Homeಮುಖಪುಟಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಸೈಬರ್ ಸೆಲ್ ಮಂಗಳವಾರ, ಜೂನ್ 29 ರಂದು, ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 505 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಭಾರತದ ತಪ್ಪಾದ ನಕ್ಷೆಯನ್ನು ಟ್ವಿಟರ್‌‌ ಪ್ರಕಟಿಸಿದೆ (ಸೋಮವಾರ ಇದನ್ನು ಹಿಂದೆಗೆದುಕೊಳ್ಳಲಾಗಿದೆ) ಎಂಬ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಈ ಮೊದಲೇ ಒಂದು ಎಫ್‍ಐಆರ್‌‌ ದಾಖಲಾಗಿದೆ. ಹಿಂದಿನ ವಾರ ಮುಸ್ಲಿಂ ವ್ಯಕ್ತಿ ಮೇಲಿನ ಹಲ್ಲೆ ಕುರಿತಾದ ಪೋಸ್ಟ್‌‌ಗಳಿಗೆ ಸಂಬಂಧಿಸಿ ಕೂಡ ಒಂದು ಪ್ರಕರಣವನ್ನು ಉತ್ತರಪ್ರದೇಶದಲ್ಲಿ ಟ್ವಿಟರ್‌‌ ಮುಖ್ಯಸ್ಥರ ವಿರುದ್ಧ ದಾಖಲಿಸಲಾಗಿದೆ.

ಇದನ್ನೂ ಓದಿ: ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ಭಾರತದ ತಪ್ಪು ನಕ್ಷೆಯನ್ನು ತೋರಿಸಿದ್ದಕ್ಕಾಗಿ ಮಹೇಶ್ವರಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾದ ಹೇಳಿಕೆಗಳು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008 ರ ಸೆಕ್ಷನ್ 74 (ಮೋಸದ ಉದ್ದೇಶಕ್ಕಾಗಿ ಪ್ರಕಟಣೆ) ಅಡಿ ಯುಪಿಯ ಬುಲಂದ್‌ಶಹರ್‌ನಲ್ಲಿ ಭಜರಂಗದಳದ ಮುಖಂಡರ ದೂರಿನ ಮೇರೆಗೆ ದೂರು ದಾಖಲಾದ ನಂತರ ಈಗ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಈಗ ಈ ದೂರು ದಾಖಲಾಗಿದೆ.

ಆಗಿದ್ದಾದರೂ ಏನು? 

ಟ್ವಿಟರ್‌‌ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಭಾರತದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು  ಭಾರತದಿಂದ ಬೇರ್ಪಟ್ಟ ಪ್ರದೇಶ ಎಂಬಂತೆ ತೋರಿಸಿತ್ತು ಎನ್ನುವುದು ಆರೋಪ.

ಟ್ವಿಟರ್‌ನ ವೆಬ್‌ಸೈಟ್‌ನ ಕರಿಯ‌ರ್‌‌ ವಿಭಾಗದಲ್ಲಿ ‘ಟ್ವೀಪ್ ಲೈಫ್’ ಶೀರ್ಷಿಕೆಯಡಿಯಲ್ಲಿ ವಿಶ್ವ ನಕ್ಷೆಯ ಭಾಗವಾಗಿ  ಭಾರತದ ಈ ನಕ್ಷೆ ಕಾಣಿಸಿಕೊಂಡಿತು. ಟ್ವಿಟರ್ ನಂತರ ವಿಶ್ವ ನಕ್ಷೆಯನ್ನು ಸಂಪೂರ್ಣವಾಗಿ ತೆಗೆದುಹಾಕಿದೆ.

ಇದಕ್ಕೂ ಮುನ್ನ, ಸೋಮವಾರ, ಬಿಜೆಪಿ ಮುಖಂಡ ಪಿ ಮುರಳೀಧರ್ ರಾವ್ ಅವರು, “ಟ್ವಿಟರ್ ತನ್ನ ಕಾರ್ಯಗಳಿಂದ ಭಾರತ ವಿರೋಧಿ ನಿಲುವನ್ನು ದೃಢಪಡಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಭಾರತದ ಹಿತಾಸಕ್ತಿಗಳು ಮತ್ತು ಸೂಕ್ಷ್ಮತೆಗಳ ಬಗೆಗಿನ ಪಕ್ಷಪಾತವನ್ನು ಟ್ವಿಟರ್‌‌ ಪ್ರದರ್ಶಿಸಿದೆ” ಎಂದು ಟ್ವೀಟ್‍ ಮಾಡಿದ್ದರು.

