Homeಮುಖಪುಟಅಕ್ಕಿ ಕದ್ದನೆಂದು ಆದಿವಾಸಿಯ ಹತ್ಯೆ ಪ್ರಕರಣ; 14 ಮಂದಿ ಮೇಲೆ ಆರೋಪ ಸಾಬೀತು

ಅಕ್ಕಿ ಕದ್ದನೆಂದು ಆದಿವಾಸಿಯ ಹತ್ಯೆ ಪ್ರಕರಣ; 14 ಮಂದಿ ಮೇಲೆ ಆರೋಪ ಸಾಬೀತು

- Advertisement -
- Advertisement -

2018ರಲ್ಲಿ ಪಾಲಕ್ಕಾಡ್ ಜಿಲ್ಲೆಯ ಅತ್ತಪ್ಪಾಡಿ ತಾಲೂಕಿನಲ್ಲಿ ಆದಿವಾಸಿ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ತಪ್ಪಿತಸ್ಥರೆಂದು ಕೇರಳದ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 5 ರಂದು ಪ್ರಕಟಿಸಲಿದೆ ಎಂದು ‘ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ.

ಸ್ಥಳೀಯ ಅಂಗಡಿಗಳಿಂದ ಅಕ್ಕಿ ಮತ್ತು ಕರಿಬೇವು ಕಳ್ಳತನ ಮಾಡಿದ್ದಾರೆ ಎಂಬ ಶಂಕೆಯ ಮೇರೆಗೆ 2018ರ ಫೆಬ್ರವರಿ 22 ರಂದು ಗುಂಪೊಂದು ಆದಿವಾಸಿ ಯುವಕ ಮಧು ಅವರನ್ನು ಹತ್ಯೆ ಮಾಡಿತ್ತು. ಆರೋಪಿಗಳು ಹತ್ಯೆಯನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು.

ಈ ಪ್ರಕರಣದಲ್ಲಿ ಕೇರಳ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಆಯುಧಗಳಿಂದ ಗಾಯಗೊಳಿಸುವಿಕೆ, ಕಾನೂನುಬಾಹಿರ ಸಭೆ ಮತ್ತು ಆಯುಧಗಳಿಂದ ಗಲಭೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರದ ತೀರ್ಪಿನಲ್ಲಿ, ನ್ಯಾಯಾಲಯವು ಅನೀಶ್ ಮತ್ತು ಅಬ್ದುಲ್ ಕರೀಂ ಎಂಬ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ. ಹಲ್ಲೆಯ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪ ಆರೋಪ ಅನೀಶ್ ಮೇಲಿದ್ದರೆ, ಮಧು ಅವರನ್ನು ಕಳ್ಳ ಎಂದು ಅಬ್ದುಲ್ ಆರೋಪಿಸಿದ್ದಾರೆ.

ಹುಸೇನ್, ಮರಕ್ಕರ್, ಶಂಶುದ್ದೀನ್, ರಾಧಾಕೃಷ್ಣನ್, ಅಬೂಬಕರ್, ಸಿದ್ದಿಕ್, ಉಬೈದ್, ನಜೀಬ್, ಜೈಜುಮೋನ್, ಸಜೀವ್, ಸತೀಶ್, ಹರೀಶ್, ಬಿಜು ಮತ್ತು ಮುನೀರ್ ಶಿಕ್ಷೆಗೊಳಗಾದವರು.

ಮೂವರು ಪ್ರಾಸಿಕ್ಯೂಷನ್ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದರಿಂದ ಪ್ರಕರಣದ ವಿಚಾರಣೆ ವಿಳಂಬವಾಯಿತು. ಪ್ರಾಸಿಕ್ಯೂಷನ್ ಮಂಡಿಸಿದ 27 ಸಾಕ್ಷಿಗಳಲ್ಲಿ ಕನಿಷ್ಠ 22 ಮಂದಿ ಪ್ರತಿಕೂಲವಾಗಿ ಮಾರ್ಪಟ್ಟಿದ್ದರು.

ನಾಲ್ಕು ವರ್ಷಗಳ ನಂತರ ವಿಚಾರಣೆ ಆರೋಪ

2018ರಲ್ಲಿ ನಡೆದ ಘಟನೆಯ ವಿಚಾರಣೆ ನಾಲ್ಕು ವರ್ಷಗಳಾದರೂ ಆರಂಭವಾಗಿಲ್ಲ ಎಂಬ ಆಕ್ಷೇಪ ಕೇಳಿಬಂದಿತ್ತು. “ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡಿದ್ದರು.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿತ್ತು. 2022ರ ಫೆಬ್ರವರಿ 22ಕ್ಕೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂದು ತಾಯಿ ಮಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...