Homeಕರ್ನಾಟಕಜ್ಯೋತಿಷಿ ವಿಡಂಬನೆ ಮಾಡಿದ ಅರವಿಂದ್ ಬೋಳಾರ್ ಮೇಲೆ ಕೇಸ್; ಕಲಾವಿದನ ಬೆನ್ನಿಗೆ ನಿಂತ ಕರಾವಳಿ

ಜ್ಯೋತಿಷಿ ವಿಡಂಬನೆ ಮಾಡಿದ ಅರವಿಂದ್ ಬೋಳಾರ್ ಮೇಲೆ ಕೇಸ್; ಕಲಾವಿದನ ಬೆನ್ನಿಗೆ ನಿಂತ ಕರಾವಳಿ

"ಕಾರ್ಯಕ್ರಮದಲ್ಲಿ ನಾವು ಯಾವುದೆ ತಪ್ಪು ಮಾತುಗಳನ್ನು ಆಡಿಲ್ಲ. ಅದರಾಚೆಗೂ ಕೆಲವರು ಹಾಕುತ್ತಿರುವ ಅಶ್ಲೀಲ ಕಮೆಂಟುಗಳು ನಮಗೆ ತೀರಾ ಬೇಜಾರು ಮಾಡಿದೆ. ನಾವು ಏನೂ ತಪ್ಪಿ ಮಾತನಾಡಿಲ್ಲ ಆದರೂ ನಮ್ಮ ಮಾತಿನಿಂದ ನಿಮಗೆ ಬೇಜಾರು ಆಗಿದ್ದರೆ ಕ್ಷಮಿಸಿ"

- Advertisement -
- Advertisement -

ಖಾಸಗಿ ಚಾನೆಲ್ ಒಂದರ ಹಾಸ್ಯ ಕಾರ್ಯಕ್ರಮದಲ್ಲಿ ಜ್ಯೋತಿಷಿಗಳನ್ನು ವಿಡಂಬನೆ ಮಾಡಿದ್ದಕ್ಕೆ ತುಳು ರಂಗಭೂಮಿ ಹಾಗೂ ಸಿನೆಮಾದ ಹಿರಿಯ ಕಲಾವಿದ ಅರವಿಂದ್ ಬೋಳಾರ್ ಹಾಗೂ ಚಾನೆಲ್ ವಿರುದ್ದ ಮಂಗಳೂರಿನ ಕಾವೂರು ಠಾಣೆಯಲ್ಲಿ ಕೇಸು ದಾಖಲಾಗಿದೆ.

ಕರಾವಳಿಯ ಸ್ಥಳೀಯ ಚಾನೆಲ್ ಡೈಜಿವರ್ಲ್ಡ್ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ “ಪ್ರೈವೆಟ್ ಚಾಲೆಂಜ್” ಎಂಬ ಹಾಸ್ಯ ಕಾರ್ಯಕ್ರಮದಲ್ಲಿ ಪುರೋಹಿತರು ಹಾಗೂ ಜ್ಯೋತಿಷಗಳ ಧಾರ್ಮಿಕ ಭಾವನೆಗೆ ದಕ್ಕೆ ತರಲಾಗಿದೆ ಎಂದು ಚಾನೆಲ್ ನಿರೂಪಕ ವಾಲ್ಟರ್‌ ನಂದಳಿಕೆ ಮತ್ತು ಕಲಾವಿದ ಅರವಿಂದ ಬೋಳಾರ್ ವಿರುದ್ದ ಶಿವರಾಜ್ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಆ ಕಾರ್ಯಕ್ರಮದ ವಿಡಿಯೋ ಇಲ್ಲಿದೆ.

ಆಗಸ್ಟ್ 9 ರಂದು ಪ್ರಸಾರವಾದ ಈ ಹಾಸ್ಯ ಕಾರ್ಯಕ್ರಮದಲ್ಲಿ ಕಲಾವಿದ ಅರವಿಂದ್ ಬೋಳಾರ್‌ ”ಬರೆದಿಪಿ ಜ್ಯೋತಿಷಿ”(ಬರೆದಿಡುವ ಜ್ಯೋತಿಷಿ) ಎಂಬ ಪಾತ್ರದಲ್ಲಿ ನಟಿಸಿ, ಜ್ಯೋತಿಷ್ಯವನ್ನು ವಿಡಂಭನೆಗೆ ಒಳಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಜ್ಯೋತಿಷ್ಯರು ಸ್ತೀ ವಶೀಕರಣ, ಭವಿಷ್ಯ ನುಡಿಯುವುದರ ಬಗ್ಗೆ ಹಾಸ್ಯವಾಗಿ ಚಾಟಿ ಬೀಸಲಾಗಿತ್ತು. ಇದಕ್ಕೆ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತದೆ ಎಂಬ ತಕರಾರು ಎದ್ದಿದ್ದು, ಇದೀಗ ಕೇಸು ದಾಖಲಾಗಿದೆ.

