Homeಕರ್ನಾಟಕದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

ದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

- Advertisement -
- Advertisement -

ಜಿಲ್ಲೆಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಪಡೆದು ಮೂರು ಶಿಶುಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬುಧವಾರ ತಿಳಿಸಿದ್ದಾರೆ. ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲಸಿಕೆ ನಿಗಾ ಅಧಿಕಾರಿ ಈಶ್ವರ ಗಡದ್ ಅವರು ವರದಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದಾರೆ. ವರದಿಯ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದ್ದಾರೆ.

ಇದನ್ನೂ ಓದಿ:ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

“ತಯಾರಿಕೆ ಘಟಕ ಹಾಗೂ ಪ್ರಯೋಗಾಲಯಗಳಿಗೆ ಬಾಟಲಿಗಳನ್ನು ಕಳುಹಿಸಲಾಗಿದ್ದು, ಅವರು ವರದಿ ನೀಡಿದ ನಂತರ ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ. ಚುಚ್ಚುಮದ್ದಿನ ಕಾರಣದಿಂದ ಉಂಟಾದ ಸಾವುಗಳಿಗೆ ಪರಿಹಾರ ಒದಗಿಸುವ ಪದ್ದತಿ ಇಲ್ಲ, ಆದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಅಡಿಯಲ್ಲಿ ಕೆಲವು ಮಾನದಂಡಗಳನ್ನು ಅನುಸರಿಸಿ ಪರಿಹಾರ ನೀಡಲಾಗುತ್ತದೆ. ಇದಕ್ಕಾಗಿ ಜಂಟಿ ಕಾರ್ಯದರ್ಶಿಗೆ ಶಿಫಾರಸು ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಫಾರ್ಮಾಸಿಸ್ಟ್‌ನಿಂದ ಲಸಿಕೆ ಬಾಟಲಿಗಳನ್ನು ಪಡೆದ ನರ್ಸ್ ಎಲ್ಲಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಹಾರ ಪದಾರ್ಥಗಳೊಂದಿಗೆ ಹೋಟೆಲ್‌ನ ಫ್ರಿಜ್‌ನಲ್ಲಿ ಇರಿಸಿದ್ದರು ಎಂದು ಮೂರು ಶಿಶುಗಳ ಸಾವಿನ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಬ್ಯಾಕ್ಟೀರಿಯಾದ ಸೋಂಕಿಗೆ ಕಾರಣವಾಗಿ ಮತ್ತು ಈ ಲಸಿಕೆಗಳನ್ನು ಪಡೆದ ಮೂರು ಶಿಶುಗಳು ಅಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದವು ಎಂದು ನ್ಯಾಶನಲ್ ಹೆರಾಲ್ಡ್‌ ವರದಿ ಮಾಡಿದೆ.

ಜನವರಿ 12 ರಂದು ಬೋಚಗಾಲ ಕ್ಯಾಂಪ್‌ನಲ್ಲಿ ಲಸಿಕೆ ಹಾಕಿದ ನಂತರ ಎರಡು ಸಾವುಗಳು ವರದಿಯಾಗಿದ್ದು, ಜನವರಿ 11 ರಂದು ರಾಮದುರ್ಗ ತಾಲೂಕಿನ ಮಲ್ಲಾಪುರ ಕ್ಯಾಂಪ್‌ನಲ್ಲಿ ಒಂದು ಸಾವು ವರದಿಯಾಗಿದೆ.

