Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ : ಶಾಸಕ, ನಟ ಮುಕೇಶ್ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

ಲೈಂಗಿಕ ದೌರ್ಜನ್ಯ ಆರೋಪ : ಶಾಸಕ, ನಟ ಮುಕೇಶ್ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ನಟಿಯೊಬ್ಬರ ದೂರಿನ ಮೇರೆಗೆ ಕೇರಳದ ಕೊಲ್ಲಂನ ಸಿಪಿಐ(ಎಂ) ಶಾಸಕ ಹಾಗೂ ನಟ ಮುಕೇಶ್ ಮತ್ತು ನಟ ಜಯಸೂರ್ಯ ಸೇರಿದಂತೆ ಹಲವರ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಎರಡು ದಿನದ ಹಿಂದೆ ಹಿರಿಯ ನಟಿಯೊಬ್ಬರು ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಶಾಸಕ ಹಾಗೂ ನಟ ಮುಕೇಶ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಮುಖ ನಾಯಕ ಇಡವೇಳ ಬಾಬು ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಎಲ್ಲರ ವಿರುದ್ದ ದೂರು ದಾಖಲಿಸುವುದಾಗಿ ತಿಳಿಸಿದ್ದರು.

ಅದರಂತೆ, ನಟಿ ಬುಧವಾರ ರಾತ್ರಿ ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ಒಟ್ಟು ಏಳು ಮಂದಿಯ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ನಟ, ಶಾಸಕ ಮುಕೇಶ್, ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಇಡವೇಳ ಬಾಬು, ಪ್ರೊಡಕ್ಷನ್ ಎಕ್ಸಿಕ್ಯೂಟಿವ್ಸ್ ನೋಬಲ್ ಮತ್ತು ವಿಚು, ನಿರ್ಮಾಪಕ ಮತ್ತು ವಕೀಲರ ಕಾಂಗ್ರೆಸ್ ನಾಯಕ ಅಡ್ವೊಕೇಟ್ ವಿ ಎಸ್ ಚಂದ್ರಶೇಖರನ್ ವಿರುದ್ದ ನಟಿ ದೂರು ದಾಖಲಿಸಿರುವುದಾಗಿ ವರದಿಯಾಗಿದೆ.

ನಟ, ಶಾಸಕ ಮುಕೇಶ್ ವಿರುದ್ದ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ನಟ ಜಯಸೂರ್ಯ ವಿರುದ್ದ ಸೆಕ್ಷನ್ 354 ಅಡಿ ಹಾಗೂ ಇತರರ ವಿರುದ್ದ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುವ ಮುನ್ನವೇ ಎಲ್ಲಾ ಪ್ರಕರಣಗಳು ನಡೆದಿರುವುದರಿಂದ ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯೇ ಎಲ್ಲರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಹೇಮಾ ಸಮಿತಿ ವರದಿ ಬಹಿರಂಗೊಂಡ ಬಳಿಕ ಇಬ್ಬರು ನಟಿಯರ ದೂರಿನ ಮೇರೆಗೆ ಮಲಯಾಳಂ ಸಿನಿಮಾ ರಂಗದ ಪ್ರಮುಖರಾದ ನಿರ್ದೇಶಕ ರಂಜಿತ್, ನಟ ಸಿದ್ದೀಕ್ ವಿರುದ್ದ ಈಗಾಗಲೇ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದೀಗ ಮೂರನೇ ನಟಿಯ ದೂರು ಆಧರಿಸಿ ಏಳು ಮಂದಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇರಳ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ನಡೆಸುವ ಸಾಧ್ಯತೆ ಇದೆ. ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ಪೊಲೀಸ್ ತಂಡ ರಚಿಸಿದೆ.

ಇದನ್ನೂ ಓದಿ : ಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...