ಘಟನೆಯ ಬಗ್ಗೆ ಹಲವಾರು ಜನರು ಪ್ರತಿಕ್ರಿಯಿಸಿದ್ದು, ಕಲಾವಿದನ ಮೇಲೆ ಕೇಸು ದಾಖಲಾಗಿರುವುದನ್ನು ವಿರೋಧಿಸಿದ್ದಾರೆ. ಈ ಕೇಸು ಕೇವಲ ಇವತ್ತಿನ ಆಕ್ರೋಶ ಮಾತ್ರವಲ್ಲ. ಅರವಿಂದ ಬೋಳಾರ್ ಈ ಹಿಂದೆ ರಾಜಕಾರಣಿಯೊಬ್ಬರನ್ನು ವಿಡಂಭನೆ ಮಾಡಿರುವುದರ ಅಸಮಾಧಾನವನ್ನು ಈಗ ತೀರಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, “ಕಾರ್ಯಕ್ರಮದಲ್ಲಿ ಯಾವುದೇ ಅವಹೇಳಕಾರಿ ಅಂಶಗಳಿಲ್ಲ. ಕಾರ್ಯಕ್ರಮದಲ್ಲಿ ಕಪಟ ಜ್ಯೋತಿಷಿಗಳು, ವಾಮಾಚಾರಿಗಳು ಮತ್ತು ಮಂತ್ರವಾದಿಗಳಿಂದ ಜನರು ಅತ್ಯಂತ ಹೆಚ್ಚು ಕಷ್ಟನಷ್ಟಗಳಿಗೆ ಒಳಗಾಗುತ್ತಾರೆ ಎಂದು ಹೇಳಲಾಗಿದೆ. ಅಲ್ಲಿನ ವಿಡಂಭನೆ ಆರೋಗ್ಯಕರವಾಗಿದೆ. ಆದರೆ ಅದನ್ನೆ ಇಟ್ಟುಕೊಂಡು ತುಳುನಾಡಿನ ಖ್ಯಾತ ನಟನೊಬ್ಬನನ್ನು ಹಣಿಯಲು ಪ್ರಯತ್ನಿಸುವುದು ಖಂಡನಾರ್ಹ. ಇದು ಕೇವಲ ಮೇಲ್ನೋಟಕ್ಕೆ ಕಂಡ ರೀತಿ ಕೇವಲ ಜ್ಯೋತಿಷಿಗಳ ವಿಷಯ ಮಾತ್ರವಲ್ಲ, ಇದರ ಹಿಂದೆ ಸಮಾಜದ ಅಂಕುಡೊಂಕುಗಳನ್ನು ಎತ್ತಿತೋರಿಸುವ ಕಲಾವಿದನ ಬಾಯಿಮುಚ್ಚಿಸುವ ಪ್ರಯತ್ನ ಕೂಡಾ ಇದೆ. ನಾವು ಅವರ ಜೊತೆ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

ರಂಗಕರ್ಮಿ ಐ. ಕೆ. ಬೊಳುವಾರು “ಅರವಿಂದ ಬೋಳಾರ್ ಅವರ ಹಾಸ್ಯ ವಿಡಂಬನೆಗೆ ಒಳಗಾಗಿರುವ ಎಲ್ಲ ಸಾಮಾಜಿಕ ಅಪಾಯಕಾರೀ ಶಕ್ತಿಗಳು ಒಂದಾಗುವ ಅಪಾಯ ಬರಬಹುದು. ಕಲಾವಿದ ಅರವಿಂದ ಬೋಳಾರ್ ಸರ್, ವಾಲ್ಟರ್ ನಂದಳಿಕೆಯವರ ಜೊತೆ ನಾನೂ ಇದ್ದೇನೆ” ಎಂದು ಹೇಳಿದ್ದಾರೆ.

