Homeಕರ್ನಾಟಕದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

ದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

- Advertisement -
- Advertisement -

ಜಿಲ್ಲೆಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಪಡೆದು ಮೂರು ಶಿಶುಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬುಧವಾರ ತಿಳಿಸಿದ್ದಾರೆ. ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲಸಿಕೆ ನಿಗಾ ಅಧಿಕಾರಿ ಈಶ್ವರ ಗಡದ್ ಅವರು ವರದಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದಾರೆ. ವರದಿಯ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದ್ದಾರೆ.

ಇದನ್ನೂ ಓದಿ:ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

“ತಯಾರಿಕೆ ಘಟಕ ಹಾಗೂ ಪ್ರಯೋಗಾಲಯಗಳಿಗೆ ಬಾಟಲಿಗಳನ್ನು ಕಳುಹಿಸಲಾಗಿದ್ದು, ಅವರು ವರದಿ ನೀಡಿದ ನಂತರ ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ. ಚುಚ್ಚುಮದ್ದಿನ ಕಾರಣದಿಂದ ಉಂಟಾದ ಸಾವುಗಳಿಗೆ ಪರಿಹಾರ ಒದಗಿಸುವ ಪದ್ದತಿ ಇಲ್ಲ, ಆದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಅಡಿಯಲ್ಲಿ ಕೆಲವು ಮಾನದಂಡಗಳನ್ನು ಅನುಸರಿಸಿ ಪರಿಹಾರ ನೀಡಲಾಗುತ್ತದೆ. ಇದಕ್ಕಾಗಿ ಜಂಟಿ ಕಾರ್ಯದರ್ಶಿಗೆ ಶಿಫಾರಸು ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಫಾರ್ಮಾಸಿಸ್ಟ್‌ನಿಂದ ಲಸಿಕೆ ಬಾಟಲಿಗಳನ್ನು ಪಡೆದ ನರ್ಸ್ ಎಲ್ಲಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಹಾರ ಪದಾರ್ಥಗಳೊಂದಿಗೆ ಹೋಟೆಲ್‌ನ ಫ್ರಿಜ್‌ನಲ್ಲಿ ಇರಿಸಿದ್ದರು ಎಂದು ಮೂರು ಶಿಶುಗಳ ಸಾವಿನ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಬ್ಯಾಕ್ಟೀರಿಯಾದ ಸೋಂಕಿಗೆ ಕಾರಣವಾಗಿ ಮತ್ತು ಈ ಲಸಿಕೆಗಳನ್ನು ಪಡೆದ ಮೂರು ಶಿಶುಗಳು ಅಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದವು ಎಂದು ನ್ಯಾಶನಲ್ ಹೆರಾಲ್ಡ್‌ ವರದಿ ಮಾಡಿದೆ.

ಜನವರಿ 12 ರಂದು ಬೋಚಗಾಲ ಕ್ಯಾಂಪ್‌ನಲ್ಲಿ ಲಸಿಕೆ ಹಾಕಿದ ನಂತರ ಎರಡು ಸಾವುಗಳು ವರದಿಯಾಗಿದ್ದು, ಜನವರಿ 11 ರಂದು ರಾಮದುರ್ಗ ತಾಲೂಕಿನ ಮಲ್ಲಾಪುರ ಕ್ಯಾಂಪ್‌ನಲ್ಲಿ ಒಂದು ಸಾವು ವರದಿಯಾಗಿದೆ.