ಇದನ್ನೂ ಓದಿ:ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಬೋಚಗಾಲದಲ್ಲಿ 17 ಶಿಶುಗಳಿಗೆ ಲಸಿಕೆ ಹಾಕಲಾಗಿದ್ದು, ಮಲ್ಲಾಪುರದಲ್ಲಿ ನಾಲ್ಕು ಶಿಶುಗಳಿಗೆ ಲಸಿಕೆ ಹಾಕಲಾಗಿದೆ. ಒಂದು 18 ತಿಂಗಳ ಮಗು ಮತ್ತು ಇನ್ನೊಂದು 12 ತಿಂಗಳ ಮಗು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಅವರು ನರ್ಸ್ ಮತ್ತು ಫಾರ್ಮಾಸಿಸ್ಟ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿಷ್ಟಾಚಾರದ ಪ್ರಕಾರ ಲಸಿಕೆ ಬಾಟಲಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ (ಪಿಎಚ್‌ಸಿ) ಲಸಿಕಾ ಶಿಬಿರಗಳಿಗೆ ತೆಗೆದುಕೊಂಡು ಹೋಗಬೇಕು ಮತ್ತು ಪಿಎಚ್‌ಸಿಗೆ ಹಿಂತಿರುಗಿಸಬೇಕು ಎಂದು ಈಶ್ವರ ಗಡಾದ್ ಹೇಳಿದ್ದಾರೆ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

“ನರ್ಸ್ ಲಸಿಕೆ ಬಾಟಲಿಗಳನ್ನು ತೆಗೆದುಕೊಂಡು ಹೋಗಿ ಹೋಟೆಲ್ ಫ್ರಿಡ್ಜ್‌ನಲ್ಲಿ ಇಡಬಾರದಿತ್ತು. ಅವರು ಪಡೆದ ಎಲ್ಲಾ ಬಾಟಲುಗಳನ್ನು ಹಿಂದಕ್ಕೆ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿದೆ. ಇದು ದುರದೃಷ್ಟಕರ ಘಟನೆಯಾಗಿದೆ. ಆರೋಗ್ಯ ಇಲಾಖೆ ಇದರ ಬಗ್ಗೆ ಕಾಳಜಿ ವಹಿಸಿದ್ದು, ಪೋಷಕರು ತಮ್ಮ ಶಿಶುಗಳಿಗೆ ಲಸಿಕೆ ಹಾಕಲು ಮುಂದೆ ಬರಬೇಕು” ಎಂದು ಅವರು ಹೇಳಿದ್ದಾರೆ.

ಮೊದಲ ಡೋಸ್‌ ನೀಡಿದ ಕೆಲವೇ ಗಂಟೆಗಳ ನಂತರ ವಾಕರಿಕೆ ಮತ್ತು ವಾಂತಿ ಕಾಣಿಸಿಕೊಂಡು ಅದೇ ದಿನ ಪವಿತ್ರಾ ಹಲಗೂರ್ ಎಂಬ 13 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ.

ಉಮೇಶ ಕರಗುಂಡಿ ಎಂಬ 14 ತಿಂಗಳ ಮಗು, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಗೊಂಡರೂ, ಐಸಿಯುನಲ್ಲಿ ಜನವರಿ 15 ರಂದು ಸಾವನ್ನಪ್ಪಿದೆ. ಮಲ್ಲಾಪುರ ಕ್ಯಾಂಪ್‌ನಲ್ಲಿ ಲಸಿಕೆ ಹಾಕಿಸಿಕೊಂಡ 15 ತಿಂಗಳ ಮಗು ಚೇತನಾ ಕೂಡ ಜನವರಿ 15ರಂದು ಮೃತಪಟ್ಟಿದೆ.

15 ತಿಂಗಳ ಕೆಳಗಿನ ಮಕ್ಕಳಿಗೆ ದಡಾರ-ರುಬೆಲ್ಲಾ ವಿರುದ್ಧ ಮೊದಲ ಲಸಿಕೆ ಡೋಸ್ ನೀಡಲಾಗುತ್ತದೆ ಮತ್ತು 15 ತಿಂಗಳ ಮೇಲ್ಪಟ್ಟವರಿಗೆ ಎರಡನೇ ಲಸಿಕೆ ಡೋಸ್ ನೀಡಲಾಗುತ್ತದೆ.

ಇದನ್ನೂ ಓದಿ:2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....