 

ಸಿನೆಮಾ ಪತ್ರಕರ್ತ ಶಶಿಕರ ಪಾತೂರು “ಜನರ ನೋವು, ಸಂಕಟಗಳನ್ನು ಬಳಸಿ ದರ್ಬಾರ್ ನಡೆಸುವ ಮಂತ್ರವಾದಿ, ಜ್ಯೋತಿಷಿಗಳು, ದೆವ್ವ ಬಿಡಿಸುವವರ ಮನೆಹಾಳುತನದ ಮುಂದೆ ತನ್ನ ಹಾಸ್ಯ, ನಟನೆಯ ಮೂಲಕ ಜನರ ನೋವು ಮರೆಸಲು ಯತ್ನಿಸುವ ಅರವಿಂದ ಬೋಳಾರ್ ತುಳುನಾಡಿನ‌ ಆಸ್ತಿ. ನಾನು ಬೋಳಾರ್ ಜೊತೆಗೆ ಇದ್ದೇನೆ” ಎಂದು ಹೇಳಿದ್ದಾರೆ.

ತುಳುವರನ್ನು ನೋವು ನುಂಗಿ ನಗುವಂತೆ ಮಾಡಿದವರು ಅರವಿಂದ ಬೋಳಾರ್. ತುಳುವರ ನೋವುಗಳನ್ನೇ ಎನ್ ಕ್ಯಾಶ್ ಮಾಡಿ ಖಜಾನೆ ತುಂಬಿಸಿಕೊಂಡವರು…

Posted by ಶಶಿಕರ ಪಾತೂರು on Tuesday, August 11, 2020

ಯುವ ಸಂಶೋಧಕ ಬರಹಗಾರ ಚರಣ್ ಐವರ್ನಾಡ್, “ಕರಾವಳಿಯ ಸಂಸ್ಕೃತಿಯನ್ನು ಮಾರುಕಟ್ಟೆ ಮಾಡಿಕೊಂಡು ಕೋಟಿ ಕೋಟಿ ಕೊಳ್ಳೆ ಹೊಡೆದು ಚೀಲ ತುಂಬಿಸಿಕೊಂಡು ಮಹಡಿ ಮೇಲೆ ಮಹಡಿ ಕಟ್ಟುವ ಅಷ್ಟ ಮಂಗಳದವರು ತುಳುನಾಡಿನ ಸಂಸ್ಕೃತಿಗೆ ಮಾರಕ. ನಾನು ಅರವಿಂದ್ ಬೋಳಾರ್ ಜೊತೆ ಇದ್ದೇನೆ” ಎಂದು ವಿಸ್ತಾರವಾದ ಬರಹವನ್ನು ಬರೆದಿದ್ದಾರೆ.

#am_with_aravind_bolarAravind Bolarತುಳು ಚಿತ್ರರಂಗದ ಮತ್ತು ರಂಗಭೂಮಿಯ ಹಾಸ್ಯ ನಟ ಅರವಿಂದ ಬೋಳಾರ್ ಮೇಲೆ ಧಾರ್ಮಿಕ ಭಾವನೆಗೆ ದಕ್ಕೆ…

Posted by Charan Aivarnad on Monday, August 10, 2020

ಉದ್ಯಮಿ ಹರೀಶ್ ಪೂಜಾರಿ, “ನನ್ನ ಅತ್ಯಂತ ಇಷ್ಟದ ರಂಗನಟ, ಸಿನಿಮಾ ನಟ ಅರವಿಂದ ಬೋಳಾರ್ ಮೇಲೆ ’ಜ್ಯೋತಿಷಿ’ ಗಳು ಪ್ರಕರಣ ದಾಖಲಿಸಿದ್ದಾರೆಂಬ ಸುದ್ಧಿ ಹರಿದಾಡುತ್ತಿದೆ ಇದು ನಿಜವೇ ಆಗಿದ್ದರೆ ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಬೋಳಾರ್ ಜೊತೆ ನಾನಿದ್ದೇನೆ” ಎಂದು ಹೇಳಿದ್ದಾರೆ.

ನನ್ನ ಅತ್ಯಂತ ಇಷ್ಟದ ರಂಗನಟ , ಸಿನಿಮಾ ನಟ ಅರವಿಂದ ಬೋಳಾರ್ ಮೇಲೆ "ಜ್ಯೋತಿಷಿ" ಗಳು ಪ್ರಕರಣ ದಾಖಲಿಸಿದ್ದಾರೆಂಬ ಸುದ್ಧಿ ಹರಿದಾಡುತ್ತಿದೆ ಇದು ನಿಜವೇ ಆಗಿದ್ದರೆ ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹತ್ಯೆ ಬೋಳಾರ್ ಜೊತೆ ನಾನಿದ್ದೇನೆ ನೀವು..

