Homeಕರ್ನಾಟಕಬನಾರಸ್‌ ವಿ.ವಿಯಲ್ಲಿ RSS ಧ್ವಜ ತೆರವುಗೊಳಿಸಿದ ಉಪ ಪ್ರಾಧ್ಯಾಪಕರ ವಿರುದ್ಧ ಕೇಸ್‌..!

ಬನಾರಸ್‌ ವಿ.ವಿಯಲ್ಲಿ RSS ಧ್ವಜ ತೆರವುಗೊಳಿಸಿದ ಉಪ ಪ್ರಾಧ್ಯಾಪಕರ ವಿರುದ್ಧ ಕೇಸ್‌..!

- Advertisement -
- Advertisement -

ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಅಳವಡಿಸಿದ್ದ ಆರ್‌ಎಸ್‌ಎಸ್‌ ಧ್ವಜವನ್ನು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿ ತೆರವುಗೊಳಿಸಿದ್ದರು. ಇದರಿಂದ ಅವರ ವಿರುದ್ಧ ಕೇಸ್‌ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಚ್‌ಯು ದಕ್ಷಿಣ ಕ್ಯಾಂಪಸ್‌ನ ಡೆಪ್ಯೂಟಿ ಚೀಫ್ ಪ್ರೊಕ್ಟರ್ ಕಿರಣ್ ದಾಮ್ಲೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ಮತ್ತು ಪ್ರಚೋದನೆ ನೀಡಿದ್ದಾರೆ ಎಂಬ ಕಾರಣ ನೀಡಿ ದಾಮ್ಲೆ ವಿರುದ್ಧ ಆರ್‌ಎಸ್‌ಎಸ್ ಪದಾಧಿಕಾರಿ ಚಂದ್ರಮೋಹನ್ ದೂರು ನೀಡಿದ್ದರು. ದೂರು ಆಧರಿಸಿ, ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಎಸ್‌ಎಚ್‌ಒ ಅಭಯ್ ಸಿಂಗ್ ಹೇಳಿದ್ದಾರೆ.

ಮಂಗಳವಾರ ಉಪ ಪ್ರಾಧ್ಯಾಪಕ ಕಿರಣ್‌ ದಾಮ್ಲೆ ಅವರು ವಿಶ್ವವಿದ್ಯಾಲಯದಲ್ಲಿ ಅಳವಡಿಸಿದ್ದ ಆರ್‌ಎಸ್‌ಎಸ್ ಧ್ವಜವನ್ನು ಹಿಡಿದು, ಶಾಖಾದಲ್ಲಿ ಯೋಗಾಭ್ಯಾಸ ಮಾಡುತ್ತಿದ್ದ ಆರ್‌ಎಸ್‌ಎಸ್ ಮತ್ತು ಎಬಿವಿಪಿ ಸದಸ್ಯರ ಬಳಿ ತೆಗೆದುಕೊಂಡು ಹೋಗಿದ್ದರು. ವಿಶ್ವವಿದ್ಯಾಲಯದಲ್ಲಿ ಆರ್‌ಎಸ್‌ಎಸ್‌ ಧ್ವಜ ಅಳವಡಿಕೆಗೆ ಅನುಮತಿಯಿಲ್ಲ ಎಂದು ಹೇಳಿದ್ದರು.

ಆರ್‌ಎಸ್‌ಎಸ್‌ ಧ್ವಜಕ್ಕೆ ಅಗೌರವ ತೋರಿರುವ ಪ್ರಾಧ್ಯಾಪಕರ ವಿರುದ್ಧ ಆರ್‌ಎಸ್‌ಎಸ್‌ ಸದಸ್ಯರು ಧರಣಿ ಕುಳಿತಿದ್ದರು. ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆರ್‌ಎ‌ಸ್‌ಎಸ್‌ ಧ್ವಜದ ಜತೆ ಯೋಗಾಭ್ಯಾಸಕ್ಕೆ ಅನುಮತಿ ನೀಡಬೇಕು ಎಂದು ಪ್ರತಿಭಟನೆ ನಡೆಸಿ, ಆಗ್ರಹಿಸಿದ್ದರು.

ಇಷ್ಟೆಲ್ಲಾ ನಾಟಕೀಯ ಬೆಳವಣಿಗೆಯ ನಂತರ ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಕ್ಷಮೆಯಾಚಿಸಿದರೂ ಸಹ ಪ್ರತಿಭಟನಾಕಾರರು ಮಣಿದಿಲ್ಲ.

ಪ್ರತಿಭಟನಾಕಾರರಿಗೆ ಸ್ಥಳೀಯ ಶಾಸಕ ರತ್ನಾಕರ್ ಮಿಶ್ರಾ ಮತ್ತು ಆರ್‌ಎಸ್‌ಎಸ್ ‘ಸಹ ಪ್ರಾಂತ್‌ ಕರ್ವಾ’ ಸೊಹನ್ ಅವರ ಬೆಂಬಲವೂ ದೊರೆತಿದೆ. ಈ ಮಧ್ಯೆ ಎಸ್ಪಿ ಧರಂವೀರ್‌ ಸಿಂಗ್‌ ಅವರು ಧ್ವಜವನ್ನು ತೆಗೆದಿರುವುದು ಆರ್‌ಎಸ್‌ಎಸ್‌ ಸೇವಕರ ಭಾವನೆಗಳನ್ನು ಘಾಸಿಗೊಳಿಸಿದೆ. ಅದನ್ನು ಯಾಕೆ ತೆಗೆದು ಹಾಕಿದರು ಎಂಬುದನ್ನು ದಾಮ್ಲೆ ವಿವರಿಸಬೇಕು ಎಂದು ಹೇಳಿದರು.

ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಲಲಿತೇಶ್ ತ್ರಿಪಾಠಿ, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ‘ಶಾಖಾ’ ನಡೆಸಬಾರದು. ಆರ್‌ಎಸ್ಎಸ್ ಪದಾಧಿಕಾರಿಗಳು ಸೇರಿದಂತೆ ಹೊರಗಿನವರು ವಿಶ್ವವಿದ್ಯಾಲಯದ ವ್ಯವಹಾರಗಳಲ್ಲಿ  ಹಸ್ತಕ್ಷೇಪ ಮಾಡುತ್ತಿರುವುದು ಏಕೆ..? ಎಂದು ಪ್ರಶ್ನಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...