ಇದನ್ನೂ ಓದಿ: ಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

ಹೊಸ ಐಟಿ ನಿಯಮಗಳ ಬಗ್ಗೆ ಕಂಪನಿಯು ಭಾರತ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಿರುವ ಸಂದರ್ಭದಲ್ಲಿ ಈ ಎಫ್‍ಐಆರ್‌‌ಗಳು ದಾಖಲಾಗುತ್ತಿವೆ ಎಂಬುದನ್ನು ಗಮನಿಸಬೇಕು. ಜೂನ್‌ನಲ್ಲಿ ಉತ್ತರ ಪ್ರದೇಶದ ಲೋನಿ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಪೋಸ್ಟ್‌ಗಳನ್ನು ಒಳಗೊಂಡ ಪ್ರಕರಣದಲ್ಲಿ ಯುಪಿ ಪೊಲೀಸರು ಟ್ವಿಟರ್‌ ಇಂಡಿಯಾ ನಿರ್ದೇಶಕ ಮನೀಷ್‍ ಮಹೇಶ್ವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದರು.

ಆದರೆ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಿ. ನರೇಂದ್ರ ಅವರು ಕಳೆದ ವಾರ ಸಿಆರ್‌ಪಿಸಿಯ ಸೆಕ್ಷನ್ 41 ಎ ಅಡಿಯಲ್ಲಿ ಮಧ್ಯಂತರ ಪರಿಹಾರ ನೀಡಿದ್ದರು ಮತ್ತು ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಗಾಜಿಯಾಬಾದ್ ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಕರ್ನಾಟಕ ಹೈಕೋರ್ಟ್ ನೀಡಿದ ರಕ್ಷಣೆಯ ಆದೇಶದ ವಿರುದ್ಧ ಯುಪಿ ಸರ್ಕಾರ ಜೂನ್ 29 ರಂದು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಟ್ವಿಟರ್ ನಿರ್ದೇಶಕ ಸುಪ್ರೀಂಕೋರ್ಟ್‍ನಲ್ಲಿ ದೂರು ಸಲ್ಲಿಸಿದ್ದು, ಯುಪಿ ಸರ್ಕಾರದ ಮೇಲ್ಮನವಿಯ ವಿಚಾರಣೆ ಬಂದಾಗ ಈ ವಿಷಯದ ಚರ್ಚೆ ನಡೆಯಲಿದೆ.

ಐಟಿ ನಿಯಮಗಳ ಜಗ್ಗಾಟ

ಇದಕ್ಕೂ ಮುನ್ನ ಭಾನುವಾರ, ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಹೊಸ ನಿಯಮಗಳ ಪ್ರಕಾರ ಅಗತ್ಯವಿರುವಂತೆ ಚತುರ್ ಅವರ ಹೆಸರನ್ನು ಈ ಹಿಂದೆ ಕಂಪನಿಯ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗುತ್ತಿತ್ತು, ಆದರೆ ಅದು ಈಗ ಇಲ್ಲ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ಚತುರ್ ಅವರ ರಾಜೀನಾಮೆಯ ನಂತರ ಕ್ಯಾಲಿಫೋರ್ನಿಯಾ ಮೂಲದ ಜೆರೆಮಿ ಕೆಸೆಲ್ ಅವರನ್ನು ಭಾರತದ ಹೊಸ ಕುಂದುಕೊರತೆ ಪರಿಹಾರ ಅಧಿಕಾರಿಯಾಗಿ  ಟ್ವಿಟರ್‌‌‌ ನೇಮಿಸಿತು.

ಮೇ 25 ರಿಂದ ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ,  ಬಳಕೆದಾರರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ಹೊಂದಿರುವುದು ಕಂಪನಿಗೆ ಕಡ್ಡಾಯವಾಗಿದೆ. ಹೊಸ ನಿಯಮಗಳ ಪ್ರಕಾರ, 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ.

ನಿಯಮಗಳನ್ನು ಧಿಕ್ಕರಿಸುತ್ತಿದೆ ಎಂದು ಒಕ್ಕೂಟ ಸರ್ಕಾರವು ಟ್ವಿಟರ್‌ ಮೇಲೆ ವಾಗ್ದಾಳಿ ನಡೆಸುತ್ತಿದೆ. ನಿಯಮಗಳನ್ನು ಅನುಸರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಟ್ವಿಟರ್‌‌ ಇಂಡಿಯಾ ಹೇಳುತ್ತಲೇ ಬಂದಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...