Homeಕರೋನಾ ತಲ್ಲಣಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

- Advertisement -
- Advertisement -

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಇತ್ತೀಚಿನ ದಿನಗಳಲ್ಲಿ ಅನೇಕ ರಾಜಕೀಯ ಚರ್ಚೆಗೆ ಗುರಿಯಾಗುತ್ತಿದ್ದಾರೆ. ಬೆಡ್ ಬ್ಲಾಕಿಂಗ್, ಖಾಸಗಿ ಆಸ್ಪತ್ರೆಗಳ ವ್ಯಾಕ್ಸಿನ್ ಜಾಹೀರಾತು ಸೇರಿ ಇತ್ತೀಚೆಗೆ ತೇಜಸ್ವಿ ಸೂರ್ಯ ಹಲವು ವಿವಾದಗಳಿಗೆ ಕಾರಣರಾಗಿದ್ದರು. ಈಗ ಮತ್ತೊಮ್ಮೆ ಅವರ ವಿರುದ್ಧ ದೂರು ದಾಖಲಾಗಿದೆ. RTI ಕಾರ್ಯಕರ್ತ ವಿಜಯ್ ಡೇನಿಸ್ ಅವರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಲಾಕ್ ಡೌನ್ ನಿಯಮಗಳ ಉಲ್ಲಂಘನೆ ವಿಚಾರದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಕರ್ನಾಟಕದಲ್ಲಿ ಎಲ್ಲಾ ಹೊಟೇಲ್ ಗಳು ಪಾರ್ಸೆಲ್ ಸರ್ವಿಸ್ ಗಳನ್ನು ಮಾತ್ರ ನೀಡುತ್ತಿವೆ. ಯಾವುದೇ ಹೊಟೇಲ್ ಗಳಲ್ಲಿ ಊಟ ತಿನಿಸುಗಳನ್ನು ಸವಿಯಲು ಸಾರ್ವಜನಿಕರಿಗೆ ಇದುವರೆಗೆ ಅನುಮತಿಯಿಲ್ಲ. ಮುಖ್ಯಮಂತ್ರಿಯಿಂದ ಹಿಡಿದು ಸಾರ್ವಜನಿಕರವರೆಗೆ ಎಲ್ಲರಿಗೂ ಈ ನಿಯಮ ಅನ್ವಯವಾಗುತ್ತದೆ. ಜನಪ್ರತಿನಿಧಿಗಳಂತೂ ಲಾಕ್ ಡೌನ್ ನಿಯಮವನ್ನು ಪಾಲಿಸಿ ಜನರಿಗೆ ಮಾದರಿಯಾಗಿ ವರ್ತಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಆದರೆ ಸಂಸದ ತೇಜಸ್ವಿ ಸೂರ್ಯ ಮಾತ್ರ ಲಾಕ್ ಡೌನ್ ನಿಯಮವನ್ನು ಪಾಲಿಸುವ ಉತ್ಸಾಹ ತೋರುತ್ತಿರುವಂತೆ ಕಾಣುತ್ತಿಲ್ಲ. ಸಂಸದ ತೇಜಸ್ವೀ ಸೂರ್ಯ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಹೊಟೇಲ್ ಒಂದರಲ್ಲಿ ಗಾಯಕ ವಿಜಯ ಪ್ರಕಾಶ್ ಅವರೊಂದಿಗೆ ರಾತ್ರಿಯ ಭೋಜನವನ್ನು ಸವಿದಿರುವ ಫೋಟೊಗಳು ವೈರಲ್ ಆಗಿವೆ.

ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರಾಂಡ್ ಹೊಟೇಲ್ ನಲ್ಲಿ ಗಾಯಕ ವಿಜಯ ಪ್ರಕಾಶ್ ಮತ್ತು ತೇಜಸ್ವಿ ಸೂರ್ಯ ಮಂಗಳವಾರ ಜೂನ್ 15 ರ ರಾತ್ರಿ ಭೋಜನವನ್ನು ಸವಿದಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ನಡೆದಿದ್ದವು.

RTI ಕಾರ್ಯಕರ್ತ ವಿಜಯ್ ಡೆನ್ನಿಸ್ ಅವರು ಹಲಸೂರು ಗೇಟ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತೇಜಸ್ವಿ ಸೂರ್ಯ ಅವರ ಭೋಜನದ ವಿಷಯವನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅವರ ನಡೆ NDMA ಆ್ಯಕ್ಟ್ ಮತ್ತು IPC ಸೆಕ್ಷನ್ ಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂಸದರ ವಿರುದ್ಧ ತಕ್ಷಣವೇ FIR ದಾಖಲಿಸಬೇಕು ಎಂದು ವಿಜಯ್ ಡೆನ್ನಿಸ್ ತಮ್ಮ ದೂರಿನಲ್ಲಿ ಪೊಲೀಸರನ್ನು ಆಗ್ರಹಿಸಿದ್ದಾರೆ.

ವಿಜಯ್ ಡೆನ್ನಿಸ್ ದೂರು ದಾಖಲಿಸಿ ದಿನ ಕಳೆದಿದ್ದರೂ ಇದುವರೆಗೆ ಪೊಲೀಸರು ಈ ಸಂಬಂಧ ಸಂಸದರ ವಿರುದ್ಧ ಯಾವುದೇ FIR ದಾಖಲಿಸಿರುವುದಿಲ್ಲ. ಪ್ರತಿಕ್ರಿಯೆಗಾಗಿ ಠಾಣಾ ಅಧಿಕಾರಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಅವರು ಉತ್ತರಿಸಲು ನಿರಾಕರಿಸಿದ್ದಾರೆ.

ರಾಜ್ಯದಲ್ಲಿ ಕಠಿಣ ನಿರ್ಬಂಧಗಳ ಕಾರಣದಿಂದ ಕೊರೋನಾ ಎರಡನೇ ಅಲೆಯ ತೀವ್ರತೆ ಸಾಕಷ್ಟು ಇಳಿಮುಖವಾಗಿದೆ. ತಜ್ಞರು ಕೊರೋನಾ 3 ನೇ ಅಲೆಯನ್ನು ನಿರೀಕ್ಷಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಸಂಜೆ 7 ರ ನಂತರ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಕೂಡ ಜಾರಿಯಲ್ಲಿದೆ. ಅಗತ್ಯ ಸೇವೆಗಳ ಹೊರತುಪಡಿಸಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧವಿದೆ. ಆದರೆ ಇದೆಲ್ಲವನ್ನೂ ಕಡೆಗಣಿಸಿ ಸಂಸದರು ಹೊಟೇಲ್ ನಲ್ಲಿ ಊಟಕ್ಕೆ ತೆರಳಿರುವುದು ಎಲ್ಲರಲ್ಲೂ ಆಶ್ಚರ್ಯವನ್ನು ಹುಟ್ಟುಹಾಕಿದೆ. ಕೊರೋನಾ ವಿರುದ್ಧ ಉಡಾಫೆಯ ವರ್ತನೆ ಸಲ್ಲದು ಎಂದು ಸಾಮಾಜಿಕ ಜಾಲತಾಣದಲ್ಲಿ ಅನೇಕರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ :ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...