Homeಮುಖಪುಟವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು | 18 ಕಾನೂನುಬಾಹಿರ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲು

ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು | 18 ಕಾನೂನುಬಾಹಿರ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕಾನೂನುಬಾಹಿರ ಜಾಹೀರಾತು ನೀಡಿದ್ದಕ್ಕಾಗಿ ರಾಜ್ಯದಾದ್ಯಂತ 18 ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಎನ್‌ಆರ್‌ಐ ಅಫೇರ್ಸ್ ವಿಂಗ್ ಮತ್ತು ಪಂಜಾಬ್ ಪೋಲೀಸ್‌ನ ಸೈಬರ್ ಕ್ರೈಮ್ ವಿಭಾಗವು ಚಂಡೀಗಢದ ಪ್ರೊಟೆಕ್ಟರೇಟ್ ಆಫ್ ಎಮಿಗ್ರಂಟ್ಸ್ ಸಮನ್ವಯದಲ್ಲಿ ಪ್ರಕರಣ ದಾಖಲಾಗಿದೆ. ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಟ್ರಾವೆಲ್ ಏಜೆನ್ಸಿಗಳು ವಿದೇಶಗಳಲ್ಲಿ ಉದ್ಯೋಗವಕಾಶಗಳನ್ನು ನೀಡುವುದಾಗಿ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿತ್ತು ಎಂದು ವಲಸಿಗರ ಸಂರಕ್ಷಣಾ ಸಂಸ್ಥೆಯಾಗಿರುವ ಪ್ರೊಟೆಕ್ಟರೇಟ್ ಆಫ್ ಎಮಿಗ್ರಂಟ್ಸ್ ಆರೋಪಿಸಿದೆ. ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು

ಇದನ್ನೂ ಓದಿ: 20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

ಆಗಸ್ಟ್‌ನಲ್ಲಿ ಇಂತಹ 25 ಅಕ್ರಮ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಕನಿಷ್ಠ 20 ಎಫ್‌ಐಆರ್‌ಗಳು ದಾಖಲಾಗಿತ್ತು. ಇದರೊಂದಿಗೆ ಇಂತಹ ಪ್ರಕರಣ ದಾಖಲಾಗದ ಅಕ್ರಮ ಟ್ರಾವೆಲ್ ಏಜೆನ್ಸಿಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಎನ್‌ಆರ್‌ಐ ವ್ಯವಹಾರಗಳ ಹೆಚ್ಚುವರಿ ಡಿಜಿಪಿ ಪ್ರವೀಣ್ ಕುಮಾರ್ ಸಿನ್ಹಾ, “ಈ ಟ್ರಾವೆಲ್ ಏಜೆನ್ಸಿಗಳು ಅಗತ್ಯ ಪರವಾನಗಿ ಮತ್ತು ಅನುಮತಿಗಳಿಲ್ಲದೆ ವಿದೇಶದಲ್ಲಿ ಉದ್ಯೋಗಗಳನ್ನು ಜಾಹೀರಾತು ಮಾಡುತ್ತಿವೆ. ನಾವು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳನ್ನು ಪರಿಶೀಲಿಸಿದ್ದು, ಅವರ ದಾಖಲೆಗಳನ್ನು ರಹಸ್ಯವಾಗಿ ಪರಿಶೀಲಿಸಿದ್ದೇವೆ. ಇದರ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ.” ಎಂದು ಹೇಳಿದ್ದಾರೆ.

ಅಮೃತಸರ, ಎಸ್‌ಎಎಸ್ ನಗರ, ಲುಧಿಯಾನ ಮತ್ತು ಪಟಿಯಾಲ ಸೇರಿದಂತೆ ಚಂಡೀಗಢದ ವಿವಿಧ ಎನ್‌ಆರ್‌ಐ ಪೊಲೀಸ್ ಠಾಣೆಗಳಲ್ಲಿ ಎಮಿಗ್ರೇಷನ್ ಕಾಯ್ದೆಗಳ ಸೆಕ್ಷನ್ 24/25 ರ ಅಡಿಯಲ್ಲಿ 18 ಹೊಸ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ದಾಖಲಾದ 18 ಎಫ್‌ಐಆರ್‌ಗಳಲ್ಲಿ ಆರು ಸೆಪ್ಟೆಂಬರ್‌ನಲ್ಲಿ ಮತ್ತು ಹನ್ನೆರಡು ಅಕ್ಟೋಬರ್‌ನಲ್ಲಿ ದಾಖಲಾಗಿವೆ.

ಇದನ್ನೂ ಓದಿ: ಬಾಬಾ ಸಿದ್ದಿಕ್ ಹತ್ಯೆ | ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೈವಾಡ ಖಚಿತಪಡಿಸಿದ ಪೊಲೀಸರು

ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದಾಖಲಾದ 26 ಎಫ್‌ಐಆರ್‌ಗಳಲ್ಲಿ 34 ಆರೋಪಿಗಳ ಪೈಕಿ 25 ಮಂದಿಯನ್ನು ಬಂಧಿಸಲಾಗಿದೆ ಎಂದು ಸಿನ್ಹಾ ಹೇಳಿದ್ದಾರೆ. “ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಮತ್ತು ಉಳಿದ ಆರೋಪಿ ಟ್ರಾವೆಲ್ ಏಜೆಂಟ್‌ಗಳಿಗೆ ನೋಟಿಸ್ ಕಳುಹಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ದಾಖಲೆಗಳು ಮತ್ತು ಹಣವನ್ನು ಕೊಡುವ ಮೊದಲು ಟ್ರಾವೆಲ್ ಏಜೆಂಟ್‌ಗಳ ದಾಖಲೆಗಳನ್ನು ಪರಿಶೀಲಿಸುವಂತೆ ಮತ್ತು ಜಾಗರೂಕರಾಗಿರುವಂತೆ ನಾಗರಿಕರಿಗೆ ಎಂದು ಸಿನ್ಹಾ ಹೇಳಿದ್ದಾರೆ.

“ಎಮಿಗ್ರೇಷನ್ ಆಕ್ಟ್, 1983 ರ ಅಡಿಯಲ್ಲಿ ಮಾನ್ಯವಾದ ನೇಮಕಾತಿ ಏಜೆಂಟ್ (RA) ಪರವಾನಗಿ ಇರುವ ಏಜೆನ್ಸಿಗಳೊಂದಿಗೆ ತೊಡಗಿಸಿಕೊಳ್ಳಿ. ಯಾವಾಗಲೂ ಕಾಯಿದೆಯ ಅಡಿಯಲ್ಲಿ ನೀಡಲಾದ ಏಜೆನ್ಸಿಯ ಪರವಾನಗಿಯನ್ನು ಕೇಳಿ. ಟ್ರಾವೆಲ್ ಏಜೆಂಟ್‌ಗಳನ್ನು ತೊಡಗಿಸಿಕೊಳ್ಳುವಾಗ ‘ಪರಿಶೀಲಿಸಿ ಮತ್ತು ನಂತರ ನಂಬಿ’ ಎಂಬುದು ಕೆಲಸದ ತತ್ವವಾಗಿರಬೇಕು” ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ರೈತರು ಬೆಳದ ಹತ್ತಿ ಸಾಗಿಸುವ ವಾಹನಗಳಿಂದ ಪೊಲೀಸರು ಲಂಚ ಕೇಳುತ್ತಾರೆ: ರಾಯಚೂರಿನಲ್ಲಿ ಚಾಲಕ ಆತ್ಮಹತ್ಯೆಗೆ ಯತ್ನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...