Homeಮುಖಪುಟಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಸೈಬರ್ ಸೆಲ್ ಮಂಗಳವಾರ, ಜೂನ್ 29 ರಂದು, ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 505 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಭಾರತದ ತಪ್ಪಾದ ನಕ್ಷೆಯನ್ನು ಟ್ವಿಟರ್‌‌ ಪ್ರಕಟಿಸಿದೆ (ಸೋಮವಾರ ಇದನ್ನು ಹಿಂದೆಗೆದುಕೊಳ್ಳಲಾಗಿದೆ) ಎಂಬ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಈ ಮೊದಲೇ ಒಂದು ಎಫ್‍ಐಆರ್‌‌ ದಾಖಲಾಗಿದೆ. ಹಿಂದಿನ ವಾರ ಮುಸ್ಲಿಂ ವ್ಯಕ್ತಿ ಮೇಲಿನ ಹಲ್ಲೆ ಕುರಿತಾದ ಪೋಸ್ಟ್‌‌ಗಳಿಗೆ ಸಂಬಂಧಿಸಿ ಕೂಡ ಒಂದು ಪ್ರಕರಣವನ್ನು ಉತ್ತರಪ್ರದೇಶದಲ್ಲಿ ಟ್ವಿಟರ್‌‌ ಮುಖ್ಯಸ್ಥರ ವಿರುದ್ಧ ದಾಖಲಿಸಲಾಗಿದೆ.

ಇದನ್ನೂ ಓದಿ: ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ಭಾರತದ ತಪ್ಪು ನಕ್ಷೆಯನ್ನು ತೋರಿಸಿದ್ದಕ್ಕಾಗಿ ಮಹೇಶ್ವರಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾದ ಹೇಳಿಕೆಗಳು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008 ರ ಸೆಕ್ಷನ್ 74 (ಮೋಸದ ಉದ್ದೇಶಕ್ಕಾಗಿ ಪ್ರಕಟಣೆ) ಅಡಿ ಯುಪಿಯ ಬುಲಂದ್‌ಶಹರ್‌ನಲ್ಲಿ ಭಜರಂಗದಳದ ಮುಖಂಡರ ದೂರಿನ ಮೇರೆಗೆ ದೂರು ದಾಖಲಾದ ನಂತರ ಈಗ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಈಗ ಈ ದೂರು ದಾಖಲಾಗಿದೆ.

ಆಗಿದ್ದಾದರೂ ಏನು? 

ಟ್ವಿಟರ್‌‌ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಭಾರತದ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು  ಭಾರತದಿಂದ ಬೇರ್ಪಟ್ಟ ಪ್ರದೇಶ ಎಂಬಂತೆ ತೋರಿಸಿತ್ತು ಎನ್ನುವುದು ಆರೋಪ.

ಟ್ವಿಟರ್‌ನ ವೆಬ್‌ಸೈಟ್‌ನ ಕರಿಯ‌ರ್‌‌ ವಿಭಾಗದಲ್ಲಿ ‘ಟ್ವೀಪ್ ಲೈಫ್’ ಶೀರ್ಷಿಕೆಯಡಿಯಲ್ಲಿ ವಿಶ್ವ ನಕ್ಷೆಯ ಭಾಗವಾಗಿ  ಭಾರತದ ಈ ನಕ್ಷೆ ಕಾಣಿಸಿಕೊಂಡಿತು. ಟ್ವಿಟರ್ ನಂತರ ವಿಶ್ವ ನಕ್ಷೆಯನ್ನು ಸಂಪೂರ್ಣವಾಗಿ ತೆಗೆದುಹಾಕಿದೆ.

ಇದಕ್ಕೂ ಮುನ್ನ, ಸೋಮವಾರ, ಬಿಜೆಪಿ ಮುಖಂಡ ಪಿ ಮುರಳೀಧರ್ ರಾವ್ ಅವರು, “ಟ್ವಿಟರ್ ತನ್ನ ಕಾರ್ಯಗಳಿಂದ ಭಾರತ ವಿರೋಧಿ ನಿಲುವನ್ನು ದೃಢಪಡಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಭಾರತದ ಹಿತಾಸಕ್ತಿಗಳು ಮತ್ತು ಸೂಕ್ಷ್ಮತೆಗಳ ಬಗೆಗಿನ ಪಕ್ಷಪಾತವನ್ನು ಟ್ವಿಟರ್‌‌ ಪ್ರದರ್ಶಿಸಿದೆ” ಎಂದು ಟ್ವೀಟ್‍ ಮಾಡಿದ್ದರು.

