Homeಕರ್ನಾಟಕದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

ದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

- Advertisement -
- Advertisement -

ಜಿಲ್ಲೆಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಪಡೆದು ಮೂರು ಶಿಶುಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬುಧವಾರ ತಿಳಿಸಿದ್ದಾರೆ. ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲಸಿಕೆ ನಿಗಾ ಅಧಿಕಾರಿ ಈಶ್ವರ ಗಡದ್ ಅವರು ವರದಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದಾರೆ. ವರದಿಯ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದ್ದಾರೆ.

ಇದನ್ನೂ ಓದಿ:ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

“ತಯಾರಿಕೆ ಘಟಕ ಹಾಗೂ ಪ್ರಯೋಗಾಲಯಗಳಿಗೆ ಬಾಟಲಿಗಳನ್ನು ಕಳುಹಿಸಲಾಗಿದ್ದು, ಅವರು ವರದಿ ನೀಡಿದ ನಂತರ ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ. ಚುಚ್ಚುಮದ್ದಿನ ಕಾರಣದಿಂದ ಉಂಟಾದ ಸಾವುಗಳಿಗೆ ಪರಿಹಾರ ಒದಗಿಸುವ ಪದ್ದತಿ ಇಲ್ಲ, ಆದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಅಡಿಯಲ್ಲಿ ಕೆಲವು ಮಾನದಂಡಗಳನ್ನು ಅನುಸರಿಸಿ ಪರಿಹಾರ ನೀಡಲಾಗುತ್ತದೆ. ಇದಕ್ಕಾಗಿ ಜಂಟಿ ಕಾರ್ಯದರ್ಶಿಗೆ ಶಿಫಾರಸು ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಫಾರ್ಮಾಸಿಸ್ಟ್‌ನಿಂದ ಲಸಿಕೆ ಬಾಟಲಿಗಳನ್ನು ಪಡೆದ ನರ್ಸ್ ಎಲ್ಲಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಹಾರ ಪದಾರ್ಥಗಳೊಂದಿಗೆ ಹೋಟೆಲ್‌ನ ಫ್ರಿಜ್‌ನಲ್ಲಿ ಇರಿಸಿದ್ದರು ಎಂದು ಮೂರು ಶಿಶುಗಳ ಸಾವಿನ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಬ್ಯಾಕ್ಟೀರಿಯಾದ ಸೋಂಕಿಗೆ ಕಾರಣವಾಗಿ ಮತ್ತು ಈ ಲಸಿಕೆಗಳನ್ನು ಪಡೆದ ಮೂರು ಶಿಶುಗಳು ಅಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದವು ಎಂದು ನ್ಯಾಶನಲ್ ಹೆರಾಲ್ಡ್‌ ವರದಿ ಮಾಡಿದೆ.

ಜನವರಿ 12 ರಂದು ಬೋಚಗಾಲ ಕ್ಯಾಂಪ್‌ನಲ್ಲಿ ಲಸಿಕೆ ಹಾಕಿದ ನಂತರ ಎರಡು ಸಾವುಗಳು ವರದಿಯಾಗಿದ್ದು, ಜನವರಿ 11 ರಂದು ರಾಮದುರ್ಗ ತಾಲೂಕಿನ ಮಲ್ಲಾಪುರ ಕ್ಯಾಂಪ್‌ನಲ್ಲಿ ಒಂದು ಸಾವು ವರದಿಯಾಗಿದೆ.

