Homeಮುಖಪುಟಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌; ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ಕೇರಳ: ಸ್ಪೋಟದ ಬಗ್ಗೆ ವಿವಾದಾತ್ಮಕ ಪೋಸ್ಟ್‌; ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕೇರಳದ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಭಾನುವಾರ ನಡೆದ ಸರಣಿ ಸ್ಫೋಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಮಾಜಿಕ ದ್ವೇಷವನ್ನು ಹರಡಿದ ಆರೋಪದಡಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೇಲೆ ಆರೋಪ ಹೊರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಂದ್ರಶೇಖರ್ ಭಾನುವಾರ ಕೇರಳದಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಫೋಟ ನಡೆದ ಬೆನ್ನಲ್ಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತುಷ್ಟೀಕರಣದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜೀವ್ ಚಂದ್ರಶೇಖರ್ ಪೋಸ್ಟ್‌ನಲ್ಲಿ ಏನಿದೆ?

ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌  ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಚಂದ್ರಶೇಖರ್‌ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್‌, ಸಚಿವರ ಹೇಳಿಕೆ ಕೋಮುವಾದದಿಂದ ಕೂಡಿದೆ. ವಿಷವುಳ್ಳವರು ವಿಷವನ್ನು ಉಗುಳುತ್ತಲೇ ಇರುತ್ತಾರೆ. ಜವಾಬ್ದಾರಿಯುತ ಸಚಿವರಾಗಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಕನಿಷ್ಠ ಗೌರವವನ್ನು ತೋರಿಸಬೇಕಾಗಿತ್ತು. ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ತನಿಖೆಯ ಆರಂಭಿಕ ದಿನಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದರು.

ಕೇರಳದ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ಭಾನುವಾರ ನಡೆದ ಸರಣಿ ಸ್ಫೋಟದಲ್ಲಿ ಮೂವರು ಮೃತಪಟ್ಟು, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ಪೋಟಕ್ಕೆ ಕಾರಣವಾದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ತನ್ನ ಫೇಸ್‌ಬುಕ್ ಲೈವ್‌ನಲ್ಲಿ ವಿಡಿಯೋ ಹಂಚಿಕೊಂಡು ಬಳಿಕ ಪೊಲೀಸರಿಗೆ ಶರಣಾಗಿದ್ದ.

ಇದನ್ನು ಓದಿ: ಉತ್ತರಪ್ರದೇಶ: ಬಿಜೆಪಿ ಮಾಜಿ ಸಂಸದರ ಪುತ್ರ ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಲ್‌ ಜಝೀರಾ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಅಧಿಕಾರಿಗಳು

0
ಗಾಝಾದಲ್ಲಿ ಇಸ್ರೇಲ್ ನಡೆಸಿದ ಕ್ರೌರ್ಯವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ಅಲ್‌ ಜಝೀರಾ ಸುದ್ದಿವಾಹಿನಿಯನ್ನು ಇಸ್ರೇಲ್‌ ಈ ಹಿಂದೆ ದೇಶದಲ್ಲಿ ನಿರ್ಬಂಧ ವಿಧಿಸಿತ್ತು. ಇದೀಗ ಇಸ್ರೇಲ್‌ನಲ್ಲಿನ ಅಲ್‌ಜಝೀರಾ ಕಚೇರಿಗೆ ಇಸ್ರೇಲ್‌ ಅಧಿಕಾರಿಗಳು ದಾಳಿ ನಡೆಸಿದ್ದು,...