HomeUncategorizedಆಸ್ಪತ್ರೆಯ ಶೌಚಾಲಯ ಸ್ವಚ್ಛಗೊಳಿಸುವಂತೆ ಡೀನ್‌ಗೆ ಬಲವಂತ ಮಾಡಿದ ಸಂಸದರ ವಿರುದ್ಧ ಪ್ರಕರಣ ದಾಖಲು

ಆಸ್ಪತ್ರೆಯ ಶೌಚಾಲಯ ಸ್ವಚ್ಛಗೊಳಿಸುವಂತೆ ಡೀನ್‌ಗೆ ಬಲವಂತ ಮಾಡಿದ ಸಂಸದರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ 31 ಜನರು ಸಾವನ್ನಪ್ಪಿದ ಆಸ್ಪತ್ರೆಯಲ್ಲಿ ಕೊಳಕು ಶೌಚಾಲಯವನ್ನು ಕಂಡು ಡೀನ್‌ ಕೈಯಲ್ಲಿ ಶುಚಿಗೊಳಿಸಿದ ಆಡಳಿತಾರೂಢ ಶಿವಸೇನೆಯ ಸಂಸದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಮಾನಹಾನಿ ಮಾಡಿದ ಆರೋಪದ ಮೇಲೆ ಹಂಗಾಮಿ ಡೀನ್ ಎಸ್‌ಆರ್ ವಾಕೋಡೆ ನೀಡಿದ ದೂರಿನ ಮೇರೆಗೆ ಪೊಲೀಸರು ಪಾಟೀಲ್ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಸಂಸದರಾದ ಹೇಮಂತ್ ಪಾಟೀಲ್, ಸರಣಿ ಸಾವು ಸಂಭವಿಸಿದ ಶಂಕರರಾವ್ ಚವ್ಹಾಣ್ ಸರ್ಕಾರಿ ಆಸ್ಪತ್ರೆಯ ಡೀನ್ ವಾಕೋಡೆ ಅವರಿಗೆ ಪೊರಕೆ ನೀಡಿ ಕೊಳಕು ಶೌಚಾಲಯ ಮತ್ತು ಮೂತ್ರಾಲಯಗಳನ್ನು ಸ್ವಚ್ಛಗೊಳಿಸುವಂತೆ ಸೂಚಿಸಿದ್ದು, ಅದರಂತೆ ಡೀನ್ ಸ್ವಚ್ಛತೆ ಕಾರ್ಯವನ್ನು ಮಾಡಿದ್ದರು. ಈ ಘಟನೆಯು ತನಗೆ ಮಾನಹಾನಿ ಮಾಡಿದೆ ಎಂದು ಡೀನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಪಾಟೀಲ ಅವರ ಮೇಲೆ ಸಾರ್ವಜನಿಕ ನೌಕರನ ಹಲ್ಲೆ, ಮಾನಹಾನಿ, ಕ್ರಿಮಿನಲ್ ಬೆದರಿಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 48 ಗಂಟೆಗಳಲ್ಲಿ 35ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು,  ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಆಸ್ಪತ್ರೆಗೆ ಭೇಟಿ ನೀಡುವ ಮುನ್ನವೇ ಆಸ್ಪತ್ರೆಗೆ ಆಗಮಿಸಿದ ಸಂಸದ ಹೇಮಂತ ಪಾಟೀಲ್, ಕೊಳಚೆ ಸ್ಥಿತಿಯಲ್ಲಿರುವ ಶೌಚಾಲಯವನ್ನು ಗಮನಿಸಿದರು. ಅದನ್ನು ಸ್ವಚ್ಛಗೊಳಿಸುವಂತೆ ಆಸ್ಪತ್ರೆಯ ಡೀನ್‌ಗೆ ಸೂಚಿಸಿದ್ದಾರೆ.

ಡೀನ್ ಶೌಚಾಲಯವನ್ನು ಶುಚಿಗೊಳಿಸುವಾಗ ಸಂಸದರು ನಿಂತುಕೊಂಡು ಪೈಪ್‌ನ್ನು ಹಿಡಿದಿರುವುದು ವೀಡಿಯೊಗಳಲ್ಲಿ ಕಂಡು ಬಂದಿದೆ. ಡೀನ್‌ ಟಾಯ್ಲೆಟ್‌ ಸ್ವಚ್ಛಗೊಳಿಸುವಾಗ ಸಂಸದರು ಟಾಯ್ಲೆಟ್‌ಗೆ ಪೈಪ್‌ ಮೂಲಕ ನೀರು ಹಾಕುವುದು ಕಂಡು ಬಂದಿದೆ.

ಇದಲ್ಲದೆ ರೋಗಿಗಳ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಪಾಟೀಲ್ ಒತ್ತಾಯಿಸಿದ್ದರು.

ಸೋಮವಾರ ಇದೇ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಸಾವುಗಳು ಸಂಭವಿಸಿದೆ ಮತ್ತು ಮಂಗಳವಾರ 48 ಗಂಟೆಗಳಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಇನ್ನು 71 ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಆದರೆ ಡೀನ್ ವಕೋಡೆ ಅವರು ವೈದ್ಯಕೀಯ ನಿರ್ಲಕ್ಷ್ಯದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿಗಳು ಅಥವಾ ವೈದ್ಯರ ಕೊರತೆಯಿಲ್ಲ ಎಂದು ಹೇಳಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದರೂ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ನಾಂದೇಡ್‌ನಲ್ಲಿ ಸರಣಿ ಸಾವು ಸಂಭವಿಸಿದ ಆಸ್ಪತ್ರೆಯ ಶೌಚಾಲಯವನ್ನು ಡೀನ್ ಕೈಯಲ್ಲೇ ಶುಚಿಗೊಳಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...