಸೇನೆಯ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಿಸಿದ್ದರು. ನಂತರ ಅದನ್ನು ಶಿವಸೇನೆ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ‘ಶುದ್ಧಿ’ ಮಾಡುವ ಮೂಲಕ ಅವಮಾನಿಸಿದ್ದಾರೆ. ಇದಕ್ಕೆ ಬಿಜೆಪಿ ಕೆಂಡಕಾರಿದ್ದು ವಿವಾದ ಭುಗಿಲೆದ್ದಿದೆ.

ಬಿಜೆಪಿಯು ಜನಾರ್ಶೀವಾದ ಯಾತ್ರೆ ಮಾಡುತ್ತಿರುವುದು ಸರಿಯಷ್ಟೇ. ಆದರೆ ಮಹಾರಾಷ್ಟ್ರದಲ್ಲಿ ಅದರ ಉದ್ಘಾಟನೆಯ ಸಂದರ್ಭದಲ್ಲಿ ಭಾರೀ ಜನ ಸೇರಿದ್ದರು. ಆಗ ಕೇಂದ್ರ ಸಚಿವ ನಾರಾಯಣ ರಾಣೆಯವರು ಶಿವಸೇನೆಯ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಪ್ರತಿಮೆಗೆ ನಮಸ್ಕರಿಸಿ ಅಲ್ಲಿಂದಲೇ ಯಾತ್ರೆ ಆರಂಭಿಸಿದ್ದರು. ಈ ಕುರಿತು ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದೆ. ಅದೇ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತರು ಪ್ರತಿಮೆಯ ಸುತ್ತ ಗೋಮೂತ್ರ ಸಿಂಪಡಿಸಿ ಶುದ್ದಿ ಮಾಡಿದ್ದಾರೆ.

ಈ ಕ್ರಮಕ್ಕೆ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ನಾರಾಯಣ ರಾಣೆ “ನಾವು ರಾಜಕೀಯ ರ್ಯಾಲಿ ಮಾಡುತ್ತಿಲ್ಲ. ಜನರ ಕಷ್ಟಗಳನ್ನು ಅರಿತುಕೊಳ್ಳಲು ಹೋಗುತ್ತಿದ್ದೇವೆ.  ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಎಂಬುದನ್ನು ಶಿವಸೇನೆ ಮರೆಯಬಾರದು. ಇಲ್ಲಿನ ಮೈತ್ರಿ ಸರ್ಕಾರ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ನಡೆಸಿರುವ ಹಲವು ದಾಖಲೆಗಳು ನಮ್ಮಲ್ಲಿವೆ. ಅವರು ಕೇವಲ ರಾಜ್ಯದಲ್ಲಿದ್ದಾರೆ ಅಷ್ಟೇ. ನಾವು ಅವರ ಮೇಲಿದ್ದೇವೆ” ಎಂದು ಬಹಿರಂಗ ಬೆದರಿಕೆ ಹಾಕಿದ್ದಾರೆ.

ಪ್ರತಿಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, “ಶುದ್ಧೀಕರಣ”ದಲ್ಲಿ ತೊಡಗಿಸಿಕೊಂಡವರಿಗೆ ಮೂಲ ಶಿವಸೇನೆ ಅರ್ಥವಾಗುವುದಿಲ್ಲ. ಬಾಳಾಸಾಹೇಬ್ ಠಾಕ್ರೆ ಅವರನ್ನು ಬಂಧಿಸಲು ಪ್ರಯತ್ನಿಸಿದ ಜನರೊಂದಿಗೆ ಶಿವಸೇನೆ ಅಧಿಕಾರ ಹಂಚಿಕೊಳ್ಳುತ್ತಿರುವುದು ಮತ್ತು ಅವರಿಗೆ ಗೌರವ ಸಲ್ಲಿಸುತ್ತಿರುವ ಜನರ ಮೇಲೆ ದಾಳಿ ಮಾಡುವುದು ವಿಚಿತ್ರವಾಗಿದೆ. ಶುದ್ಧೀಕರಣವು ಸಂಕುಚಿತ ಮನೋಭಾವದ ಸೂಚನೆಯಾಗಿದೆ. ಇದು ಮಹಾರಾಷ್ಟ್ರದ ಸಂಸ್ಕೃತಿಯಲ್ಲ” ಎಂದಿದ್ದಾರೆ.

ಈ ಹಿಂದೆ ನಾರಾಯಣ ರಾಣೆಯವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಬಾಳಾಸಾಹೇಬ್ ಠಾಕ್ರೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದರು. ಹಾಗಾಗಿ ಶಿವಸೈನಿಕರು ಅವರ ಮೇಲೆ ಕಿಡಿಕಾರುತ್ತಿದ್ದಾರೆ. ಇನ್ನು 1992-93ರ ಗಲಭೆಯ ಆರೋಪದ ಮೇಲೆ ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಸರ್ಕಾರವು ಬಾಳಾಸಾಹೇಬ್ ಠಾಕ್ರೆ ಬಂಧಿಸಲು ಮುಂದಾಗಿತ್ತು. ಹಾಗಾಗಿ ಸದ್ಯದ ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟವನ್ನು ಬಿಜೆಪಿ ವಿರೋಧಿಸುತ್ತಿದೆ.

ಕಳೆದ ತಿಂಗಳ ಜುಲೈ 5 ರಂದು ದೇವೇಂದ್ರ ಫಡ್ನವಿಸ್ ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ‘ ಎಂಬ ಹೇಳಿಕೆ ನೀಡಿದ್ದರು. ಅದೇ ರೀತಿಯಲ್ಲಿ ಶಿವಸೇನೆಯ ಸಂಸದ ಮತ್ತು ವಕ್ತಾರ ಸಂಜಯ್ ರಾವತ್ ‘ಬಿಜೆಪಿ-ಶಿವಸೇನೆ ಸಂಬಂಧ ಅಮಿರ್ ಖಾನ್ ಮತ್ತು ಕಿರಣ್ ರಾವ್‌ ಥರ‘ ಎಂಬ ಹೇಳಿಕೆ ನೀಡಿದ್ದರು. ಒಂದು ತಿಂಗಳಲ್ಲಿಯೇ ಮತ್ತೆ ಅವರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.


ಇದನ್ನೂ ಓದಿ: ಬಿಜೆಪಿ ಶಿವಸೇನೆ ಮತ್ತು ಎನ್‌ಸಿಪಿಗೆ ಧನ್ಯವಾದ ಹೇಳಬೇಕು- ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...