Homeಮುಖಪುಟಅಕ್ಕಿ ಕದ್ದನೆಂದು ಆದಿವಾಸಿಯ ಹತ್ಯೆ ಪ್ರಕರಣ; 14 ಮಂದಿ ಮೇಲೆ ಆರೋಪ ಸಾಬೀತು

ಅಕ್ಕಿ ಕದ್ದನೆಂದು ಆದಿವಾಸಿಯ ಹತ್ಯೆ ಪ್ರಕರಣ; 14 ಮಂದಿ ಮೇಲೆ ಆರೋಪ ಸಾಬೀತು

- Advertisement -
- Advertisement -

2018ರಲ್ಲಿ ಪಾಲಕ್ಕಾಡ್ ಜಿಲ್ಲೆಯ ಅತ್ತಪ್ಪಾಡಿ ತಾಲೂಕಿನಲ್ಲಿ ಆದಿವಾಸಿ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ತಪ್ಪಿತಸ್ಥರೆಂದು ಕೇರಳದ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 5 ರಂದು ಪ್ರಕಟಿಸಲಿದೆ ಎಂದು ‘ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ.

ಸ್ಥಳೀಯ ಅಂಗಡಿಗಳಿಂದ ಅಕ್ಕಿ ಮತ್ತು ಕರಿಬೇವು ಕಳ್ಳತನ ಮಾಡಿದ್ದಾರೆ ಎಂಬ ಶಂಕೆಯ ಮೇರೆಗೆ 2018ರ ಫೆಬ್ರವರಿ 22 ರಂದು ಗುಂಪೊಂದು ಆದಿವಾಸಿ ಯುವಕ ಮಧು ಅವರನ್ನು ಹತ್ಯೆ ಮಾಡಿತ್ತು. ಆರೋಪಿಗಳು ಹತ್ಯೆಯನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು.

ಈ ಪ್ರಕರಣದಲ್ಲಿ ಕೇರಳ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಆಯುಧಗಳಿಂದ ಗಾಯಗೊಳಿಸುವಿಕೆ, ಕಾನೂನುಬಾಹಿರ ಸಭೆ ಮತ್ತು ಆಯುಧಗಳಿಂದ ಗಲಭೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರದ ತೀರ್ಪಿನಲ್ಲಿ, ನ್ಯಾಯಾಲಯವು ಅನೀಶ್ ಮತ್ತು ಅಬ್ದುಲ್ ಕರೀಂ ಎಂಬ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ. ಹಲ್ಲೆಯ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪ ಆರೋಪ ಅನೀಶ್ ಮೇಲಿದ್ದರೆ, ಮಧು ಅವರನ್ನು ಕಳ್ಳ ಎಂದು ಅಬ್ದುಲ್ ಆರೋಪಿಸಿದ್ದಾರೆ.

ಹುಸೇನ್, ಮರಕ್ಕರ್, ಶಂಶುದ್ದೀನ್, ರಾಧಾಕೃಷ್ಣನ್, ಅಬೂಬಕರ್, ಸಿದ್ದಿಕ್, ಉಬೈದ್, ನಜೀಬ್, ಜೈಜುಮೋನ್, ಸಜೀವ್, ಸತೀಶ್, ಹರೀಶ್, ಬಿಜು ಮತ್ತು ಮುನೀರ್ ಶಿಕ್ಷೆಗೊಳಗಾದವರು.

ಮೂವರು ಪ್ರಾಸಿಕ್ಯೂಷನ್ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದರಿಂದ ಪ್ರಕರಣದ ವಿಚಾರಣೆ ವಿಳಂಬವಾಯಿತು. ಪ್ರಾಸಿಕ್ಯೂಷನ್ ಮಂಡಿಸಿದ 27 ಸಾಕ್ಷಿಗಳಲ್ಲಿ ಕನಿಷ್ಠ 22 ಮಂದಿ ಪ್ರತಿಕೂಲವಾಗಿ ಮಾರ್ಪಟ್ಟಿದ್ದರು.

ನಾಲ್ಕು ವರ್ಷಗಳ ನಂತರ ವಿಚಾರಣೆ ಆರೋಪ

2018ರಲ್ಲಿ ನಡೆದ ಘಟನೆಯ ವಿಚಾರಣೆ ನಾಲ್ಕು ವರ್ಷಗಳಾದರೂ ಆರಂಭವಾಗಿಲ್ಲ ಎಂಬ ಆಕ್ಷೇಪ ಕೇಳಿಬಂದಿತ್ತು. “ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡಿದ್ದರು.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿತ್ತು. 2022ರ ಫೆಬ್ರವರಿ 22ಕ್ಕೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂದು ತಾಯಿ ಮಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...