Homeಮುಖಪುಟಅಕ್ಕಿ ಕದ್ದನೆಂದು ಆದಿವಾಸಿಯ ಹತ್ಯೆ ಪ್ರಕರಣ; 14 ಮಂದಿ ಮೇಲೆ ಆರೋಪ ಸಾಬೀತು

ಅಕ್ಕಿ ಕದ್ದನೆಂದು ಆದಿವಾಸಿಯ ಹತ್ಯೆ ಪ್ರಕರಣ; 14 ಮಂದಿ ಮೇಲೆ ಆರೋಪ ಸಾಬೀತು

- Advertisement -
- Advertisement -

2018ರಲ್ಲಿ ಪಾಲಕ್ಕಾಡ್ ಜಿಲ್ಲೆಯ ಅತ್ತಪ್ಪಾಡಿ ತಾಲೂಕಿನಲ್ಲಿ ಆದಿವಾಸಿ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ತಪ್ಪಿತಸ್ಥರೆಂದು ಕೇರಳದ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 5 ರಂದು ಪ್ರಕಟಿಸಲಿದೆ ಎಂದು ‘ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ.

ಸ್ಥಳೀಯ ಅಂಗಡಿಗಳಿಂದ ಅಕ್ಕಿ ಮತ್ತು ಕರಿಬೇವು ಕಳ್ಳತನ ಮಾಡಿದ್ದಾರೆ ಎಂಬ ಶಂಕೆಯ ಮೇರೆಗೆ 2018ರ ಫೆಬ್ರವರಿ 22 ರಂದು ಗುಂಪೊಂದು ಆದಿವಾಸಿ ಯುವಕ ಮಧು ಅವರನ್ನು ಹತ್ಯೆ ಮಾಡಿತ್ತು. ಆರೋಪಿಗಳು ಹತ್ಯೆಯನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು.

ಈ ಪ್ರಕರಣದಲ್ಲಿ ಕೇರಳ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಆಯುಧಗಳಿಂದ ಗಾಯಗೊಳಿಸುವಿಕೆ, ಕಾನೂನುಬಾಹಿರ ಸಭೆ ಮತ್ತು ಆಯುಧಗಳಿಂದ ಗಲಭೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರದ ತೀರ್ಪಿನಲ್ಲಿ, ನ್ಯಾಯಾಲಯವು ಅನೀಶ್ ಮತ್ತು ಅಬ್ದುಲ್ ಕರೀಂ ಎಂಬ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ. ಹಲ್ಲೆಯ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪ ಆರೋಪ ಅನೀಶ್ ಮೇಲಿದ್ದರೆ, ಮಧು ಅವರನ್ನು ಕಳ್ಳ ಎಂದು ಅಬ್ದುಲ್ ಆರೋಪಿಸಿದ್ದಾರೆ.

ಹುಸೇನ್, ಮರಕ್ಕರ್, ಶಂಶುದ್ದೀನ್, ರಾಧಾಕೃಷ್ಣನ್, ಅಬೂಬಕರ್, ಸಿದ್ದಿಕ್, ಉಬೈದ್, ನಜೀಬ್, ಜೈಜುಮೋನ್, ಸಜೀವ್, ಸತೀಶ್, ಹರೀಶ್, ಬಿಜು ಮತ್ತು ಮುನೀರ್ ಶಿಕ್ಷೆಗೊಳಗಾದವರು.

ಮೂವರು ಪ್ರಾಸಿಕ್ಯೂಷನ್ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದರಿಂದ ಪ್ರಕರಣದ ವಿಚಾರಣೆ ವಿಳಂಬವಾಯಿತು. ಪ್ರಾಸಿಕ್ಯೂಷನ್ ಮಂಡಿಸಿದ 27 ಸಾಕ್ಷಿಗಳಲ್ಲಿ ಕನಿಷ್ಠ 22 ಮಂದಿ ಪ್ರತಿಕೂಲವಾಗಿ ಮಾರ್ಪಟ್ಟಿದ್ದರು.

ನಾಲ್ಕು ವರ್ಷಗಳ ನಂತರ ವಿಚಾರಣೆ ಆರೋಪ

2018ರಲ್ಲಿ ನಡೆದ ಘಟನೆಯ ವಿಚಾರಣೆ ನಾಲ್ಕು ವರ್ಷಗಳಾದರೂ ಆರಂಭವಾಗಿಲ್ಲ ಎಂಬ ಆಕ್ಷೇಪ ಕೇಳಿಬಂದಿತ್ತು. “ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡಿದ್ದರು.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿತ್ತು. 2022ರ ಫೆಬ್ರವರಿ 22ಕ್ಕೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂದು ತಾಯಿ ಮಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...