Homeಕರೋನಾ ತಲ್ಲಣಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

- Advertisement -
- Advertisement -

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಇತ್ತೀಚಿನ ದಿನಗಳಲ್ಲಿ ಅನೇಕ ರಾಜಕೀಯ ಚರ್ಚೆಗೆ ಗುರಿಯಾಗುತ್ತಿದ್ದಾರೆ. ಬೆಡ್ ಬ್ಲಾಕಿಂಗ್, ಖಾಸಗಿ ಆಸ್ಪತ್ರೆಗಳ ವ್ಯಾಕ್ಸಿನ್ ಜಾಹೀರಾತು ಸೇರಿ ಇತ್ತೀಚೆಗೆ ತೇಜಸ್ವಿ ಸೂರ್ಯ ಹಲವು ವಿವಾದಗಳಿಗೆ ಕಾರಣರಾಗಿದ್ದರು. ಈಗ ಮತ್ತೊಮ್ಮೆ ಅವರ ವಿರುದ್ಧ ದೂರು ದಾಖಲಾಗಿದೆ. RTI ಕಾರ್ಯಕರ್ತ ವಿಜಯ್ ಡೇನಿಸ್ ಅವರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಲಾಕ್ ಡೌನ್ ನಿಯಮಗಳ ಉಲ್ಲಂಘನೆ ವಿಚಾರದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಕರ್ನಾಟಕದಲ್ಲಿ ಎಲ್ಲಾ ಹೊಟೇಲ್ ಗಳು ಪಾರ್ಸೆಲ್ ಸರ್ವಿಸ್ ಗಳನ್ನು ಮಾತ್ರ ನೀಡುತ್ತಿವೆ. ಯಾವುದೇ ಹೊಟೇಲ್ ಗಳಲ್ಲಿ ಊಟ ತಿನಿಸುಗಳನ್ನು ಸವಿಯಲು ಸಾರ್ವಜನಿಕರಿಗೆ ಇದುವರೆಗೆ ಅನುಮತಿಯಿಲ್ಲ. ಮುಖ್ಯಮಂತ್ರಿಯಿಂದ ಹಿಡಿದು ಸಾರ್ವಜನಿಕರವರೆಗೆ ಎಲ್ಲರಿಗೂ ಈ ನಿಯಮ ಅನ್ವಯವಾಗುತ್ತದೆ. ಜನಪ್ರತಿನಿಧಿಗಳಂತೂ ಲಾಕ್ ಡೌನ್ ನಿಯಮವನ್ನು ಪಾಲಿಸಿ ಜನರಿಗೆ ಮಾದರಿಯಾಗಿ ವರ್ತಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಆದರೆ ಸಂಸದ ತೇಜಸ್ವಿ ಸೂರ್ಯ ಮಾತ್ರ ಲಾಕ್ ಡೌನ್ ನಿಯಮವನ್ನು ಪಾಲಿಸುವ ಉತ್ಸಾಹ ತೋರುತ್ತಿರುವಂತೆ ಕಾಣುತ್ತಿಲ್ಲ. ಸಂಸದ ತೇಜಸ್ವೀ ಸೂರ್ಯ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಹೊಟೇಲ್ ಒಂದರಲ್ಲಿ ಗಾಯಕ ವಿಜಯ ಪ್ರಕಾಶ್ ಅವರೊಂದಿಗೆ ರಾತ್ರಿಯ ಭೋಜನವನ್ನು ಸವಿದಿರುವ ಫೋಟೊಗಳು ವೈರಲ್ ಆಗಿವೆ.

ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರಾಂಡ್ ಹೊಟೇಲ್ ನಲ್ಲಿ ಗಾಯಕ ವಿಜಯ ಪ್ರಕಾಶ್ ಮತ್ತು ತೇಜಸ್ವಿ ಸೂರ್ಯ ಮಂಗಳವಾರ ಜೂನ್ 15 ರ ರಾತ್ರಿ ಭೋಜನವನ್ನು ಸವಿದಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ನಡೆದಿದ್ದವು.

RTI ಕಾರ್ಯಕರ್ತ ವಿಜಯ್ ಡೆನ್ನಿಸ್ ಅವರು ಹಲಸೂರು ಗೇಟ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತೇಜಸ್ವಿ ಸೂರ್ಯ ಅವರ ಭೋಜನದ ವಿಷಯವನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅವರ ನಡೆ NDMA ಆ್ಯಕ್ಟ್ ಮತ್ತು IPC ಸೆಕ್ಷನ್ ಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂಸದರ ವಿರುದ್ಧ ತಕ್ಷಣವೇ FIR ದಾಖಲಿಸಬೇಕು ಎಂದು ವಿಜಯ್ ಡೆನ್ನಿಸ್ ತಮ್ಮ ದೂರಿನಲ್ಲಿ ಪೊಲೀಸರನ್ನು ಆಗ್ರಹಿಸಿದ್ದಾರೆ.

ವಿಜಯ್ ಡೆನ್ನಿಸ್ ದೂರು ದಾಖಲಿಸಿ ದಿನ ಕಳೆದಿದ್ದರೂ ಇದುವರೆಗೆ ಪೊಲೀಸರು ಈ ಸಂಬಂಧ ಸಂಸದರ ವಿರುದ್ಧ ಯಾವುದೇ FIR ದಾಖಲಿಸಿರುವುದಿಲ್ಲ. ಪ್ರತಿಕ್ರಿಯೆಗಾಗಿ ಠಾಣಾ ಅಧಿಕಾರಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಅವರು ಉತ್ತರಿಸಲು ನಿರಾಕರಿಸಿದ್ದಾರೆ.

ರಾಜ್ಯದಲ್ಲಿ ಕಠಿಣ ನಿರ್ಬಂಧಗಳ ಕಾರಣದಿಂದ ಕೊರೋನಾ ಎರಡನೇ ಅಲೆಯ ತೀವ್ರತೆ ಸಾಕಷ್ಟು ಇಳಿಮುಖವಾಗಿದೆ. ತಜ್ಞರು ಕೊರೋನಾ 3 ನೇ ಅಲೆಯನ್ನು ನಿರೀಕ್ಷಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಸಂಜೆ 7 ರ ನಂತರ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಕೂಡ ಜಾರಿಯಲ್ಲಿದೆ. ಅಗತ್ಯ ಸೇವೆಗಳ ಹೊರತುಪಡಿಸಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧವಿದೆ. ಆದರೆ ಇದೆಲ್ಲವನ್ನೂ ಕಡೆಗಣಿಸಿ ಸಂಸದರು ಹೊಟೇಲ್ ನಲ್ಲಿ ಊಟಕ್ಕೆ ತೆರಳಿರುವುದು ಎಲ್ಲರಲ್ಲೂ ಆಶ್ಚರ್ಯವನ್ನು ಹುಟ್ಟುಹಾಕಿದೆ. ಕೊರೋನಾ ವಿರುದ್ಧ ಉಡಾಫೆಯ ವರ್ತನೆ ಸಲ್ಲದು ಎಂದು ಸಾಮಾಜಿಕ ಜಾಲತಾಣದಲ್ಲಿ ಅನೇಕರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ :ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....