Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ : ಶಾಸಕ, ನಟ ಮುಕೇಶ್ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

ಲೈಂಗಿಕ ದೌರ್ಜನ್ಯ ಆರೋಪ : ಶಾಸಕ, ನಟ ಮುಕೇಶ್ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ನಟಿಯೊಬ್ಬರ ದೂರಿನ ಮೇರೆಗೆ ಕೇರಳದ ಕೊಲ್ಲಂನ ಸಿಪಿಐ(ಎಂ) ಶಾಸಕ ಹಾಗೂ ನಟ ಮುಕೇಶ್ ಮತ್ತು ನಟ ಜಯಸೂರ್ಯ ಸೇರಿದಂತೆ ಹಲವರ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಎರಡು ದಿನದ ಹಿಂದೆ ಹಿರಿಯ ನಟಿಯೊಬ್ಬರು ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಶಾಸಕ ಹಾಗೂ ನಟ ಮುಕೇಶ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಮುಖ ನಾಯಕ ಇಡವೇಳ ಬಾಬು ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಎಲ್ಲರ ವಿರುದ್ದ ದೂರು ದಾಖಲಿಸುವುದಾಗಿ ತಿಳಿಸಿದ್ದರು.

ಅದರಂತೆ, ನಟಿ ಬುಧವಾರ ರಾತ್ರಿ ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ಒಟ್ಟು ಏಳು ಮಂದಿಯ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ನಟ, ಶಾಸಕ ಮುಕೇಶ್, ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಇಡವೇಳ ಬಾಬು, ಪ್ರೊಡಕ್ಷನ್ ಎಕ್ಸಿಕ್ಯೂಟಿವ್ಸ್ ನೋಬಲ್ ಮತ್ತು ವಿಚು, ನಿರ್ಮಾಪಕ ಮತ್ತು ವಕೀಲರ ಕಾಂಗ್ರೆಸ್ ನಾಯಕ ಅಡ್ವೊಕೇಟ್ ವಿ ಎಸ್ ಚಂದ್ರಶೇಖರನ್ ವಿರುದ್ದ ನಟಿ ದೂರು ದಾಖಲಿಸಿರುವುದಾಗಿ ವರದಿಯಾಗಿದೆ.

ನಟ, ಶಾಸಕ ಮುಕೇಶ್ ವಿರುದ್ದ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ನಟ ಜಯಸೂರ್ಯ ವಿರುದ್ದ ಸೆಕ್ಷನ್ 354 ಅಡಿ ಹಾಗೂ ಇತರರ ವಿರುದ್ದ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುವ ಮುನ್ನವೇ ಎಲ್ಲಾ ಪ್ರಕರಣಗಳು ನಡೆದಿರುವುದರಿಂದ ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯೇ ಎಲ್ಲರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಹೇಮಾ ಸಮಿತಿ ವರದಿ ಬಹಿರಂಗೊಂಡ ಬಳಿಕ ಇಬ್ಬರು ನಟಿಯರ ದೂರಿನ ಮೇರೆಗೆ ಮಲಯಾಳಂ ಸಿನಿಮಾ ರಂಗದ ಪ್ರಮುಖರಾದ ನಿರ್ದೇಶಕ ರಂಜಿತ್, ನಟ ಸಿದ್ದೀಕ್ ವಿರುದ್ದ ಈಗಾಗಲೇ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದೀಗ ಮೂರನೇ ನಟಿಯ ದೂರು ಆಧರಿಸಿ ಏಳು ಮಂದಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇರಳ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ನಡೆಸುವ ಸಾಧ್ಯತೆ ಇದೆ. ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ಪೊಲೀಸ್ ತಂಡ ರಚಿಸಿದೆ.

ಇದನ್ನೂ ಓದಿ : ಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...