ಇದನ್ನೂ ಓದಿ: ಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

ಹೊಸ ಐಟಿ ನಿಯಮಗಳ ಬಗ್ಗೆ ಕಂಪನಿಯು ಭಾರತ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಿರುವ ಸಂದರ್ಭದಲ್ಲಿ ಈ ಎಫ್‍ಐಆರ್‌‌ಗಳು ದಾಖಲಾಗುತ್ತಿವೆ ಎಂಬುದನ್ನು ಗಮನಿಸಬೇಕು. ಜೂನ್‌ನಲ್ಲಿ ಉತ್ತರ ಪ್ರದೇಶದ ಲೋನಿ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಪೋಸ್ಟ್‌ಗಳನ್ನು ಒಳಗೊಂಡ ಪ್ರಕರಣದಲ್ಲಿ ಯುಪಿ ಪೊಲೀಸರು ಟ್ವಿಟರ್‌ ಇಂಡಿಯಾ ನಿರ್ದೇಶಕ ಮನೀಷ್‍ ಮಹೇಶ್ವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದರು.

ಆದರೆ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಿ. ನರೇಂದ್ರ ಅವರು ಕಳೆದ ವಾರ ಸಿಆರ್‌ಪಿಸಿಯ ಸೆಕ್ಷನ್ 41 ಎ ಅಡಿಯಲ್ಲಿ ಮಧ್ಯಂತರ ಪರಿಹಾರ ನೀಡಿದ್ದರು ಮತ್ತು ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಗಾಜಿಯಾಬಾದ್ ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಕರ್ನಾಟಕ ಹೈಕೋರ್ಟ್ ನೀಡಿದ ರಕ್ಷಣೆಯ ಆದೇಶದ ವಿರುದ್ಧ ಯುಪಿ ಸರ್ಕಾರ ಜೂನ್ 29 ರಂದು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಟ್ವಿಟರ್ ನಿರ್ದೇಶಕ ಸುಪ್ರೀಂಕೋರ್ಟ್‍ನಲ್ಲಿ ದೂರು ಸಲ್ಲಿಸಿದ್ದು, ಯುಪಿ ಸರ್ಕಾರದ ಮೇಲ್ಮನವಿಯ ವಿಚಾರಣೆ ಬಂದಾಗ ಈ ವಿಷಯದ ಚರ್ಚೆ ನಡೆಯಲಿದೆ.

ಐಟಿ ನಿಯಮಗಳ ಜಗ್ಗಾಟ

ಇದಕ್ಕೂ ಮುನ್ನ ಭಾನುವಾರ, ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದರು. ಹೊಸ ನಿಯಮಗಳ ಪ್ರಕಾರ ಅಗತ್ಯವಿರುವಂತೆ ಚತುರ್ ಅವರ ಹೆಸರನ್ನು ಈ ಹಿಂದೆ ಕಂಪನಿಯ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗುತ್ತಿತ್ತು, ಆದರೆ ಅದು ಈಗ ಇಲ್ಲ.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ಚತುರ್ ಅವರ ರಾಜೀನಾಮೆಯ ನಂತರ ಕ್ಯಾಲಿಫೋರ್ನಿಯಾ ಮೂಲದ ಜೆರೆಮಿ ಕೆಸೆಲ್ ಅವರನ್ನು ಭಾರತದ ಹೊಸ ಕುಂದುಕೊರತೆ ಪರಿಹಾರ ಅಧಿಕಾರಿಯಾಗಿ  ಟ್ವಿಟರ್‌‌‌ ನೇಮಿಸಿತು.

ಮೇ 25 ರಿಂದ ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ,  ಬಳಕೆದಾರರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ಹೊಂದಿರುವುದು ಕಂಪನಿಗೆ ಕಡ್ಡಾಯವಾಗಿದೆ. ಹೊಸ ನಿಯಮಗಳ ಪ್ರಕಾರ, 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ.

ನಿಯಮಗಳನ್ನು ಧಿಕ್ಕರಿಸುತ್ತಿದೆ ಎಂದು ಒಕ್ಕೂಟ ಸರ್ಕಾರವು ಟ್ವಿಟರ್‌ ಮೇಲೆ ವಾಗ್ದಾಳಿ ನಡೆಸುತ್ತಿದೆ. ನಿಯಮಗಳನ್ನು ಅನುಸರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಟ್ವಿಟರ್‌‌ ಇಂಡಿಯಾ ಹೇಳುತ್ತಲೇ ಬಂದಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...