Homeಮುಖಪುಟರದ್ದಾದ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲು!; ರಾಜ್ಯ ಮತ್ತು ಕೇಂದ್ರಾಡಳಿತಕ್ಕೆ ಸುಪ್ರೀಂ ನೋಟಿಸ್‌‌

ರದ್ದಾದ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲು!; ರಾಜ್ಯ ಮತ್ತು ಕೇಂದ್ರಾಡಳಿತಕ್ಕೆ ಸುಪ್ರೀಂ ನೋಟಿಸ್‌‌

- Advertisement -
- Advertisement -

2015 ರಲ್ಲಿ ರದ್ದುಗೊಂಡಿದ್ದ ಐಟಿ ಕಾಯಿದೆಯ ‘ಸೆಕ್ಷನ್ 66 ಎ’ ಅಡಿಯಲ್ಲಿ ದಾಖಲಾದ ಪ್ರಕರಣಗಳ ನೋಂದಣಿಗೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್‌ ಸೋಮವಾರ ನೋಟಿಸ್‌ ನೀಡಿದೆ. ಸುಪ್ರೀಂಕೋರ್ಟ್‌‌ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ಗಳಿಗೂ ನೋಟಿಸ್‌‌ ನೀಡಿದ್ದು ನಾಲ್ಕು ವಾರಗಳಲ್ಲಿ ಉತ್ತರಗಳನ್ನು ಕೇಳಲಾಗಿದೆ.

“ನ್ಯಾಯಾಂಗವನ್ನು ನಾವು ಪ್ರತ್ಯೇಕವಾಗಿ ನೋಡುತ್ತೇವೆ … ಮತ್ತು ಈ ವಿಷಯವು ನ್ಯಾಯಾಲಯಗಳಿಗೆ ಮಾತ್ರವಲ್ಲದೆ ಪೊಲೀಸರಿಗೂ ಸಂಬಂಧಿಸಿದೆ. ಹಾಗಾಗಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಲಾಗುವುದು” ಎಂದು ನ್ಯಾಯಮೂರ್ತಿಗಳಾದ ಆರ್‌ಎಫ್‌ ನಾರಿಮನ್ ಮತ್ತು ಬಿ.ಆರ್. ಗವಾಯಿ ಹೇಳಿದ್ದಾರೆ.

“ಇಂದಿನಿಂದ ನಾಲ್ಕು ವಾರಗಳ ಅವಧಿಯಲ್ಲಿ ಇದನ್ನು ಮಾಡಬೇಕಾಗಿದೆ. ನಾಲ್ಕು ವಾರಗಳ ನಂತರ ವಿಷಯವನ್ನು ಪಟ್ಟಿ ಮಾಡಿ” ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಎಸ್‌ಐಟಿ ತನಿಖೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಎಂಬ ಎನ್‌ಜಿಒ – ಸೆಕ್ಷನ್ 66 ಎ ಅಡಿಯಲ್ಲಿ ಎಫ್ಐಆರ್ ದಾಖಲಿಸದಂತೆ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಸಲಹೆ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ನ್ಯಾಯಾಲಯವು ಆಲಿಸುತ್ತಿತ್ತು.

ಒಕ್ಕೂಟ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರದ್ದಾದ ಕಾನೂನಿನ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಬೇಡಿ ಮತ್ತು ಅಂತಹ ಯಾವುದೇ ಪ್ರಕರಣವನ್ನು ಹಿಂಪಡೆಯಬೇಕು ಎಂದು ತಮ್ಮ ಪೊಲೀಸ್ ಪಡೆಗಳಿಗೆ ಸೂಚನೆ ನೀಡಿದ ವಾರಗಳ ನಂತರ ಸುಪ್ರೀಂಕೋರ್ಟ್‌ ಈ ನೋಟಿಸ್‌‌ ನೀಡಿದೆ.

ಕಳೆದ ತಿಂಗಳ ಗೃಹ ಸಚಿವಾಲಯದ ಅಧಿಸೂಚನೆಗೆ ಸುಪ್ರೀಂಕೋರ್ಟ್ ಆಘಾತ ಮತ್ತು ಅಸಮಾಧಾನವನ್ನು ವ್ಯಕ್ತಪಡಿಸಿದ ನಂತರ 1,000 ಕ್ಕೂ ಹೆಚ್ಚು ಪ್ರಕರಣಗಳನ್ನು, ರದ್ದಾದ ಕಾನೂನಿನ ಅಡಿಯಲ್ಲಿ ಹೊಸದಾಗಿ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ನಮ್ಮ ವರದಿಗೆ ಸರ್ಕಾರ ಹೆದರಿದೆ, ಆದರೆ ಐಟಿ ದಾಳಿಗೆ ನಾವು ಬಗ್ಗುವುದಿಲ್ಲ: ದೈನಿಕ್ ಭಾಸ್ಕರ್

ಇದು ಆಘಾತಕಾರಿಯಾಗಿದ್ದು, ನಾವಿದಕ್ಕೆ ನೋಟಿಸ್‌‌ ಜಾರಿ ಮಾಡುತ್ತಿದ್ದೇವೆ. ಅತ್ಯಾಶ್ಚರ್ಯವಾಗಿದ್ದು, ನಡೆಯುತ್ತಿರುವುದು ಭಯಾನಕವಾಗಿದೆ ಎಂದು ಮೂವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠ ಹೇಳಿದೆ.

ರದ್ದಾದ ಕಾನೂನನ್ನು ಬಳಸುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಧೀಶರು ಎಚ್ಚರಿಕೆ ನೀಡಿದ್ದಾರೆ.

2012 ರಲ್ಲಿ ಶಿವಸೇನೆ ಸಂಸ್ಥಾಪಕ ಬಾಲ್ ಠಾಕ್ರೆ ನಿಧನದ ನಂತರ ನಗರವನ್ನು ಬಂದ್‌ ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದಕ್ಕೆ ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿದ್ದರು. ಇದನ್ನು ಪ್ರಶ್ನಿಸಿ ಮುಂಬೈನ ಕಾನೂನು ವಿದ್ಯಾರ್ಥಿನಿ ಶ್ರೇಯಾ ಸಿಂಘಾಲ್‌‌ ಕೋರ್ಟ್‌‌ಗೆ ಮನವಿ ನೀಡಿದ್ದರು. ನಂತರ, ಸೆಕ್ಷನ್ 66 ಎ ಅನ್ನು ಮಾರ್ಚ್ 24, 2015 ರಂದು ರದ್ದುಗೊಳಿಸಲಾಯಿತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರಕ್ಕೆ ಹಿನ್ನಡೆ : ಐಟಿ ರೂಲ್ಸ್‌ ವಿರುದ್ಧದ ಅರ್ಜಿಗಳ ವಿಚಾರಣೆ ತಡೆಗೆ ಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...