ಇದನ್ನೂ ಓದಿ:ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಬೋಚಗಾಲದಲ್ಲಿ 17 ಶಿಶುಗಳಿಗೆ ಲಸಿಕೆ ಹಾಕಲಾಗಿದ್ದು, ಮಲ್ಲಾಪುರದಲ್ಲಿ ನಾಲ್ಕು ಶಿಶುಗಳಿಗೆ ಲಸಿಕೆ ಹಾಕಲಾಗಿದೆ. ಒಂದು 18 ತಿಂಗಳ ಮಗು ಮತ್ತು ಇನ್ನೊಂದು 12 ತಿಂಗಳ ಮಗು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಅವರು ನರ್ಸ್ ಮತ್ತು ಫಾರ್ಮಾಸಿಸ್ಟ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿಷ್ಟಾಚಾರದ ಪ್ರಕಾರ ಲಸಿಕೆ ಬಾಟಲಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ (ಪಿಎಚ್‌ಸಿ) ಲಸಿಕಾ ಶಿಬಿರಗಳಿಗೆ ತೆಗೆದುಕೊಂಡು ಹೋಗಬೇಕು ಮತ್ತು ಪಿಎಚ್‌ಸಿಗೆ ಹಿಂತಿರುಗಿಸಬೇಕು ಎಂದು ಈಶ್ವರ ಗಡಾದ್ ಹೇಳಿದ್ದಾರೆ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

“ನರ್ಸ್ ಲಸಿಕೆ ಬಾಟಲಿಗಳನ್ನು ತೆಗೆದುಕೊಂಡು ಹೋಗಿ ಹೋಟೆಲ್ ಫ್ರಿಡ್ಜ್‌ನಲ್ಲಿ ಇಡಬಾರದಿತ್ತು. ಅವರು ಪಡೆದ ಎಲ್ಲಾ ಬಾಟಲುಗಳನ್ನು ಹಿಂದಕ್ಕೆ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿದೆ. ಇದು ದುರದೃಷ್ಟಕರ ಘಟನೆಯಾಗಿದೆ. ಆರೋಗ್ಯ ಇಲಾಖೆ ಇದರ ಬಗ್ಗೆ ಕಾಳಜಿ ವಹಿಸಿದ್ದು, ಪೋಷಕರು ತಮ್ಮ ಶಿಶುಗಳಿಗೆ ಲಸಿಕೆ ಹಾಕಲು ಮುಂದೆ ಬರಬೇಕು” ಎಂದು ಅವರು ಹೇಳಿದ್ದಾರೆ.

ಮೊದಲ ಡೋಸ್‌ ನೀಡಿದ ಕೆಲವೇ ಗಂಟೆಗಳ ನಂತರ ವಾಕರಿಕೆ ಮತ್ತು ವಾಂತಿ ಕಾಣಿಸಿಕೊಂಡು ಅದೇ ದಿನ ಪವಿತ್ರಾ ಹಲಗೂರ್ ಎಂಬ 13 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ.

ಉಮೇಶ ಕರಗುಂಡಿ ಎಂಬ 14 ತಿಂಗಳ ಮಗು, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಗೊಂಡರೂ, ಐಸಿಯುನಲ್ಲಿ ಜನವರಿ 15 ರಂದು ಸಾವನ್ನಪ್ಪಿದೆ. ಮಲ್ಲಾಪುರ ಕ್ಯಾಂಪ್‌ನಲ್ಲಿ ಲಸಿಕೆ ಹಾಕಿಸಿಕೊಂಡ 15 ತಿಂಗಳ ಮಗು ಚೇತನಾ ಕೂಡ ಜನವರಿ 15ರಂದು ಮೃತಪಟ್ಟಿದೆ.

15 ತಿಂಗಳ ಕೆಳಗಿನ ಮಕ್ಕಳಿಗೆ ದಡಾರ-ರುಬೆಲ್ಲಾ ವಿರುದ್ಧ ಮೊದಲ ಲಸಿಕೆ ಡೋಸ್ ನೀಡಲಾಗುತ್ತದೆ ಮತ್ತು 15 ತಿಂಗಳ ಮೇಲ್ಪಟ್ಟವರಿಗೆ ಎರಡನೇ ಲಸಿಕೆ ಡೋಸ್ ನೀಡಲಾಗುತ್ತದೆ.

ಇದನ್ನೂ ಓದಿ:2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...