Homeಮುಖಪುಟವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು | 18 ಕಾನೂನುಬಾಹಿರ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲು

ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು | 18 ಕಾನೂನುಬಾಹಿರ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕಾನೂನುಬಾಹಿರ ಜಾಹೀರಾತು ನೀಡಿದ್ದಕ್ಕಾಗಿ ರಾಜ್ಯದಾದ್ಯಂತ 18 ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಎನ್‌ಆರ್‌ಐ ಅಫೇರ್ಸ್ ವಿಂಗ್ ಮತ್ತು ಪಂಜಾಬ್ ಪೋಲೀಸ್‌ನ ಸೈಬರ್ ಕ್ರೈಮ್ ವಿಭಾಗವು ಚಂಡೀಗಢದ ಪ್ರೊಟೆಕ್ಟರೇಟ್ ಆಫ್ ಎಮಿಗ್ರಂಟ್ಸ್ ಸಮನ್ವಯದಲ್ಲಿ ಪ್ರಕರಣ ದಾಖಲಾಗಿದೆ. ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಟ್ರಾವೆಲ್ ಏಜೆನ್ಸಿಗಳು ವಿದೇಶಗಳಲ್ಲಿ ಉದ್ಯೋಗವಕಾಶಗಳನ್ನು ನೀಡುವುದಾಗಿ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿತ್ತು ಎಂದು ವಲಸಿಗರ ಸಂರಕ್ಷಣಾ ಸಂಸ್ಥೆಯಾಗಿರುವ ಪ್ರೊಟೆಕ್ಟರೇಟ್ ಆಫ್ ಎಮಿಗ್ರಂಟ್ಸ್ ಆರೋಪಿಸಿದೆ. ವಿದೇಶಗಳಲ್ಲಿ ಉದ್ಯೋಗವಕಾಶ ಜಾಹಿರಾತು

ಇದನ್ನೂ ಓದಿ: 20 ವರ್ಷಗಳಲ್ಲಿ ಬೇರೆ ಉದ್ದೇಶಗಳಿಗಾಗಿ 20,805 ಹೆಕ್ಟೇರ್ ಅರಣ್ಯ ಭೂಮಿ ನೀಡಿದ ರಾಜ್ಯ ಸರ್ಕಾರ!

ಆಗಸ್ಟ್‌ನಲ್ಲಿ ಇಂತಹ 25 ಅಕ್ರಮ ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಕನಿಷ್ಠ 20 ಎಫ್‌ಐಆರ್‌ಗಳು ದಾಖಲಾಗಿತ್ತು. ಇದರೊಂದಿಗೆ ಇಂತಹ ಪ್ರಕರಣ ದಾಖಲಾಗದ ಅಕ್ರಮ ಟ್ರಾವೆಲ್ ಏಜೆನ್ಸಿಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

ಎನ್‌ಆರ್‌ಐ ವ್ಯವಹಾರಗಳ ಹೆಚ್ಚುವರಿ ಡಿಜಿಪಿ ಪ್ರವೀಣ್ ಕುಮಾರ್ ಸಿನ್ಹಾ, “ಈ ಟ್ರಾವೆಲ್ ಏಜೆನ್ಸಿಗಳು ಅಗತ್ಯ ಪರವಾನಗಿ ಮತ್ತು ಅನುಮತಿಗಳಿಲ್ಲದೆ ವಿದೇಶದಲ್ಲಿ ಉದ್ಯೋಗಗಳನ್ನು ಜಾಹೀರಾತು ಮಾಡುತ್ತಿವೆ. ನಾವು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳನ್ನು ಪರಿಶೀಲಿಸಿದ್ದು, ಅವರ ದಾಖಲೆಗಳನ್ನು ರಹಸ್ಯವಾಗಿ ಪರಿಶೀಲಿಸಿದ್ದೇವೆ. ಇದರ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ.” ಎಂದು ಹೇಳಿದ್ದಾರೆ.

