Homeಮುಖಪುಟಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

- Advertisement -
- Advertisement -

ಕಳೆದ ವರ್ಷ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಪ್ರಕರಣ ದಾಖಲಿಸಲು ಉತ್ತರ ಪ್ರದೇಶ ಸರಕಾರವು ಪೊಲೀಸರಿಗೆ ಅನುಮತಿ ನೀಡಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನಾಲ್ವರಿಗೂ ಜಾಮೀನು ದೊರೆತಿದೆ.

ಪೊಲೀಸರು ಆರೋಪಿಗಳ ವಿರುದ್ಧ ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು), 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು) ಅಡಿ ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ.

ಈ ಪ್ರಕರಣವು ಜನವರಿ 26, 2020ರ ಹಿಂದಿನದು. ಸಿಎಎ ಮತ್ತು ಎನ್‌ಆರ್‌ಸಿ ಹೋರಾಟದಲ್ಲಿ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ ಎಂದು ಆರೋಪಿಸಲಾಯಿತು. ಪೊಲೀಸರು ಮರುದಿನ ಮೀರತ್‌ನ ಓಂ ವೀರ್ (35), ಕಾನ್ಪುರ ನಗರದ ಓಂ ಕರ್ ನಾಥ್ ಕುಶ್ವಾಹ (57), ಇಟಾವಾಹ್‌ನ ರಾಹುಲ್ (21) ಮತ್ತು ಜಗ್‌ಸೀರ್ (21) ವಿರುದ್ಧ ಎಫ್‌ಐಆರ್ ದಾಖಲಿಸಿದರು. ಪೋಸ್ಟರ್‌ಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳಿವೆ ಎಂದು ಪೊಲೀಸರು ಆರೋಪಿಸಿದ್ದಾರೆ.

2019ರಿಂದಲೂ ಉತ್ತರ ಪ್ರದೇಶ ಸರ್ಕಾರ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತಿರುವುದು ನಡೆಯುತ್ತಿದೆ. ಈ ವರ್ಷದ ಮಾರ್ಚ್‌ನಲ್ಲಿ, ಉತ್ತರ ಪ್ರದೇಶ ವಿಧಾನಸಭೆಯು ಎರಡು ಮಸೂದೆಗಳನ್ನು ಅಂಗೀಕರಿಸಿತು. ಪ್ರತಿಭಟನಾಕಾರರಿಂದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿಯನ್ನು ವಸೂಲಿ ಮಾಡುವ ಮಸೂದೆಯೂ ಇತ್ತು. ಇದನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು.

ಸಿಎಎ ವಿರುದ್ಧ ಪ್ರತಿಭಟಿಸುವವರ ಮೇಲೆ, ವಿಶೇಷವಾಗಿ ಮುಸ್ಲಿಮರ ಮೇಲೆ ಪೊಲೀಸರು ಅತಿಯಾದ ಕ್ರಮ ಜರುಗಿಸಿದ್ದಾರೆ ಎಂದು ದಿ ವೈರ್‌ ಜಾಲತಾಣ ಹೇಳಿದೆ. ಪ್ರತಿಭಟನೆ ವೇಳೆ 22 ಮಂದಿ ಸಾವನ್ನಪ್ಪಿದ್ದರು. ಅದರಲ್ಲಿ ಬಹುತೇಕರು ಗೋಲಿಬಾರ್‌‌ ನಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಗಳಿವೆ.

ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ದೈಹಿಕ ಹಿಂಸೆ, ನಿದ್ರೆಗೆ ಅವಕಾಶ ನೀಡದಿರುವುದು ಸೇರಿದಂತೆ ಉತ್ತರ ಪ್ರದೇಶದ ಪೊಲೀಸರು ‘ತೀವ್ರ ಚಿತ್ರಹಿಂಸೆ’ ನೀಡಿದ್ದಾರೆ ಎಂದು ಸತ್ಯಶೋಧನೆಯ ವರದಿಯು ತಿಳಿಸಿದೆ. ಬಿಜ್ನೋರ್, ಮುಜಾಫರ್‌ನಗರ ಮತ್ತು ಫಿರೋಜಾಬಾದ್‌ನಲ್ಲಿ ಅಪ್ರಾಪ್ತರನ್ನು ಬಂಧಿಸಿ ಅವರಿಗೆ ಚಿತ್ರಹಿಂಸೆ ನೀಡಿದ ಆರೋಪವೂ ಇದೆ.


ಇದನ್ನೂ ಓದಿರಿ: ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...