Homeಮುಖಪುಟಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಸೈಬರ್ ಸೆಲ್ ಮಂಗಳವಾರ, ಜೂನ್ 29 ರಂದು, ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 505 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಭಾರತದ ತಪ್ಪಾದ ನಕ್ಷೆಯನ್ನು ಟ್ವಿಟರ್‌‌ ಪ್ರಕಟಿಸಿದೆ (ಸೋಮವಾರ ಇದನ್ನು ಹಿಂದೆಗೆದುಕೊಳ್ಳಲಾಗಿದೆ) ಎಂಬ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಈ ಮೊದಲೇ ಒಂದು ಎಫ್‍ಐಆರ್‌‌ ದಾಖಲಾಗಿದೆ. ಹಿಂದಿನ ವಾರ ಮುಸ್ಲಿಂ ವ್ಯಕ್ತಿ ಮೇಲಿನ ಹಲ್ಲೆ ಕುರಿತಾದ ಪೋಸ್ಟ್‌‌ಗಳಿಗೆ ಸಂಬಂಧಿಸಿ ಕೂಡ ಒಂದು ಪ್ರಕರಣವನ್ನು ಉತ್ತರಪ್ರದೇಶದಲ್ಲಿ ಟ್ವಿಟರ್‌‌ ಮುಖ್ಯಸ್ಥರ ವಿರುದ್ಧ ದಾಖಲಿಸಲಾಗಿದೆ.

ಇದನ್ನೂ ಓದಿ: ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ಭಾರತದ ತಪ್ಪು ನಕ್ಷೆಯನ್ನು ತೋರಿಸಿದ್ದಕ್ಕಾಗಿ ಮಹೇಶ್ವರಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾದ ಹೇಳಿಕೆಗಳು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008 ರ ಸೆಕ್ಷನ್ 74 (ಮೋಸದ ಉದ್ದೇಶಕ್ಕಾಗಿ ಪ್ರಕಟಣೆ) ಅಡಿ ಯುಪಿಯ ಬುಲಂದ್‌ಶಹರ್‌ನಲ್ಲಿ ಭಜರಂಗದಳದ ಮುಖಂಡರ ದೂರಿನ ಮೇರೆಗೆ ದೂರು ದಾಖಲಾದ ನಂತರ ಈಗ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಈಗ ಈ ದೂರು ದಾಖಲಾಗಿದೆ.

ಆಗಿದ್ದಾದರೂ ಏನು? 

ಟ್ವಿಟರ್‌‌ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಭಾರತದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು  ಭಾರತದಿಂದ ಬೇರ್ಪಟ್ಟ ಪ್ರದೇಶ ಎಂಬಂತೆ ತೋರಿಸಿತ್ತು ಎನ್ನುವುದು ಆರೋಪ.

ಟ್ವಿಟರ್‌ನ ವೆಬ್‌ಸೈಟ್‌ನ ಕರಿಯ‌ರ್‌‌ ವಿಭಾಗದಲ್ಲಿ ‘ಟ್ವೀಪ್ ಲೈಫ್’ ಶೀರ್ಷಿಕೆಯಡಿಯಲ್ಲಿ ವಿಶ್ವ ನಕ್ಷೆಯ ಭಾಗವಾಗಿ  ಭಾರತದ ಈ ನಕ್ಷೆ ಕಾಣಿಸಿಕೊಂಡಿತು. ಟ್ವಿಟರ್ ನಂತರ ವಿಶ್ವ ನಕ್ಷೆಯನ್ನು ಸಂಪೂರ್ಣವಾಗಿ ತೆಗೆದುಹಾಕಿದೆ.

ಇದಕ್ಕೂ ಮುನ್ನ, ಸೋಮವಾರ, ಬಿಜೆಪಿ ಮುಖಂಡ ಪಿ ಮುರಳೀಧರ್ ರಾವ್ ಅವರು, “ಟ್ವಿಟರ್ ತನ್ನ ಕಾರ್ಯಗಳಿಂದ ಭಾರತ ವಿರೋಧಿ ನಿಲುವನ್ನು ದೃಢಪಡಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಭಾರತದ ಹಿತಾಸಕ್ತಿಗಳು ಮತ್ತು ಸೂಕ್ಷ್ಮತೆಗಳ ಬಗೆಗಿನ ಪಕ್ಷಪಾತವನ್ನು ಟ್ವಿಟರ್‌‌ ಪ್ರದರ್ಶಿಸಿದೆ” ಎಂದು ಟ್ವೀಟ್‍ ಮಾಡಿದ್ದರು.

