Homeಮುಖಪುಟಕೇರಳ: ಕೆಪಿಸಿಸಿ ಅಧ್ಯಕ್ಷ ಸುಧಾಕರನ್, ವಿಪಕ್ಷ ನಾಯಕ ಸತೀಶನ್ ಸೇರಿ ಹಲವು ಕಾಂಗ್ರೆಸ್‌ ನಾಯಕರ ಮೇಲೆ...

ಕೇರಳ: ಕೆಪಿಸಿಸಿ ಅಧ್ಯಕ್ಷ ಸುಧಾಕರನ್, ವಿಪಕ್ಷ ನಾಯಕ ಸತೀಶನ್ ಸೇರಿ ಹಲವು ಕಾಂಗ್ರೆಸ್‌ ನಾಯಕರ ಮೇಲೆ FIR ದಾಖಲು

- Advertisement -
- Advertisement -

ಕೇರಳದ ಡಿಜಿಪಿ ಕಚೇರಿಗೆ ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೆ ಸುಧಾಕರನ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಮತ್ತು ರಾಜ್ಯ ಕಾಂಗ್ರೆಸ್‌ ಘಟಕದ ಹಿರಿಯ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಗಲಭೆ, ರಸ್ತೆ ತಡೆ, ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಐಪಿಸಿಯ ವಿವಿಧ ನಿಬಂಧನೆಗಳಡಿಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಪಕ್ಷದ ಎಲ್ಲಾ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕೆ ಸುಧಾಕರನ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, ಸಂಸದರಾದ ಶಶಿ ತರೂರ್, ಕೋಡಿಕುನ್ನಿಲ್ ಸುರೇಶ್, ಅಡೂರ್ ಪ್ರಕಾಶ್, ಕೆ ಮುರಳೀಧರನ್ ಮತ್ತು ಜೆಬಿ ಮಾಥರ್, ಶಾಸಕ ರಮೇಶ್ ಚೆನ್ನಿತ್ತಲ ಮತ್ತು ಇತರರ ವಿರುದ್ಧ ಮ್ಯೂಸಿಯಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ ಮುಂಜಾನೆ ಹಿಂಸಾಚಾರ ನಡೆದಿತ್ತು. ಪೊಲೀಸರು ಸಿಡಿಸಿದ ಅಶ್ರುವಾಯು ಶೆಲ್‌ ಗಳಿಂದ ಹಿರಿಯ ಸಂಸದರು ಮತ್ತು ಶಾಸಕರು ಸೇರಿದಂತೆ ಕೇರಳದ ಹಿರಿಯ ಕಾಂಗ್ರೆಸ್ ನಾಯಕರು ಉಸಿರುಗಟ್ಟುವಿಕೆ ಸಮಸ್ಯೆಯಿಂದ ಬಳಲಿ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.

ನಿನ್ನೆ ಪ್ರತಿಭಟನೆ ಬಹುತೇಕ ಮುಗಿದಿತ್ತು. ಆದರೆ ಕೊನೆಯ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಹತ್ತಿ ಮುನ್ನುಗ್ಗಲು ಪ್ರಯತ್ನಿಸಿದರು. ಕಲ್ಲು ಎಸೆಯಲು ಪ್ರಾರಂಭಿಸಿದರು ಇದರಿಂದ ನಾವು ಅಶ್ರುವಾಯು ಪ್ರಯೋಗ ಮಾಡಿದ್ದೇವೆ. ಪ್ರತಿಭಟನೆಯ ಭಾಗವಾಗಿ ಸುಮಾರು 300-400 ಜನರು ಅಲ್ಲಿದ್ದರು. ಯಾವುದೇ ಗಾಯಗಳು ಆದ ಬಗ್ಗೆ ವರದಿಗಳಿಲ್ಲ. ಕಲ್ಲು ತೂರಾಟದಲ್ಲಿ ಕೆಲವು ಪತ್ರಕರ್ತರು ಗಾಯಗೊಂಡಿದ್ದಾರೆ ಆದರೆ ಅವರ್ಯಾರೂ ಅಧಿಕೃತವಾಗಿ ಪೊಲೀಸರಿಗೆ ದೂರು ನೀಡಿಲ್ಲ ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ.

ಎಡ ಸರ್ಕಾರದ ‘ನವ ಕೇರಳ ಸದಸ್’ ಜನಸಂಪರ್ಕ ಕಾರ್ಯಕ್ರಮದ ವೇಳೆ ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯವನ್ನು ಮಾಡಿದ್ದಾರೆಂದು ಆರೋಪಿಸಿ ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರತಿಭಟನೆ ಮೆರವಣಿಗೆಯನ್ನು ಆಯೋಜಿಸಿತ್ತು.

ಕಾಂಗ್ರೆಸ್‌ ನಾಯಕರು ಜನಸಮೂಹವನ್ನುದ್ದೇಶಿಸಿ ಮಾತನಾಡುತ್ತಿದ್ದ ವೇದಿಕೆಯ ಹಿಂದೆ ಅಶ್ರುವಾಯು ಶೆಲ್‌ಗಳು ಸಿಡಿಸಿದ ಪರಿಣಾಮ ಸುಧಾಕರನ್ ಮತ್ತು ಚೆನ್ನಿತಲ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಅಸ್ವಸ್ಥಗೊಂಡಿದ್ದರು. ಕಾಂಗ್ರೆಸ್ ಮತ್ತು ಯುಡಿಎಫ್ ನಾಯಕರು ತಮ್ಮ ಪ್ರಾಣವನ್ನು ಗುರಿಯಾಗಿಸಿಕೊಂಡು ನಡೆದ ಪೂರ್ವಯೋಜಿತ ದಾಳಿ ಇದು ಎಂದು ಆರೋಪಿಸಿದ್ದಾರೆ. ಆಡಳಿತಾರೂಢ ಸಿಪಿಐ(ಎಂ) ಮತ್ತು ಎಲ್‌ಡಿಎಫ್ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡಿವೆ. ವಿರೋಧ ಪಕ್ಷದ ಕಾರ್ಯಕರ್ತರು ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಹೇಳಿಕೊಂಡಿದೆ.

ಕೇರಳ ಸರಕಾರ ಮಾಡಿರುವ ಕಾರ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಕೇರಳ ಸರಕಾರ ‘ನವ ಕೇರಳ ಸದಾಸ್’  ಕಾರ್ಯಕ್ರಮವನ್ನು ಆಯೋಜಿಸಿತ್ತು. ಮಂಜೇಶ್ವರಂನಿಂದ ತಿರುವನಂತಪುರದವರೆಗೆ 36 ದಿನಗಳ ಯಾತ್ರೆಯಲ್ಲಿ 140 ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನವ ಕೇರಳ ಸದಸ್ಯವನ್ನು ನ.18ರಿಂದ ಆರಂಭವಾಗಿತ್ತು.  ಡಿಸೆಂಬರ್ 24 ರಂದು ತಿರುವನಂತಪುರದಲ್ಲಿ ಕಾರ್ಯಕ್ರಮವು ಮುಕ್ತಾಯಗೊಂಡಿದೆ. 20 ಮಂತ್ರಿಗಳು ಮತ್ತು ಸಿಎಂ ಸೇರಿ ‘ನವ ಕೇರಳ ಸದಾಸ್’  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದ ವೇಳೆ ಹಲವೆಡೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...