ಅಮೃತಸರ, ಎಸ್‌ಎಎಸ್ ನಗರ, ಲುಧಿಯಾನ ಮತ್ತು ಪಟಿಯಾಲ ಸೇರಿದಂತೆ ಚಂಡೀಗಢದ ವಿವಿಧ ಎನ್‌ಆರ್‌ಐ ಪೊಲೀಸ್ ಠಾಣೆಗಳಲ್ಲಿ ಎಮಿಗ್ರೇಷನ್ ಕಾಯ್ದೆಗಳ ಸೆಕ್ಷನ್ 24/25 ರ ಅಡಿಯಲ್ಲಿ 18 ಹೊಸ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ದಾಖಲಾದ 18 ಎಫ್‌ಐಆರ್‌ಗಳಲ್ಲಿ ಆರು ಸೆಪ್ಟೆಂಬರ್‌ನಲ್ಲಿ ಮತ್ತು ಹನ್ನೆರಡು ಅಕ್ಟೋಬರ್‌ನಲ್ಲಿ ದಾಖಲಾಗಿವೆ.

ಇದನ್ನೂ ಓದಿ: ಬಾಬಾ ಸಿದ್ದಿಕ್ ಹತ್ಯೆ | ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೈವಾಡ ಖಚಿತಪಡಿಸಿದ ಪೊಲೀಸರು

ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದಾಖಲಾದ 26 ಎಫ್‌ಐಆರ್‌ಗಳಲ್ಲಿ 34 ಆರೋಪಿಗಳ ಪೈಕಿ 25 ಮಂದಿಯನ್ನು ಬಂಧಿಸಲಾಗಿದೆ ಎಂದು ಸಿನ್ಹಾ ಹೇಳಿದ್ದಾರೆ. “ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಮತ್ತು ಉಳಿದ ಆರೋಪಿ ಟ್ರಾವೆಲ್ ಏಜೆಂಟ್‌ಗಳಿಗೆ ನೋಟಿಸ್ ಕಳುಹಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ದಾಖಲೆಗಳು ಮತ್ತು ಹಣವನ್ನು ಕೊಡುವ ಮೊದಲು ಟ್ರಾವೆಲ್ ಏಜೆಂಟ್‌ಗಳ ದಾಖಲೆಗಳನ್ನು ಪರಿಶೀಲಿಸುವಂತೆ ಮತ್ತು ಜಾಗರೂಕರಾಗಿರುವಂತೆ ನಾಗರಿಕರಿಗೆ ಎಂದು ಸಿನ್ಹಾ ಹೇಳಿದ್ದಾರೆ.

“ಎಮಿಗ್ರೇಷನ್ ಆಕ್ಟ್, 1983 ರ ಅಡಿಯಲ್ಲಿ ಮಾನ್ಯವಾದ ನೇಮಕಾತಿ ಏಜೆಂಟ್ (RA) ಪರವಾನಗಿ ಇರುವ ಏಜೆನ್ಸಿಗಳೊಂದಿಗೆ ತೊಡಗಿಸಿಕೊಳ್ಳಿ. ಯಾವಾಗಲೂ ಕಾಯಿದೆಯ ಅಡಿಯಲ್ಲಿ ನೀಡಲಾದ ಏಜೆನ್ಸಿಯ ಪರವಾನಗಿಯನ್ನು ಕೇಳಿ. ಟ್ರಾವೆಲ್ ಏಜೆಂಟ್‌ಗಳನ್ನು ತೊಡಗಿಸಿಕೊಳ್ಳುವಾಗ ‘ಪರಿಶೀಲಿಸಿ ಮತ್ತು ನಂತರ ನಂಬಿ’ ಎಂಬುದು ಕೆಲಸದ ತತ್ವವಾಗಿರಬೇಕು” ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ರೈತರು ಬೆಳದ ಹತ್ತಿ ಸಾಗಿಸುವ ವಾಹನಗಳಿಂದ ಪೊಲೀಸರು ಲಂಚ ಕೇಳುತ್ತಾರೆ: ರಾಯಚೂರಿನಲ್ಲಿ ಚಾಲಕ ಆತ್ಮಹತ್ಯೆಗೆ ಯತ್ನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...