ಇದನ್ನೂ ಓದಿ: ಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

ಹೊಸ ಐಟಿ ನಿಯಮಗಳ ಬಗ್ಗೆ ಕಂಪನಿಯು ಭಾರತ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಿರುವ ಸಂದರ್ಭದಲ್ಲಿ ಈ ಎಫ್‍ಐಆರ್‌‌ಗಳು ದಾಖಲಾಗುತ್ತಿವೆ ಎಂಬುದನ್ನು ಗಮನಿಸಬೇಕು. ಜೂನ್‌ನಲ್ಲಿ ಉತ್ತರ ಪ್ರದೇಶದ ಲೋನಿ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಪೋಸ್ಟ್‌ಗಳನ್ನು ಒಳಗೊಂಡ ಪ್ರಕರಣದಲ್ಲಿ ಯುಪಿ ಪೊಲೀಸರು ಟ್ವಿಟರ್‌ ಇಂಡಿಯಾ ನಿರ್ದೇಶಕ ಮನೀಷ್‍ ಮಹೇಶ್ವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದರು.

ಆದರೆ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಿ. ನರೇಂದ್ರ ಅವರು ಕಳೆದ ವಾರ ಸಿಆರ್‌ಪಿಸಿಯ ಸೆಕ್ಷನ್ 41 ಎ ಅಡಿಯಲ್ಲಿ ಮಧ್ಯಂತರ ಪರಿಹಾರ ನೀಡಿದ್ದರು ಮತ್ತು ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಗಾಜಿಯಾಬಾದ್ ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಕರ್ನಾಟಕ ಹೈಕೋರ್ಟ್ ನೀಡಿದ ರಕ್ಷಣೆಯ ಆದೇಶದ ವಿರುದ್ಧ ಯುಪಿ ಸರ್ಕಾರ ಜೂನ್ 29 ರಂದು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಟ್ವಿಟರ್ ನಿರ್ದೇಶಕ ಸುಪ್ರೀಂಕೋರ್ಟ್‍ನಲ್ಲಿ ದೂರು ಸಲ್ಲಿಸಿದ್ದು, ಯುಪಿ ಸರ್ಕಾರದ ಮೇಲ್ಮನವಿಯ ವಿಚಾರಣೆ ಬಂದಾಗ ಈ ವಿಷಯದ ಚರ್ಚೆ ನಡೆಯಲಿದೆ.

ಐಟಿ ನಿಯಮಗಳ ಜಗ್ಗಾಟ

ಇದಕ್ಕೂ ಮುನ್ನ ಭಾನುವಾರ, ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಹೊಸ ನಿಯಮಗಳ ಪ್ರಕಾರ ಅಗತ್ಯವಿರುವಂತೆ ಚತುರ್ ಅವರ ಹೆಸರನ್ನು ಈ ಹಿಂದೆ ಕಂಪನಿಯ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗುತ್ತಿತ್ತು, ಆದರೆ ಅದು ಈಗ ಇಲ್ಲ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ಚತುರ್ ಅವರ ರಾಜೀನಾಮೆಯ ನಂತರ ಕ್ಯಾಲಿಫೋರ್ನಿಯಾ ಮೂಲದ ಜೆರೆಮಿ ಕೆಸೆಲ್ ಅವರನ್ನು ಭಾರತದ ಹೊಸ ಕುಂದುಕೊರತೆ ಪರಿಹಾರ ಅಧಿಕಾರಿಯಾಗಿ  ಟ್ವಿಟರ್‌‌‌ ನೇಮಿಸಿತು.

ಮೇ 25 ರಿಂದ ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ,  ಬಳಕೆದಾರರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ಹೊಂದಿರುವುದು ಕಂಪನಿಗೆ ಕಡ್ಡಾಯವಾಗಿದೆ. ಹೊಸ ನಿಯಮಗಳ ಪ್ರಕಾರ, 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ.

ನಿಯಮಗಳನ್ನು ಧಿಕ್ಕರಿಸುತ್ತಿದೆ ಎಂದು ಒಕ್ಕೂಟ ಸರ್ಕಾರವು ಟ್ವಿಟರ್‌ ಮೇಲೆ ವಾಗ್ದಾಳಿ ನಡೆಸುತ್ತಿದೆ. ನಿಯಮಗಳನ್ನು ಅನುಸರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಟ್ವಿಟರ್‌‌ ಇಂಡಿಯಾ ಹೇಳುತ್ತಲೇ ಬಂದಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...