Homeಮುಖಪುಟವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು | 18 ಕಾನೂನುಬಾಹಿರ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲು

ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು | 18 ಕಾನೂನುಬಾಹಿರ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕಾನೂನುಬಾಹಿರ ಜಾಹೀರಾತು ನೀಡಿದ್ದಕ್ಕಾಗಿ ರಾಜ್ಯದಾದ್ಯಂತ 18 ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಎನ್‌ಆರ್‌ಐ ಅಫೇರ್ಸ್ ವಿಂಗ್ ಮತ್ತು ಪಂಜಾಬ್ ಪೋಲೀಸ್‌ನ ಸೈಬರ್ ಕ್ರೈಮ್ ವಿಭಾಗವು ಚಂಡೀಗಢದ ಪ್ರೊಟೆಕ್ಟರೇಟ್ ಆಫ್ ಎಮಿಗ್ರಂಟ್ಸ್ ಸಮನ್ವಯದಲ್ಲಿ ಪ್ರಕರಣ ದಾಖಲಾಗಿದೆ. ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಟ್ರಾವೆಲ್ ಏಜೆನ್ಸಿಗಳು ವಿದೇಶಗಳಲ್ಲಿ ಉದ್ಯೋಗವಕಾಶಗಳನ್ನು ನೀಡುವುದಾಗಿ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿತ್ತು ಎಂದು ವಲಸಿಗರ ಸಂರಕ್ಷಣಾ ಸಂಸ್ಥೆಯಾಗಿರುವ ಪ್ರೊಟೆಕ್ಟರೇಟ್ ಆಫ್ ಎಮಿಗ್ರಂಟ್ಸ್ ಆರೋಪಿಸಿದೆ. ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು

ಇದನ್ನೂ ಓದಿ: 20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

ಆಗಸ್ಟ್‌ನಲ್ಲಿ ಇಂತಹ 25 ಅಕ್ರಮ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಕನಿಷ್ಠ 20 ಎಫ್‌ಐಆರ್‌ಗಳು ದಾಖಲಾಗಿತ್ತು. ಇದರೊಂದಿಗೆ ಇಂತಹ ಪ್ರಕರಣ ದಾಖಲಾಗದ ಅಕ್ರಮ ಟ್ರಾವೆಲ್ ಏಜೆನ್ಸಿಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಎನ್‌ಆರ್‌ಐ ವ್ಯವಹಾರಗಳ ಹೆಚ್ಚುವರಿ ಡಿಜಿಪಿ ಪ್ರವೀಣ್ ಕುಮಾರ್ ಸಿನ್ಹಾ, “ಈ ಟ್ರಾವೆಲ್ ಏಜೆನ್ಸಿಗಳು ಅಗತ್ಯ ಪರವಾನಗಿ ಮತ್ತು ಅನುಮತಿಗಳಿಲ್ಲದೆ ವಿದೇಶದಲ್ಲಿ ಉದ್ಯೋಗಗಳನ್ನು ಜಾಹೀರಾತು ಮಾಡುತ್ತಿವೆ. ನಾವು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳನ್ನು ಪರಿಶೀಲಿಸಿದ್ದು, ಅವರ ದಾಖಲೆಗಳನ್ನು ರಹಸ್ಯವಾಗಿ ಪರಿಶೀಲಿಸಿದ್ದೇವೆ. ಇದರ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ.” ಎಂದು ಹೇಳಿದ್ದಾರೆ.

ಅಮೃತಸರ, ಎಸ್‌ಎಎಸ್ ನಗರ, ಲುಧಿಯಾನ ಮತ್ತು ಪಟಿಯಾಲ ಸೇರಿದಂತೆ ಚಂಡೀಗಢದ ವಿವಿಧ ಎನ್‌ಆರ್‌ಐ ಪೊಲೀಸ್ ಠಾಣೆಗಳಲ್ಲಿ ಎಮಿಗ್ರೇಷನ್ ಕಾಯ್ದೆಗಳ ಸೆಕ್ಷನ್ 24/25 ರ ಅಡಿಯಲ್ಲಿ 18 ಹೊಸ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ದಾಖಲಾದ 18 ಎಫ್‌ಐಆರ್‌ಗಳಲ್ಲಿ ಆರು ಸೆಪ್ಟೆಂಬರ್‌ನಲ್ಲಿ ಮತ್ತು ಹನ್ನೆರಡು ಅಕ್ಟೋಬರ್‌ನಲ್ಲಿ ದಾಖಲಾಗಿವೆ.

ಇದನ್ನೂ ಓದಿ: ಬಾಬಾ ಸಿದ್ದಿಕ್ ಹತ್ಯೆ | ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೈವಾಡ ಖಚಿತಪಡಿಸಿದ ಪೊಲೀಸರು

ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದಾಖಲಾದ 26 ಎಫ್‌ಐಆರ್‌ಗಳಲ್ಲಿ 34 ಆರೋಪಿಗಳ ಪೈಕಿ 25 ಮಂದಿಯನ್ನು ಬಂಧಿಸಲಾಗಿದೆ ಎಂದು ಸಿನ್ಹಾ ಹೇಳಿದ್ದಾರೆ. “ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಮತ್ತು ಉಳಿದ ಆರೋಪಿ ಟ್ರಾವೆಲ್ ಏಜೆಂಟ್‌ಗಳಿಗೆ ನೋಟಿಸ್ ಕಳುಹಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ದಾಖಲೆಗಳು ಮತ್ತು ಹಣವನ್ನು ಕೊಡುವ ಮೊದಲು ಟ್ರಾವೆಲ್ ಏಜೆಂಟ್‌ಗಳ ದಾಖಲೆಗಳನ್ನು ಪರಿಶೀಲಿಸುವಂತೆ ಮತ್ತು ಜಾಗರೂಕರಾಗಿರುವಂತೆ ನಾಗರಿಕರಿಗೆ ಎಂದು ಸಿನ್ಹಾ ಹೇಳಿದ್ದಾರೆ.

“ಎಮಿಗ್ರೇಷನ್ ಆಕ್ಟ್, 1983 ರ ಅಡಿಯಲ್ಲಿ ಮಾನ್ಯವಾದ ನೇಮಕಾತಿ ಏಜೆಂಟ್ (RA) ಪರವಾನಗಿ ಇರುವ ಏಜೆನ್ಸಿಗಳೊಂದಿಗೆ ತೊಡಗಿಸಿಕೊಳ್ಳಿ. ಯಾವಾಗಲೂ ಕಾಯಿದೆಯ ಅಡಿಯಲ್ಲಿ ನೀಡಲಾದ ಏಜೆನ್ಸಿಯ ಪರವಾನಗಿಯನ್ನು ಕೇಳಿ. ಟ್ರಾವೆಲ್ ಏಜೆಂಟ್‌ಗಳನ್ನು ತೊಡಗಿಸಿಕೊಳ್ಳುವಾಗ ‘ಪರಿಶೀಲಿಸಿ ಮತ್ತು ನಂತರ ನಂಬಿ’ ಎಂಬುದು ಕೆಲಸದ ತತ್ವವಾಗಿರಬೇಕು” ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ರೈತರು ಬೆಳದ ಹತ್ತಿ ಸಾಗಿಸುವ ವಾಹನಗಳಿಂದ ಪೊಲೀಸರು ಲಂಚ ಕೇಳುತ್ತಾರೆ: ರಾಯಚೂರಿನಲ್ಲಿ ಚಾಲಕ ಆತ್ಮಹತ್ಯೆಗೆ ಯತ್ನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...