Homeಮುಖಪುಟಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

ಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

- Advertisement -
- Advertisement -

ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಮತ್ತು ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂಧು ಅಧಿಕಾರಿ ಮತ್ತು ಅವರ ಸಹೋದರನ ವಿರುದ್ಧ ಪರಿಹಾರ ಸಾಮಾಗ್ರಿಗಳನ್ನು ಕಳವು ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಜೂನ್ 1 ರಂದು ಕಾಂಥಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.  ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಿಂದ 150 ಕಿಲೋ ಮೀಟರ್‌ ದೂರದ ಮಿಡ್ನಾಪುರ್‌ ಜಿಲ್ಲೆಯ ಪುರಸಭೆಯಿಂದ ಸುವೇಂಧು ಮತ್ತವರ ಸಹೋದರ ಸುಮೇಂಧು ಲಕ್ಷಾಂತರ ರೂಪಾಯಿ ಮೌಲ್ಯದ ಪರಿಹಾರ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ಕಾಂಥಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನದೀಪ್‌ ಮನ್ನ ಎಂಬುವವರು ಸುವೇಂಧು ಸಹೋದರರ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

29 ಮೇ 2021 ರ ಮಧ್ಯಾಹ್ನ 12:30 ಗಂಟೆಯ ಹೊತ್ತಿಗೆ ಸುವೇಂಧು ಅಧಿಕಾರಿ ಮತ್ತು ಪುರಸಭೆಯ ಮಾಜಿ ಅಧ್ಯಕ್ಷ ಸುಮೇಂಧು ಅವರ ಮಾರ್ಗದರ್ಶನದಲ್ಲಿ ಕೆಲವರು ಮುನ್ಸಿಪಾಲ್ಟಿಯ ಗೋಡೌನ್‌ನಲ್ಲಿ ಇರಿಸಲಾಗಿದ್ದ ಲಕ್ಷಾಂತರ ಮೌಲ್ಯದ ಸರಕಾರ ಪರಿಹಾರ ಸಾಮಾಗ್ರಿಗಳನ್ನು ಬಲವಂತದಿಂದ ಕೊಂಡೊಯ್ದಿದ್ದಾರೆ. ಈ ಸಂದರ್ಭದಲ್ಲಿ ಅಕ್ರಮವಾಗಿ ಗೋಡೌನ್‌ ಬೀಗವನ್ನು ಸಹ ಒಡೆಯಲಾಗಿದೆ ಎಂದು ದೂರಿನಲ್ಲಿ ರತ್ನದೀಪ್‌ ಮನ್ನ ಆರೋಪಿಸಿದ್ದಾರೆ.

ಬಿಜೆಪಿಯು ಈ ಹಿಂದೆ ತೃಣಮೂಲ ಕಾಂಗ್ರೆಸ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರದ ಪರಿಹಾರ ಸಾಮಾಗ್ರಿಗಳನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತ ಬಂದಿತ್ತು. ಈಗ ತಮ್ಮ ಪಕ್ಷದ ನಾಯಕರ ಮೇಲೆ ಪ್ರಕರಣ ದಾಖಾಲಾಗಿರುವ ಕುರಿತು ಯಾವುದೇ ಪ್ರತಿಕ್ರಿಯೆಗಳನ್ನು ನೀಡಲು ಅದು ಮುಂದಾಗಿಲ್ಲ.

ಹಾಗೇ ಪ್ರಕರಣದಲ್ಲಿ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ಮತ್ತು ಅವರ ಸಹೋದರ ತಮ್ಮ ರಕ್ಷಣೆಗೆ ಕೇಂದ್ರ ಸಶಸ್ತ್ರ ಪಡೆಯ ಸಿಬ್ಬಂದಿಯನ್ನು ಸಹ ಬಳಸಿಕೊಂಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಸುವೇಂಧು ಅಧಿಕಾರಿಯವರು ಇದುವರೆಗೆ ಈ ಸಂಬಂಧ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ.


ಇದನ್ನೂ ಓದಿ; ಪಶ್ಚಿಮ ಬಂಗಾಳ: ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಮೂವರು ಬಿಜೆಪಿ ಶಾಸಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...