Homeಕರೋನಾ ತಲ್ಲಣಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

- Advertisement -
- Advertisement -

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಇತ್ತೀಚಿನ ದಿನಗಳಲ್ಲಿ ಅನೇಕ ರಾಜಕೀಯ ಚರ್ಚೆಗೆ ಗುರಿಯಾಗುತ್ತಿದ್ದಾರೆ. ಬೆಡ್ ಬ್ಲಾಕಿಂಗ್, ಖಾಸಗಿ ಆಸ್ಪತ್ರೆಗಳ ವ್ಯಾಕ್ಸಿನ್ ಜಾಹೀರಾತು ಸೇರಿ ಇತ್ತೀಚೆಗೆ ತೇಜಸ್ವಿ ಸೂರ್ಯ ಹಲವು ವಿವಾದಗಳಿಗೆ ಕಾರಣರಾಗಿದ್ದರು. ಈಗ ಮತ್ತೊಮ್ಮೆ ಅವರ ವಿರುದ್ಧ ದೂರು ದಾಖಲಾಗಿದೆ. RTI ಕಾರ್ಯಕರ್ತ ವಿಜಯ್ ಡೇನಿಸ್ ಅವರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಲಾಕ್ ಡೌನ್ ನಿಯಮಗಳ ಉಲ್ಲಂಘನೆ ವಿಚಾರದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಕರ್ನಾಟಕದಲ್ಲಿ ಎಲ್ಲಾ ಹೊಟೇಲ್ ಗಳು ಪಾರ್ಸೆಲ್ ಸರ್ವಿಸ್ ಗಳನ್ನು ಮಾತ್ರ ನೀಡುತ್ತಿವೆ. ಯಾವುದೇ ಹೊಟೇಲ್ ಗಳಲ್ಲಿ ಊಟ ತಿನಿಸುಗಳನ್ನು ಸವಿಯಲು ಸಾರ್ವಜನಿಕರಿಗೆ ಇದುವರೆಗೆ ಅನುಮತಿಯಿಲ್ಲ. ಮುಖ್ಯಮಂತ್ರಿಯಿಂದ ಹಿಡಿದು ಸಾರ್ವಜನಿಕರವರೆಗೆ ಎಲ್ಲರಿಗೂ ಈ ನಿಯಮ ಅನ್ವಯವಾಗುತ್ತದೆ. ಜನಪ್ರತಿನಿಧಿಗಳಂತೂ ಲಾಕ್ ಡೌನ್ ನಿಯಮವನ್ನು ಪಾಲಿಸಿ ಜನರಿಗೆ ಮಾದರಿಯಾಗಿ ವರ್ತಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಆದರೆ ಸಂಸದ ತೇಜಸ್ವಿ ಸೂರ್ಯ ಮಾತ್ರ ಲಾಕ್ ಡೌನ್ ನಿಯಮವನ್ನು ಪಾಲಿಸುವ ಉತ್ಸಾಹ ತೋರುತ್ತಿರುವಂತೆ ಕಾಣುತ್ತಿಲ್ಲ. ಸಂಸದ ತೇಜಸ್ವೀ ಸೂರ್ಯ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಹೊಟೇಲ್ ಒಂದರಲ್ಲಿ ಗಾಯಕ ವಿಜಯ ಪ್ರಕಾಶ್ ಅವರೊಂದಿಗೆ ರಾತ್ರಿಯ ಭೋಜನವನ್ನು ಸವಿದಿರುವ ಫೋಟೊಗಳು ವೈರಲ್ ಆಗಿವೆ.

ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರಾಂಡ್ ಹೊಟೇಲ್ ನಲ್ಲಿ ಗಾಯಕ ವಿಜಯ ಪ್ರಕಾಶ್ ಮತ್ತು ತೇಜಸ್ವಿ ಸೂರ್ಯ ಮಂಗಳವಾರ ಜೂನ್ 15 ರ ರಾತ್ರಿ ಭೋಜನವನ್ನು ಸವಿದಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ನಡೆದಿದ್ದವು.

RTI ಕಾರ್ಯಕರ್ತ ವಿಜಯ್ ಡೆನ್ನಿಸ್ ಅವರು ಹಲಸೂರು ಗೇಟ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತೇಜಸ್ವಿ ಸೂರ್ಯ ಅವರ ಭೋಜನದ ವಿಷಯವನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅವರ ನಡೆ NDMA ಆ್ಯಕ್ಟ್ ಮತ್ತು IPC ಸೆಕ್ಷನ್ ಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂಸದರ ವಿರುದ್ಧ ತಕ್ಷಣವೇ FIR ದಾಖಲಿಸಬೇಕು ಎಂದು ವಿಜಯ್ ಡೆನ್ನಿಸ್ ತಮ್ಮ ದೂರಿನಲ್ಲಿ ಪೊಲೀಸರನ್ನು ಆಗ್ರಹಿಸಿದ್ದಾರೆ.

ವಿಜಯ್ ಡೆನ್ನಿಸ್ ದೂರು ದಾಖಲಿಸಿ ದಿನ ಕಳೆದಿದ್ದರೂ ಇದುವರೆಗೆ ಪೊಲೀಸರು ಈ ಸಂಬಂಧ ಸಂಸದರ ವಿರುದ್ಧ ಯಾವುದೇ FIR ದಾಖಲಿಸಿರುವುದಿಲ್ಲ. ಪ್ರತಿಕ್ರಿಯೆಗಾಗಿ ಠಾಣಾ ಅಧಿಕಾರಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಅವರು ಉತ್ತರಿಸಲು ನಿರಾಕರಿಸಿದ್ದಾರೆ.

ರಾಜ್ಯದಲ್ಲಿ ಕಠಿಣ ನಿರ್ಬಂಧಗಳ ಕಾರಣದಿಂದ ಕೊರೋನಾ ಎರಡನೇ ಅಲೆಯ ತೀವ್ರತೆ ಸಾಕಷ್ಟು ಇಳಿಮುಖವಾಗಿದೆ. ತಜ್ಞರು ಕೊರೋನಾ 3 ನೇ ಅಲೆಯನ್ನು ನಿರೀಕ್ಷಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಸಂಜೆ 7 ರ ನಂತರ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಕೂಡ ಜಾರಿಯಲ್ಲಿದೆ. ಅಗತ್ಯ ಸೇವೆಗಳ ಹೊರತುಪಡಿಸಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧವಿದೆ. ಆದರೆ ಇದೆಲ್ಲವನ್ನೂ ಕಡೆಗಣಿಸಿ ಸಂಸದರು ಹೊಟೇಲ್ ನಲ್ಲಿ ಊಟಕ್ಕೆ ತೆರಳಿರುವುದು ಎಲ್ಲರಲ್ಲೂ ಆಶ್ಚರ್ಯವನ್ನು ಹುಟ್ಟುಹಾಕಿದೆ. ಕೊರೋನಾ ವಿರುದ್ಧ ಉಡಾಫೆಯ ವರ್ತನೆ ಸಲ್ಲದು ಎಂದು ಸಾಮಾಜಿಕ ಜಾಲತಾಣದಲ್ಲಿ ಅನೇಕರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ :ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...