ಇದನ್ನೂ ಓದಿ:ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಬೋಚಗಾಲದಲ್ಲಿ 17 ಶಿಶುಗಳಿಗೆ ಲಸಿಕೆ ಹಾಕಲಾಗಿದ್ದು, ಮಲ್ಲಾಪುರದಲ್ಲಿ ನಾಲ್ಕು ಶಿಶುಗಳಿಗೆ ಲಸಿಕೆ ಹಾಕಲಾಗಿದೆ. ಒಂದು 18 ತಿಂಗಳ ಮಗು ಮತ್ತು ಇನ್ನೊಂದು 12 ತಿಂಗಳ ಮಗು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಅವರು ನರ್ಸ್ ಮತ್ತು ಫಾರ್ಮಾಸಿಸ್ಟ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿಷ್ಟಾಚಾರದ ಪ್ರಕಾರ ಲಸಿಕೆ ಬಾಟಲಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ (ಪಿಎಚ್‌ಸಿ) ಲಸಿಕಾ ಶಿಬಿರಗಳಿಗೆ ತೆಗೆದುಕೊಂಡು ಹೋಗಬೇಕು ಮತ್ತು ಪಿಎಚ್‌ಸಿಗೆ ಹಿಂತಿರುಗಿಸಬೇಕು ಎಂದು ಈಶ್ವರ ಗಡಾದ್ ಹೇಳಿದ್ದಾರೆ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

“ನರ್ಸ್ ಲಸಿಕೆ ಬಾಟಲಿಗಳನ್ನು ತೆಗೆದುಕೊಂಡು ಹೋಗಿ ಹೋಟೆಲ್ ಫ್ರಿಡ್ಜ್‌ನಲ್ಲಿ ಇಡಬಾರದಿತ್ತು. ಅವರು ಪಡೆದ ಎಲ್ಲಾ ಬಾಟಲುಗಳನ್ನು ಹಿಂದಕ್ಕೆ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿದೆ. ಇದು ದುರದೃಷ್ಟಕರ ಘಟನೆಯಾಗಿದೆ. ಆರೋಗ್ಯ ಇಲಾಖೆ ಇದರ ಬಗ್ಗೆ ಕಾಳಜಿ ವಹಿಸಿದ್ದು, ಪೋಷಕರು ತಮ್ಮ ಶಿಶುಗಳಿಗೆ ಲಸಿಕೆ ಹಾಕಲು ಮುಂದೆ ಬರಬೇಕು” ಎಂದು ಅವರು ಹೇಳಿದ್ದಾರೆ.

ಮೊದಲ ಡೋಸ್‌ ನೀಡಿದ ಕೆಲವೇ ಗಂಟೆಗಳ ನಂತರ ವಾಕರಿಕೆ ಮತ್ತು ವಾಂತಿ ಕಾಣಿಸಿಕೊಂಡು ಅದೇ ದಿನ ಪವಿತ್ರಾ ಹಲಗೂರ್ ಎಂಬ 13 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ.

ಉಮೇಶ ಕರಗುಂಡಿ ಎಂಬ 14 ತಿಂಗಳ ಮಗು, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಗೊಂಡರೂ, ಐಸಿಯುನಲ್ಲಿ ಜನವರಿ 15 ರಂದು ಸಾವನ್ನಪ್ಪಿದೆ. ಮಲ್ಲಾಪುರ ಕ್ಯಾಂಪ್‌ನಲ್ಲಿ ಲಸಿಕೆ ಹಾಕಿಸಿಕೊಂಡ 15 ತಿಂಗಳ ಮಗು ಚೇತನಾ ಕೂಡ ಜನವರಿ 15ರಂದು ಮೃತಪಟ್ಟಿದೆ.

15 ತಿಂಗಳ ಕೆಳಗಿನ ಮಕ್ಕಳಿಗೆ ದಡಾರ-ರುಬೆಲ್ಲಾ ವಿರುದ್ಧ ಮೊದಲ ಲಸಿಕೆ ಡೋಸ್ ನೀಡಲಾಗುತ್ತದೆ ಮತ್ತು 15 ತಿಂಗಳ ಮೇಲ್ಪಟ್ಟವರಿಗೆ ಎರಡನೇ ಲಸಿಕೆ ಡೋಸ್ ನೀಡಲಾಗುತ್ತದೆ.

ಇದನ್ನೂ ಓದಿ:2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...