Homeಕರ್ನಾಟಕಬನಾರಸ್‌ ವಿ.ವಿಯಲ್ಲಿ RSS ಧ್ವಜ ತೆರವುಗೊಳಿಸಿದ ಉಪ ಪ್ರಾಧ್ಯಾಪಕರ ವಿರುದ್ಧ ಕೇಸ್‌..!

ಬನಾರಸ್‌ ವಿ.ವಿಯಲ್ಲಿ RSS ಧ್ವಜ ತೆರವುಗೊಳಿಸಿದ ಉಪ ಪ್ರಾಧ್ಯಾಪಕರ ವಿರುದ್ಧ ಕೇಸ್‌..!

- Advertisement -
- Advertisement -

ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಅಳವಡಿಸಿದ್ದ ಆರ್‌ಎಸ್‌ಎಸ್‌ ಧ್ವಜವನ್ನು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿ ತೆರವುಗೊಳಿಸಿದ್ದರು. ಇದರಿಂದ ಅವರ ವಿರುದ್ಧ ಕೇಸ್‌ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಚ್‌ಯು ದಕ್ಷಿಣ ಕ್ಯಾಂಪಸ್‌ನ ಡೆಪ್ಯೂಟಿ ಚೀಫ್ ಪ್ರೊಕ್ಟರ್ ಕಿರಣ್ ದಾಮ್ಲೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ಮತ್ತು ಪ್ರಚೋದನೆ ನೀಡಿದ್ದಾರೆ ಎಂಬ ಕಾರಣ ನೀಡಿ ದಾಮ್ಲೆ ವಿರುದ್ಧ ಆರ್‌ಎಸ್‌ಎಸ್ ಪದಾಧಿಕಾರಿ ಚಂದ್ರಮೋಹನ್ ದೂರು ನೀಡಿದ್ದರು. ದೂರು ಆಧರಿಸಿ, ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಎಸ್‌ಎಚ್‌ಒ ಅಭಯ್ ಸಿಂಗ್ ಹೇಳಿದ್ದಾರೆ.

ಮಂಗಳವಾರ ಉಪ ಪ್ರಾಧ್ಯಾಪಕ ಕಿರಣ್‌ ದಾಮ್ಲೆ ಅವರು ವಿಶ್ವವಿದ್ಯಾಲಯದಲ್ಲಿ ಅಳವಡಿಸಿದ್ದ ಆರ್‌ಎಸ್‌ಎಸ್ ಧ್ವಜವನ್ನು ಹಿಡಿದು, ಶಾಖಾದಲ್ಲಿ ಯೋಗಾಭ್ಯಾಸ ಮಾಡುತ್ತಿದ್ದ ಆರ್‌ಎಸ್‌ಎಸ್ ಮತ್ತು ಎಬಿವಿಪಿ ಸದಸ್ಯರ ಬಳಿ ತೆಗೆದುಕೊಂಡು ಹೋಗಿದ್ದರು. ವಿಶ್ವವಿದ್ಯಾಲಯದಲ್ಲಿ ಆರ್‌ಎಸ್‌ಎಸ್‌ ಧ್ವಜ ಅಳವಡಿಕೆಗೆ ಅನುಮತಿಯಿಲ್ಲ ಎಂದು ಹೇಳಿದ್ದರು.

ಆರ್‌ಎಸ್‌ಎಸ್‌ ಧ್ವಜಕ್ಕೆ ಅಗೌರವ ತೋರಿರುವ ಪ್ರಾಧ್ಯಾಪಕರ ವಿರುದ್ಧ ಆರ್‌ಎಸ್‌ಎಸ್‌ ಸದಸ್ಯರು ಧರಣಿ ಕುಳಿತಿದ್ದರು. ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆರ್‌ಎ‌ಸ್‌ಎಸ್‌ ಧ್ವಜದ ಜತೆ ಯೋಗಾಭ್ಯಾಸಕ್ಕೆ ಅನುಮತಿ ನೀಡಬೇಕು ಎಂದು ಪ್ರತಿಭಟನೆ ನಡೆಸಿ, ಆಗ್ರಹಿಸಿದ್ದರು.

ಇಷ್ಟೆಲ್ಲಾ ನಾಟಕೀಯ ಬೆಳವಣಿಗೆಯ ನಂತರ ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಕ್ಷಮೆಯಾಚಿಸಿದರೂ ಸಹ ಪ್ರತಿಭಟನಾಕಾರರು ಮಣಿದಿಲ್ಲ.

ಪ್ರತಿಭಟನಾಕಾರರಿಗೆ ಸ್ಥಳೀಯ ಶಾಸಕ ರತ್ನಾಕರ್ ಮಿಶ್ರಾ ಮತ್ತು ಆರ್‌ಎಸ್‌ಎಸ್ ‘ಸಹ ಪ್ರಾಂತ್‌ ಕರ್ವಾ’ ಸೊಹನ್ ಅವರ ಬೆಂಬಲವೂ ದೊರೆತಿದೆ. ಈ ಮಧ್ಯೆ ಎಸ್ಪಿ ಧರಂವೀರ್‌ ಸಿಂಗ್‌ ಅವರು ಧ್ವಜವನ್ನು ತೆಗೆದಿರುವುದು ಆರ್‌ಎಸ್‌ಎಸ್‌ ಸೇವಕರ ಭಾವನೆಗಳನ್ನು ಘಾಸಿಗೊಳಿಸಿದೆ. ಅದನ್ನು ಯಾಕೆ ತೆಗೆದು ಹಾಕಿದರು ಎಂಬುದನ್ನು ದಾಮ್ಲೆ ವಿವರಿಸಬೇಕು ಎಂದು ಹೇಳಿದರು.

ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಲಲಿತೇಶ್ ತ್ರಿಪಾಠಿ, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ‘ಶಾಖಾ’ ನಡೆಸಬಾರದು. ಆರ್‌ಎಸ್ಎಸ್ ಪದಾಧಿಕಾರಿಗಳು ಸೇರಿದಂತೆ ಹೊರಗಿನವರು ವಿಶ್ವವಿದ್ಯಾಲಯದ ವ್ಯವಹಾರಗಳಲ್ಲಿ  ಹಸ್ತಕ್ಷೇಪ ಮಾಡುತ್ತಿರುವುದು ಏಕೆ..? ಎಂದು ಪ್ರಶ್ನಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...