Posted by Harisha D Poojary on Tuesday, August 11, 2020

ಇಂಜಿನಿಯರ್ ಆಗಿರುವ ಆಸ್ಕರ್ ಲೂಯಿಸ್ “ಒಬ್ಬ ವಿಚಾರವಾದಿಯಾಗಿ, ಪ್ರಜ್ಞಾವಂತನಾಗಿ ಈ ಕಾರ್ಯಕ್ರಮವನ್ನು ನೋಡಿದವರಿಗೆ, ಇದರಲ್ಲಿ ಜ್ಯೋತಿಷ್ಯದ ಸುತ್ತ ಹೆಣೆದುಕೊಂಡಿರುವ ಮೌಢ್ಯವನ್ನು ಇನ್ನಷ್ಟು ತೀಕ್ಷ್ಣವಾಗಿ, ಆಳವಾಗಿ ವಿಮರ್ಶೆಗೆ ಒಳಪಡಿಸಬಹುದಿತ್ತು. ಕೊರೋನಾದಂತಹ ಕಷ್ಟಕಾಲದಲ್ಲಿ ಬಿಲಸೇರಿ ಕೂತಿರುವ ಕಪಟಿಗಳನ್ನು ಬಾಲ ಹಿಡಿದು ಹೊರ ಎಳೆಯಬಹುದಿತ್ತು. ಆದರೆ ಕಾರ್ಯಕ್ರಮದ ಈ ಕಂತು ಅಷ್ಟೊಂದು ಆಳಕ್ಕೆ ಹೋಗದೇ, ಹಾಸ್ಯ ಕೇಂದ್ರಿತವಾಗಿ ಜ್ಯೋತಿಷ್ಯದ ಮೌಢ್ಯತೆಯನ್ನು ಮೇಲಿಂದ ಮೇಲೆ ವಿಮರ್ಶಿಸುತ್ತಾ ಹೋಗಿದೆ… ಧಾರ್ಮಿಕ ವಿಚಾರಗಳಂತೂ ಇಲ್ಲಿ ಪ್ರಸ್ತಾವನೆ ಆಗಿಯೇ ಇಲ್ಲ.. ಇಷ್ಟಕ್ಕೇ ಇಂತಹ ಅರಚಾಟ.. ಇನ್ನು ಜ್ಯೋತಿಷ್ಯದ ಸುತ್ತ ಅಡಕವಾಗಿರುವ ಪೂರ್ತಿ ಕಪಟತನವನ್ನು ಬಯಲು ಮಾಡಿದ್ದರೆ ಇನ್ನೇನಾಗುತ್ತಿತ್ತೋ.” ಎಂದು ಕೇಳಿದ್ದಾರೆ.

ಈ ನಡುವೆ ಚಾನೆಲ್ ನಿರೂಪಕ ವಾಲ್ಟರ್ ನಂದಳಿಕೆ ಹಾಗೂ ಕಲಾವಿದ ಅರವಿಂದ ಬೋಳಾರ್ ಚಾನೆಲ್‌ನಲ್ಲಿ ಬಂದು, “ಕಾರ್ಯಕ್ರಮದಲ್ಲಿ ನಾವು ಯಾವುದೆ ತಪ್ಪು ಮಾತುಗಳನ್ನು ಆಡಿಲ್ಲ. ಅದರಾಚೆಗೂ ಕೆಲವರು ಹಾಕುತ್ತಿರುವ ಅಶ್ಲೀಲ ಕಮೆಂಟುಗಳು ನಮಗೆ ತೀರಾ ಬೇಜಾರು ಮಾಡಿದೆ. ನಾವು ಏನೂ ತಪ್ಪಿ ಮಾತನಾಡಿಲ್ಲ ಆದರೂ ನಮ್ಮ ಮಾತಿನಿಂದ ನಿಮಗೆ ಬೇಜಾರು ಆಗಿದ್ದರೆ ಕ್ಷಮಿಸಿ” ಎಂದು ಕೇಳಿಕೊಂಡಿದ್ದಾರೆ.


ಓದಿ: ಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...